ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಭಾರಿ ಮಳೆ: ಕೊಳ್ಳೇಗಾಲ- ತಮಿಳುನಾಡು ಹೆದ್ದಾರಿ ಬಂದ್

Last Updated 1 ಸೆಪ್ಟೆಂಬರ್ 2022, 13:28 IST
ಅಕ್ಷರ ಗಾತ್ರ

ಚಾಮರಾಜನಗರ: ಬಿಆರ್ ಟಿ ಅರಣ್ಯ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಕೊಳ್ಳೇಗಾಲ -ತಮಿಳುನಾಡು ಅಂತರರಾಜ್ಯ ಹೆದ್ದಾರಿಯಲ್ಲಿ ಬರುವ ಹನೂರು ತಾಲ್ಲೂಕಿನ ಒಡೆಯರಪಾಳ್ಯ ಸಮೀಪದ ಮಸಕತ್ತಿ ಉಡುತೊರೆ ಹಳ್ಳ ತುಂಬಿ ಹರಿಯುತ್ತಿದ್ದು, ಗುರುವಾರ ವಾಹನ ಸಂಚಾರ ಸ್ಥಗಿತಗೊಂಡಿದೆ.

ಪಿ.ಜಿ.ಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಹಳ್ಳಕ್ಕೆ ನಿರ್ಮಿಸಿರುವ ಹಳೆ ಸೇತುವೆ ಮುಳುಗು ಸೇತುವೆಯಾಗಿದ್ದು, ಸಂಜೆ ಹೊತ್ತಿಗೆ ನೀರಿನ ಪ್ರಮಾಣ ಹೆಚ್ಚಾಗಿದ್ದು, ಪೂರ್ಣ ಮುಳುಗಡೆಯಾಗಿದೆ.

ಇದರಿಂದಾಗಿ ವಾಹನ ಸವಾರರು, ಶಾಲೆ ಮಕ್ಕಳು ಶಿಕ್ಷಕರು ಪರದಾಡುವಂತಾಯಿತು.

ಹೊಸ ಸೇತುವೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಆಗಿ ಆರು ತಿಂಗಳಾದರೂ ಕಾಮಗಾರಿ ಆರಂಭವಾಗಿಲ್ಲ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT