<p><strong>ಚಾಮರಾಜನಗರ</strong>: ರಾಜ್ಯಕ್ಕೆ ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶನಿವಾರ ಬಿರುಸಿನ ಮಳೆ ಸುರಿಯಿತು. ಬೆಳಿಗ್ಗೆ ತಂಪುಗಾಳಿಯ ಜೊತೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಧ್ಯಾಹ್ನದ ಹೊತ್ತಿಗೆ ಬಿರುಸಾದ ಮಳೆ ಆರಂಭವಾಯಿತು. </p>.<p>ಕೆಲವು ತಾಸು ನಿರಂತರವಾಗಿ ಸುರಿದ ಮಳೆಯಿಂದ ನಗರದ ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ನಗರದಲ್ಲಿ ಚರಂಡಿ ತ್ಯಾಜ್ಯ ರಸ್ತೆಗೆ ಹರಿದು ನಾಗರಿಕರು ಕಿರಿಕಿರಿ ಅನುಭವಿಸಿದರು.</p>.<p><strong>ತೋಟಗಾರಿಕಾ ಬೆಳೆಗೆ ಹಾನಿ:</strong></p>.<p>ಮಳೆಯ ಜೊತೆಗೆ ಗಾಳಿಯ ಅಬ್ಬರ ಹೆಚ್ಚಾಗಿದ್ದರಿಂದ ಜಿಲ್ಲೆಯಾದ್ಯಂತ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬಾಳೆಯ ಗಿಡಗಳು ಧರೆಗುರುಳಿದ್ದು ಅಪಾರ ನಷ್ಟ ಸಂಭವಿಸಿದೆ. ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ರೈತ ವಿರೂಪಾಕ್ಷ ಅವರ ತೋಟದಲ್ಲಿ ಬೆಳೆಯಲಾಗಿದ್ದ 500 ಬಾಳೆಯ ಗಿಡಗಳು ನೆಲಕ್ಕುರುಳಿವೆ. </p>.<p>ಬಾಳೆ ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿದ್ದ ಬಾಳೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾಳಾಗಿದ್ದು ರೈತ ವಿರೂಪಾಕ್ಷ ಕಂಗಾಲಾಗಿದ್ದಾರೆ. ಸುಮಾರು ₹ 3 ರಿಂದ ₹ 4 ಲಕ್ಷ ನಷ್ಟ ಹಾನಿ ಅಂದಾಜಿಸಲಾಗಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ರಾಜ್ಯಕ್ಕೆ ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶನಿವಾರ ಬಿರುಸಿನ ಮಳೆ ಸುರಿಯಿತು. ಬೆಳಿಗ್ಗೆ ತಂಪುಗಾಳಿಯ ಜೊತೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಧ್ಯಾಹ್ನದ ಹೊತ್ತಿಗೆ ಬಿರುಸಾದ ಮಳೆ ಆರಂಭವಾಯಿತು. </p>.<p>ಕೆಲವು ತಾಸು ನಿರಂತರವಾಗಿ ಸುರಿದ ಮಳೆಯಿಂದ ನಗರದ ರಸ್ತೆಗಳು ಜಲಾವೃತಗೊಂಡು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಆಗಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಯಿತು. ನಗರದಲ್ಲಿ ಚರಂಡಿ ತ್ಯಾಜ್ಯ ರಸ್ತೆಗೆ ಹರಿದು ನಾಗರಿಕರು ಕಿರಿಕಿರಿ ಅನುಭವಿಸಿದರು.</p>.<p><strong>ತೋಟಗಾರಿಕಾ ಬೆಳೆಗೆ ಹಾನಿ:</strong></p>.<p>ಮಳೆಯ ಜೊತೆಗೆ ಗಾಳಿಯ ಅಬ್ಬರ ಹೆಚ್ಚಾಗಿದ್ದರಿಂದ ಜಿಲ್ಲೆಯಾದ್ಯಂತ ತೋಟಗಾರಿಕಾ ಬೆಳೆಗಳಿಗೆ ಹಾನಿಯಾಗಿದೆ. ಗುಂಡ್ಲುಪೇಟೆ ತಾಲ್ಲೂಕಿನಲ್ಲಿ ಬಾಳೆಯ ಗಿಡಗಳು ಧರೆಗುರುಳಿದ್ದು ಅಪಾರ ನಷ್ಟ ಸಂಭವಿಸಿದೆ. ತಾಲ್ಲೂಕಿನ ಮಂಚಹಳ್ಳಿ ಗ್ರಾಮದಲ್ಲಿ ರೈತ ವಿರೂಪಾಕ್ಷ ಅವರ ತೋಟದಲ್ಲಿ ಬೆಳೆಯಲಾಗಿದ್ದ 500 ಬಾಳೆಯ ಗಿಡಗಳು ನೆಲಕ್ಕುರುಳಿವೆ. </p>.<p>ಬಾಳೆ ಕೆಲವೇ ದಿನಗಳಲ್ಲಿ ಕಟಾವು ಮಾಡಬೇಕಿದ್ದ ಬಾಳೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾಳಾಗಿದ್ದು ರೈತ ವಿರೂಪಾಕ್ಷ ಕಂಗಾಲಾಗಿದ್ದಾರೆ. ಸುಮಾರು ₹ 3 ರಿಂದ ₹ 4 ಲಕ್ಷ ನಷ್ಟ ಹಾನಿ ಅಂದಾಜಿಸಲಾಗಿದ್ದು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿನೀಡಿ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>ಮುಂಗಾರು ಪ್ರವೇಶ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು ರೆಡ್ ಅಲರ್ಟ್ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>