ಹುಂಡೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿ ಮಾತನಾಡಿ, ‘ಹೊಸತನಕ್ಕೆ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ನೀರನ್ನು ಸಂಗ್ರಹಿಸಬೇಕಾಗಿರುವ ಜವಾಬ್ದಾರಿ ಎಲ್ಲರ ಮೇಲಿದೆ. ಸಾವಿರ ಅಡಿ ಆಳಕ್ಕೆ ಅಂತರ್ಜಲ ಮಟ್ಟ ಕುಸಿದಿದೆ. ತಾಲ್ಲೂಕು ವ್ಯಾಪ್ತಿಯಲ್ಲಿ ಕೊಳವೆಬಾವಿ ಕೊರೆಸುವುದನ್ನು ನಿಷೇಧಿಸಲಾಗಿದ್ದು ಕೆಂಪು ವಲಯ ಎಂದು ಗುರುತಿಸಲಾಗಿದೆ’ ಎಂದರು.
ಜಿಲ್ಲಾ ಯೋಜನಾ ವ್ಯವಸ್ಥಾಪಕಿ ಆಶಾ ರಮೇಶ್ ಮಾತನಾಡಿ, ‘ಗ್ರಾಮದಲ್ಲಿ ಶೇ 100ರಷ್ಟು ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ. ಶಾಲೆ, ಅಂಗನವಾಡಿ ಹಾಗೂ ಗ್ರಾಮ ಪಂಚಾಯಿತಿ ಕಟ್ಟಡಗಳು ಸೇರಿದಂತೆ ಇತರೆ ಸರ್ಕಾರಿ ಕಟ್ಟಡಗಳಿಗೆ ನಲ್ಲಿ ಸಂಪರ್ಕ ಕಲ್ಪಿಸಲಾಗಿದೆ. ಕಾಮಗಾರಿ ಸಂಪೂರ್ಣ ಮುಕ್ತಾಯಗೊಂಡ ನಂತರ ‘ಹರ್ ಘರ್ ಜಲ್’ ಪ್ರಮಾಣ ಪತ್ರವನ್ನು ದೃಢೀಕರಿಸಿ ಗ್ರಾಮವನ್ನು ‘ಹರ್ ಘರ್ ಜಲ್’ ಗ್ರಾಮವಾಗಿ ಘೋಷಣೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿಯ ನೀರು ಮತ್ತು ನೈರ್ಮಲ್ಯ ಸಮಿತಿಯು ನಿರ್ವಹಣೆ ಮಾಡಬೇಕಾಗುತ್ತದೆ’ ಎಂದು ತಿಳಿಸಿದರು.