ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ನಾನು ಸತತ ನಾಲ್ಕನೇ ಬಾರಿ ಗೆದ್ದಿದ್ದೇನೆ. ಹಿರಿಯ ಶಾಸಕನಾಗಿದ್ದೇನೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಸಚಿವ ಸ್ಥಾನ ನೀಡುವ ಭರವಸೆ ನೀಡಿದ್ದಾರೆ. ಲಾಬಿ ಮಾಡುವ ವ್ಯಕ್ತಿ ನಾನಲ್ಲ. ಹಿರಿಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಕೂಡ ನನಗೆ ಮಂತ್ರಿ ಸ್ಥಾನವನ್ನು ಕೊಡಿಸುವಲ್ಲಿ ಉತ್ಸುಕರಾಗಿದ್ದಾರೆ’ ಎಂದರು.