<p><strong>ಚಾಮರಾಜನಗರ: </strong>ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೀರಭದ್ರಸ್ವಾಮಿ, ಕಾರ್ಯದರ್ಶಿಯಾಗಿ ಕಿರಣ್ರಾಜ್ ಭಾನುವಾರ ಆಯ್ಕೆಯಾದರು.</p>.<p>ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಚುನಾವಣೆ ಭಾನುವಾರ ನಡೆಯಿತು. ಜಿಲ್ಲೆಯ ಐದು ತಾಲ್ಲೂಕುಗಳಿಂದ 35 ಶಿಕ್ಷಕ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಿದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವೀರಭದ್ರಸ್ವಾಮಿ 24 ಮತಗಳನ್ನು ಪಡೆದು ಪ್ರತಿಸ್ಪರ್ಧಿ ತ್ಯಾಗರಾಜಮೂರ್ತಿ ಅವರನ್ನು ಸೋಲಿಸಿದರು. ತ್ಯಾಗರಾಜಮೂರ್ತಿಗೆ 11 ಮತಗಳು ಬಿದ್ದವು.</p>.<p>ಕಾರ್ಯದರ್ಶಿಯಾಗಿ ಆಯ್ಕೆಯಾದ ಕಿರಣ್ರಾಜ್ 24 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ 11 ಮತಗಳನ್ನು ಪಡೆದರು. ಖಜಾಂಚಿಯಾಗಿ ಮಹೇಶ್ಕುಮಾರ್, ಉಪಾಧ್ಯಕ್ಷರಾಗಿ ಶಾಂತರಾಜ್ ಆಯ್ಕೆಯಾದರು.</p>.<p>ಚುನಾವಣಾಧಿಕಾರಿಯಾಗಿ ಬಿ.ಮಹದೇವಸ್ವಾಮಿ ಕಾರ್ಯನಿರ್ವಹಿಸಿದರು.</p>.<p>ಶಿಕ್ಷಕರಾದ ಅರ್ಕಪ್ಪ, ನಿರ್ಮಲಾ, ಮಹದೇವಸ್ವಾಮಿ ಎಸ್, ವಿಜಯಕುಮಾರ್, ತಾಲ್ಲೂಕುಗಳ ಅಧ್ಯಕ್ಷರಾದ ಎಸ್. ಮಂಜುನಾಥ್ (ಚಾಮರಾಜನಗರ), ಗುರುಪ್ರಸಾದ್ (ಗುಂಡ್ಲುಪೇಟೆ), ಅಕ್ಬರ್ (ಕೊಳ್ಳೇಗಾಲ), ಅಶೋಕ್ (ಹನೂರು), ಮಹದೇವ್ (ಯಳಂದೂರು) ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ: </strong>ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೀರಭದ್ರಸ್ವಾಮಿ, ಕಾರ್ಯದರ್ಶಿಯಾಗಿ ಕಿರಣ್ರಾಜ್ ಭಾನುವಾರ ಆಯ್ಕೆಯಾದರು.</p>.<p>ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಚುನಾವಣೆ ಭಾನುವಾರ ನಡೆಯಿತು. ಜಿಲ್ಲೆಯ ಐದು ತಾಲ್ಲೂಕುಗಳಿಂದ 35 ಶಿಕ್ಷಕ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಿದರು.</p>.<p>ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವೀರಭದ್ರಸ್ವಾಮಿ 24 ಮತಗಳನ್ನು ಪಡೆದು ಪ್ರತಿಸ್ಪರ್ಧಿ ತ್ಯಾಗರಾಜಮೂರ್ತಿ ಅವರನ್ನು ಸೋಲಿಸಿದರು. ತ್ಯಾಗರಾಜಮೂರ್ತಿಗೆ 11 ಮತಗಳು ಬಿದ್ದವು.</p>.<p>ಕಾರ್ಯದರ್ಶಿಯಾಗಿ ಆಯ್ಕೆಯಾದ ಕಿರಣ್ರಾಜ್ 24 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ 11 ಮತಗಳನ್ನು ಪಡೆದರು. ಖಜಾಂಚಿಯಾಗಿ ಮಹೇಶ್ಕುಮಾರ್, ಉಪಾಧ್ಯಕ್ಷರಾಗಿ ಶಾಂತರಾಜ್ ಆಯ್ಕೆಯಾದರು.</p>.<p>ಚುನಾವಣಾಧಿಕಾರಿಯಾಗಿ ಬಿ.ಮಹದೇವಸ್ವಾಮಿ ಕಾರ್ಯನಿರ್ವಹಿಸಿದರು.</p>.<p>ಶಿಕ್ಷಕರಾದ ಅರ್ಕಪ್ಪ, ನಿರ್ಮಲಾ, ಮಹದೇವಸ್ವಾಮಿ ಎಸ್, ವಿಜಯಕುಮಾರ್, ತಾಲ್ಲೂಕುಗಳ ಅಧ್ಯಕ್ಷರಾದ ಎಸ್. ಮಂಜುನಾಥ್ (ಚಾಮರಾಜನಗರ), ಗುರುಪ್ರಸಾದ್ (ಗುಂಡ್ಲುಪೇಟೆ), ಅಕ್ಬರ್ (ಕೊಳ್ಳೇಗಾಲ), ಅಶೋಕ್ (ಹನೂರು), ಮಹದೇವ್ (ಯಳಂದೂರು) ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>