ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೌಢಶಾಲಾ ಶಿಕ್ಷಕರ ಸಂಘ: ವೀರಭದ್ರಸ್ವಾಮಿ ಅಧ್ಯಕ್ಷ

Last Updated 17 ಜುಲೈ 2022, 14:17 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲಾ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷರಾಗಿ ವೀರಭದ್ರಸ್ವಾಮಿ, ಕಾರ್ಯದರ್ಶಿಯಾಗಿ ಕಿರಣ್‌ರಾಜ್ ಭಾನುವಾರ ಆಯ್ಕೆಯಾದರು.

ನಗರದ ಸರ್ಕಾರಿ ಬಾಲಕರ ಪ್ರೌಢಶಾಲೆಯಲ್ಲಿ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಚುನಾವಣೆ ಭಾನುವಾರ ನಡೆಯಿತು. ಜಿಲ್ಲೆಯ ಐದು ತಾಲ್ಲೂಕುಗಳಿಂದ 35 ಶಿಕ್ಷಕ ಪ್ರತಿನಿಧಿಗಳು ಮತದಾನದಲ್ಲಿ ಭಾಗವಹಿಸಿ ಹಕ್ಕು ಚಲಾಯಿಸಿದರು.

ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ವೀರಭದ್ರಸ್ವಾಮಿ 24 ಮತಗಳನ್ನು ಪಡೆದು ಪ್ರತಿಸ್ಪರ್ಧಿ ತ್ಯಾಗರಾಜಮೂರ್ತಿ ಅವರನ್ನು ಸೋಲಿಸಿದರು. ತ್ಯಾಗರಾಜಮೂರ್ತಿಗೆ 11 ಮತಗಳು ಬಿದ್ದವು.

ಕಾರ್ಯದರ್ಶಿಯಾಗಿ ಆಯ್ಕೆಯಾದ ಕಿರಣ್‌ರಾಜ್ 24 ಮತಗಳನ್ನು ಪಡೆದರೆ, ಅವರ ಪ್ರತಿಸ್ಪರ್ಧಿ 11 ಮತಗಳನ್ನು ‍ಪಡೆದರು. ಖಜಾಂಚಿಯಾಗಿ ಮಹೇಶ್‌ಕುಮಾರ್, ಉಪಾಧ್ಯಕ್ಷರಾಗಿ ಶಾಂತರಾಜ್ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಬಿ.ಮಹದೇವಸ್ವಾಮಿ ಕಾರ್ಯನಿರ್ವಹಿಸಿದರು.

ಶಿಕ್ಷಕರಾದ ಅರ್ಕಪ್ಪ, ನಿರ್ಮಲಾ, ಮಹದೇವಸ್ವಾಮಿ ಎಸ್, ವಿಜಯಕುಮಾರ್, ತಾಲ್ಲೂಕುಗಳ ಅಧ್ಯಕ್ಷರಾದ ಎಸ್. ಮಂಜುನಾಥ್ (ಚಾಮರಾಜನಗರ), ಗುರುಪ್ರಸಾದ್ (ಗುಂಡ್ಲುಪೇಟೆ), ಅಕ್ಬರ್ (ಕೊಳ್ಳೇಗಾಲ), ಅಶೋಕ್ (ಹನೂರು), ಮಹದೇವ್ (ಯಳಂದೂರು) ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT