ಚಾಮರಾಜನಗರ: ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೀರಭದ್ರಸ್ವಾಮಿ, ಕಾರ್ಯದರ್ಶಿಯಾಗಿ ಕಿರಣ್ರಾಜ್ ಭಾನುವಾರ ಆಯ್ಕೆಯಾದರು.
ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಚುನಾವಣೆ ಭಾನುವಾರ ನಡೆಯಿತು. ಜಿಲ್ಲೆಯ ಐದು ತಾಲ್ಲೂಕುಗಳಿಂದ 35 ಶಿಕ್ಷಕ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಿದರು.
ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವೀರಭದ್ರಸ್ವಾಮಿ 24 ಮತಗಳನ್ನು ಪಡೆದು ಪ್ರತಿಸ್ಪರ್ಧಿ ತ್ಯಾಗರಾಜಮೂರ್ತಿ ಅವರನ್ನು ಸೋಲಿಸಿದರು. ತ್ಯಾಗರಾಜಮೂರ್ತಿಗೆ 11 ಮತಗಳು ಬಿದ್ದವು.
ಕಾರ್ಯದರ್ಶಿಯಾಗಿ ಆಯ್ಕೆಯಾದ ಕಿರಣ್ರಾಜ್ 24 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ 11 ಮತಗಳನ್ನು ಪಡೆದರು. ಖಜಾಂಚಿಯಾಗಿ ಮಹೇಶ್ಕುಮಾರ್, ಉಪಾಧ್ಯಕ್ಷರಾಗಿ ಶಾಂತರಾಜ್ ಆಯ್ಕೆಯಾದರು.