<p><strong>ಕೊಳ್ಳೇಗಾಲ</strong>: ನಗರದಲ್ಲಿ ಗೃಹಬಳಕೆ ಅನಿಲ ಸಿಲಿಂಡರ್ ದುರ್ಬಳಕೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಿದ್ದಾರೆ.</p>.<p>ಗೃಹಬಳಕೆಗೆ ಮಾತ್ರ ಸೀಮಿತವಾಗಿರುವ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಎಗ್ಗಿಲ್ಲದೆ ಬಳಸಲಾಗುತ್ತಿತ್ತು. ಬೀದಿ ಬದಿ ಟೀ ಅಂಗಡಿ, ಹೋಟೆಲ್ ಬೇಕರಿ ಸೇರಿ ಅನೇಕ ಉದ್ಯಮಗಳ ಬಳಕೆಗೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಪ್ರಜಾವಾಣಿ ಪತ್ರಿಕೆ ಮಾರ್ಚ್13ರ ಬುಧವಾರ ಸಂಚಿಕೆಯಲ್ಲಿ ‘ಅಡುಗೆ ಅನಿಲ ಸಿಲಿಂಡರ್ ದುರ್ಬಳಕೆ’ ಎಂಬ ತಲೆಬರಹದ ಅಡಿಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಇದಕ್ಕೆ ಸ್ಪಂದಿಸಿ ಎಚ್ಚೆತ್ತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಇಂದು ನಗರದಲ್ಲಿ ಅನೇಕ ಹೋಟೆಲ್, ಬೇಕರಿ ಸೇರಿ ಸುಮಾರು 15ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ 8 ಗೃಹಬಳಕೆ ಸಿಲಿಂಡರ್ ವಶಪಡಿಸಿಕೊಂಡರು. ಇಲಾಖೆಯ ಇನ್ ಸ್ಪೆಕ್ಟರ್ ಪ್ರಸಾದ್ ಹಾಗೂ ನಗರಸಭೆ ಆರೋಗ್ಯ ನಿರೀಕ್ಷಕ ಚೇತನ್ ನೇತೃತ್ವದಲ್ಲಿ ದಾಳಿ ನಡೆಸಿದರು.</p>.<p>‘ಇನ್ನು ಮುಂದೆ ಯಾರೂ ಗೃಹಬಳಕೆ ಸಿಲಿಂಡರ್ ವಾಣಿಜ್ಯಕ್ಕೆ ಬಳಸುವಂತಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಕಂಡು ಬಂದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಇನ್ ಸ್ಪೆಕ್ಟರ್ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ನಗರದಲ್ಲಿ ಗೃಹಬಳಕೆ ಅನಿಲ ಸಿಲಿಂಡರ್ ದುರ್ಬಳಕೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಕಡಿವಾಣ ಹಾಕಿದ್ದಾರೆ.</p>.<p>ಗೃಹಬಳಕೆಗೆ ಮಾತ್ರ ಸೀಮಿತವಾಗಿರುವ ಸಿಲಿಂಡರ್ ವಾಣಿಜ್ಯ ಉದ್ದೇಶಕ್ಕೆ ಎಗ್ಗಿಲ್ಲದೆ ಬಳಸಲಾಗುತ್ತಿತ್ತು. ಬೀದಿ ಬದಿ ಟೀ ಅಂಗಡಿ, ಹೋಟೆಲ್ ಬೇಕರಿ ಸೇರಿ ಅನೇಕ ಉದ್ಯಮಗಳ ಬಳಕೆಗೆ ಸಿಲಿಂಡರ್ ಬಳಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಪ್ರಜಾವಾಣಿ ಪತ್ರಿಕೆ ಮಾರ್ಚ್13ರ ಬುಧವಾರ ಸಂಚಿಕೆಯಲ್ಲಿ ‘ಅಡುಗೆ ಅನಿಲ ಸಿಲಿಂಡರ್ ದುರ್ಬಳಕೆ’ ಎಂಬ ತಲೆಬರಹದ ಅಡಿಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು.</p>.<p>ಇದಕ್ಕೆ ಸ್ಪಂದಿಸಿ ಎಚ್ಚೆತ್ತ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಇಂದು ನಗರದಲ್ಲಿ ಅನೇಕ ಹೋಟೆಲ್, ಬೇಕರಿ ಸೇರಿ ಸುಮಾರು 15ಕ್ಕೂ ಹೆಚ್ಚು ಅಂಗಡಿಗಳ ಮೇಲೆ ದಾಳಿ ನಡೆಸಿದರು. ದಾಳಿ ವೇಳೆ 8 ಗೃಹಬಳಕೆ ಸಿಲಿಂಡರ್ ವಶಪಡಿಸಿಕೊಂಡರು. ಇಲಾಖೆಯ ಇನ್ ಸ್ಪೆಕ್ಟರ್ ಪ್ರಸಾದ್ ಹಾಗೂ ನಗರಸಭೆ ಆರೋಗ್ಯ ನಿರೀಕ್ಷಕ ಚೇತನ್ ನೇತೃತ್ವದಲ್ಲಿ ದಾಳಿ ನಡೆಸಿದರು.</p>.<p>‘ಇನ್ನು ಮುಂದೆ ಯಾರೂ ಗೃಹಬಳಕೆ ಸಿಲಿಂಡರ್ ವಾಣಿಜ್ಯಕ್ಕೆ ಬಳಸುವಂತಿಲ್ಲ. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಕಂಡು ಬಂದರೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ’ ಎಂದು ಇನ್ ಸ್ಪೆಕ್ಟರ್ ಪ್ರಸಾದ್ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>