‘ಭಾರತ ಮತ್ತು ಭಾರತೀಯತೆ, ಮಾತೆ ಮತ್ತು ಮಾತೃತ್ವದ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಹಾಗೆಯೇ ಹಿಂದೂ ಮತ್ತು ಹಿಂದುತ್ವದ ನಡುವೆ ಭೇದ ಮಾಡಲು ಬರುವುದೇ ಇಲ್ಲ. ಆದ್ದರಿಂದ ರಾಹುಲ್ ಗಾಂಧಿ ಮತ್ತು ಸಲ್ಮಾನ ಖುರ್ಷಿದ್ ಅವರು ಹಿಂದೂ ಮತ್ತು ಹಿಂದುತ್ವದ ನಡುವೆ ವ್ಯತ್ಯಾಸವಿದೆ ಎಂದು ಎಷ್ಟೇ ಸ್ಪಷ್ಟೀಕರಣ ನೀಡಿದರೂ ಹಿಂದೂಗಳು ಅದಕ್ಕೆ ಮರುಳಾಗುವುದಿಲ್ಲ. ಕಾಂಗ್ರೆಸ್ ನಾಯಕರಿಗೆ ಹಿಂದೂ ಧರ್ಮದ ಮೇಲೆ ನಿಜವಾದ ಪ್ರೀತಿ ಇದ್ದರೆ, ಭಗವಾನ್ ಶ್ರೀರಾಮ ಮತ್ತು ಶ್ರೀಕೃಷ್ಣ ಕಾಲ್ಪನಿಕ ವ್ಯಕ್ತಿಗಳು. ಕೇಸರಿ ಭಯೋತ್ಪಾದನೆಯಿಂದ ದೇಶಕ್ಕೆ ಅಪಾಯವಿದೆ ಎಂದು ಹೇಳಿ ಹಿಂದೂ ಧರ್ಮವನ್ನು ಅವಮಾನಿಸುತ್ತಿರಲಿಲ್ಲ. ಅಲ್ಲದೇ,ಕಾಶ್ಮೀರ, ಪಾಕಿಸ್ತಾನ, ಬಾಂಗ್ಲಾದೇಶಗಳಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಗಳ ವಿರುದ್ಧವೂ ಅದು ಧ್ವನಿ ಎತ್ತುತ್ತಿತ್ತು; ಆದರೆ, ಇದ್ಯಾವುದನ್ನೂ ಮಾಡದೇ ಇದೀಗ ಚುನಾವಣೆಯ ಕಾರಣದಿಂದ ಹಿಂದೂ ಮತಗಳ ಮೇಲೆ ಕಣ್ಣಿಟ್ಟು ದೇವಸ್ಥಾನ-ಪ್ರವಾಸವನ್ನು ಆರಂಭಿಸಿದ್ದಾರೆ’ ಎಂದು ಮನವಿ ಪತ್ರದಲ್ಲಿ ದೂರಲಾಗಿದೆ.