ಕೇರಳದ ಗಡಿಗೆ ಹೊಂದಿಕೊಂಡಿರುವ ಗುಂಡ್ಲುಪೇಟೆ ತಾಲ್ಲೂಕಿನ ಕಣ್ಣೇಗಾಲ, ಬೇರಂಬಾಡಿ, ಭೀಮನಬೀಡು, ಕೂತನೂರು ಸೇರಿದಂತೆ ಸುತ್ತಮುತ್ತಲಿನ 21 ಶಾಲೆಗಳಲ್ಲಿ ತರಗತಿಗಳು ನಡೆಯಲಿಲ್ಲ. ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಗಡಿ ಭಾಗದ ಶಾಲೆಗಳಲ್ಲಿ ತರಗತಿಗಳು ನಡೆಯಲಿಲ್ಲ. ಆದರೆ, ಜನವರಿ 1ರಿಂದ ಆರಂಭವಾಗಿರುವ ವಿದ್ಯಾಗಮ ಕಾರ್ಯಕ್ರಮ ಎಂದಿನಂತೆ ನಡೆಯಿತು.