ಈ ಕುರಿತು ತಹಶೀಲ್ದಾರ್ ಟಿ.ರಮೇಶ್ ಬಾಬು ಪತ್ರಿಕೆಗೆ ಪ್ರತಿಕ್ರಿಯೆ ನೀಡಿ, ‘ದೂರದ ಊರುಗಳಿಂದ ಬರುವ ಪ್ರವಾಸಿಗರು, ಭಕ್ತರು ಹಾಗೂ ಸಾರ್ವಜನಿಕರಿಗೆ 3ರ ಒಳಗೆ ಬಸ್ ಸಂಚಾರ ನಿಷೇಧ ಆದೇಶದಿಂದ ಸಮಸ್ಯೆಯಾಗುತ್ತದೆ ಎಂದು ದೂರುಗಳು ಕೇಳಿಬಂದ ಹಿನ್ನೆಲೆ, ಪ್ರವಾಸಿಗರ ಅನುಕೂಲದ ಉದ್ದೇಶದಿಂದ ಹೊಸ ಆದೇಶ ಹಿಂಪಡೆಯಲಾಗಿದೆ’ ಎಂದು ತಿಳಿಸಿದರು.