ಅಧಿಕಾರಿಗಳೇ ಕಾರಣ: ‘ವಾರದಿಂದ ಪಾಳ್ಯ ಗ್ರಾಮದ ದೊಡ್ಡಕೆರೆಯ ಏರಿಗೆ ಹಾನಿಯಾಗಿರುವ ಬಗ್ಗೆ ಸ್ಥಳೀಯರು ಕಾವೇರಿ ನೀರಾವರಿ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಆದರೆ, ಯಾವ ಅಧಿಕಾರಿಗಳೂ ತಲೆಕೆಡಿಸಿಕೊಳ್ಳಲಿಲ್ಲ. ಶನಿವಾರ ಬೆಳಿಗ್ಗೆ 6 ಗಂಟೆಯ ಹೊತ್ತಿಗೆ ಮಾಹಿತಿ ನೀಡಿದ್ದರೂ, ಅಧಿಕಾರಿಗಳು ಬಂದು ನೋಡಲಿಲ್ಲ, ಕೆರೆ ನೀರು ನಿಲ್ಲಿಸುವ ಕೆಲಸವನ್ನು ಮಾಡಲಿಲ್ಲ. ಇದರಿಂದ ನೂರಾರು ಎಕರೆ ಜಾಲಾವೃತಗೊಂಡಿದೆ’ ಎಂದು ರೈತ ಲಿಂಗರಾಜು ದೂರಿದರು.