<p><strong>ಗುಂಡ್ಲುಪೇಟೆ: </strong>ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಪೌರಾಡಳಿತ ನಿರ್ದೇಶಕಿ ಬಿ.ಬಿ.ಕಾವೇರಿ ಅವರು ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕಾಡಾನೆಗೆ ದೇವಾಲಯದ ಪ್ರಸಾದ ನೀಡುತ್ತಿರುವ ಫೋಟೊ ವೈರಲ್ ಆಗಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.</p>.<p>ಇಲಾಖೆ ಕರ್ತವ್ಯಕ್ಕಾಗಿ ಬುಧವಾರ (ಜ.13) ಕಾವೇರಿ ಅವರು ಗುಂಡ್ಲುಪೇಟೆಗೆ ಭೇಟಿ ನೀಡಿದ್ದರು. ಸಂಜೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿದ್ದರು.</p>.<p>ಅವರು ಭೇಟಿ ನೀಡಿದ್ದ ಸಮಯದಲ್ಲಿ ದೇವಾಲಯದ ಆವರಣದ ಬಳಿ ಸಲಗವೊಂದಿತ್ತು.ದೇವಾಲಯದ ಅರ್ಚಕರು ಆನೆಗೆ ತೆಂಗಿನಕಾಯಿ ತೋರಿಸಿ ದೇವಾಲಯದ ಹತ್ತಿರಕ್ಕೆ ಬರುವಂತೆ ಮಾಡುವ ವಿಡಿಯೊ ಕೂಡ ವೈರಲ್ ಆಗಿದ್ದು, ದೇವಾಲಯದ ಬಳಿ ಬಂದ ಆನೆಗೆ ಕಾವೇರಿ ಅವರು ಪ್ರಸಾದ (ಬೆಲ್ಲ, ಬಾಳೆಹಣ್ಣು) ತಿನಿಸಿದ್ದಾರೆ.</p>.<p>ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ವನ್ಯಜೀವಿಗಳಿಗೆ ಆಹಾರ ನೀಡುವುದು ವನ್ಯಜೀವಿ ಸಂರಕ್ಷಣಾ ನಿಯಮಗಳ ಉಲ್ಲಂಘನೆಯಾಗುತ್ತದೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಅವರು, ‘ವೈರಲ್ ಆಗಿರುವ ವಿಡಿಯೊ, ಫೋಟೊ ಗಮನಿಸಿದ್ದೇನೆ. ಕಾವೇರಿ ಅವರು ಬರುವ ಮಾಹಿತಿ ನಮಗೆ ಇರಲಿಲ್ಲ. ಆ ಸಮಯದಲ್ಲಿ ಅಲ್ಲಿ ನಮ್ಮ ಸಿಬ್ಬಂದಿಯೂ ಅಲ್ಲಿರಲಿಲ್ಲ. ವನ್ಯಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ. ಈ ಪ್ರಕರಣದಲ್ಲಿ ದೇವಾಲಯದ ಸಿಬ್ಬಂದಿ ಪಾತ್ರದ ಬಗ್ಗೆ ಪರಿಶೀಲನೆ ನಡೆಲಾಗುತ್ತಿದೆ. ಮುಂದೆ ಯಾವ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಹೇಳಿದರು.</p>.<p>‘ಎರಡು ವರ್ಷಗಳ ಹಿಂದೆಯೂ ದೇವಾಲಯದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ನಂತರ ಆನೆಯನ್ನು ಕಾಡಿಗೆ ಓಡಿಸಲಾಗಿತ್ತು’ ಎಂದು ಅವರು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/district/bengaluru-city/beginning-of-graduate-classes-but-lack-of-guest-lecturers-in-colleges-796549.html" itemprop="url">ಪದವಿ ತರಗತಿಗಳ ಆರಂಭ: ಎದ್ದು ಕಂಡ ಅತಿಥಿ ಉಪನ್ಯಾಸಕರ ಕೊರತೆ </a></p>.<p class="Subhead"><strong>ಪರಿಚಿತ ಆನೆ: </strong>ಈ ಆನೆಯು ದೇವಾಲಯದ ಆವರಣದಲ್ಲಿ ಸುತ್ತಾಡುತ್ತಿರುತ್ತದೆ. ಆಗಾಗ ಪ್ರವಾಸಿಗರಿಗೂ ಕಾಣಸಿಗುತ್ತದೆ. ಈ ಹಿಂದೆಯೂ ಆನೆಗೆ ದೇವಾಲಯದ ಪ್ರಸಾದವನ್ನು ನೀಡುತ್ತಿರುವ ಬಗ್ಗೆ ವಿವಾದ ಉಂಟಾಗಿತ್ತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಕಾಡಿಗೆ ಓಡಿಸಿದ್ದರು. ಈಗ ಮತ್ತೆ ಕಾಣಿಸಿಕೊಳ್ಳಲು ಆರಂಭಿಸಿದೆ. ಇದುವರೆಗೂ ಆನೆ ಯಾರಿಗೂ ತೊಂದರೆ ಮಾಡಿಲ್ಲ.</p>.<p>‘ಕಾಡಿನಲ್ಲಿ ಇರುವ ಆನೆಗಳು ಸಾಕಾನೆಗಳ ರೀತಿ ಅಲ್ಲ. ಸ್ನೇಹದಿಂದ ವರ್ತಿಸಿದಂತೆ ಕಂಡರೂ ಯಾವ ಕ್ಷಣದಲ್ಲಿ ಏನು ಮಾಡುತ್ತವೆಯೋ ಎಂದು ಹೇಳುವುದಕ್ಕೆ ಆಗುವುದಿಲ್ಲ. ಹಾಗಾಗಿ, ಅರ್ಚಕರಾಗಲಿ, ಪ್ರವಾಸಿಗರಾಗಲಿ ಯಾರೂ ಆನೆಯ ಬಳಿ ಹೋಗಬಾರದು. ಆಹಾರ ನೀಡಲೇಬಾರದು’ ಎಂದು ಹೇಳುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.</p>.<p>‘ಅರಣ್ಯ ಇಲಾಖೆ ಇಂತಹದ್ದಕ್ಕೆ ಅವಕಾಶ ನೀಡಬಾರದು. ದೇವಾಲಯದ ಸಿಬ್ಬಂದಿ ಆನೆ ಅಥವಾ ಇನ್ಯಾವುದೇ ಪ್ರಾಣಿಗಳಿಗೆ ಆಹಾರಗಳನ್ನು ನೀಡುವುದಕ್ಕೆ ನಿರ್ಬಂಧ ವಿಧಿಸಬೇಕು’ ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ: </strong>ಚಾಮರಾಜನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಪೌರಾಡಳಿತ ನಿರ್ದೇಶಕಿ ಬಿ.ಬಿ.ಕಾವೇರಿ ಅವರು ತಾಲ್ಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕಾಡಾನೆಗೆ ದೇವಾಲಯದ ಪ್ರಸಾದ ನೀಡುತ್ತಿರುವ ಫೋಟೊ ವೈರಲ್ ಆಗಿದ್ದು, ಪರಿಸರವಾದಿಗಳಿಂದ ಆಕ್ಷೇಪ ವ್ಯಕ್ತವಾಗಿದೆ.</p>.<p>ಇಲಾಖೆ ಕರ್ತವ್ಯಕ್ಕಾಗಿ ಬುಧವಾರ (ಜ.13) ಕಾವೇರಿ ಅವರು ಗುಂಡ್ಲುಪೇಟೆಗೆ ಭೇಟಿ ನೀಡಿದ್ದರು. ಸಂಜೆ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳಿದ್ದರು.</p>.<p>ಅವರು ಭೇಟಿ ನೀಡಿದ್ದ ಸಮಯದಲ್ಲಿ ದೇವಾಲಯದ ಆವರಣದ ಬಳಿ ಸಲಗವೊಂದಿತ್ತು.ದೇವಾಲಯದ ಅರ್ಚಕರು ಆನೆಗೆ ತೆಂಗಿನಕಾಯಿ ತೋರಿಸಿ ದೇವಾಲಯದ ಹತ್ತಿರಕ್ಕೆ ಬರುವಂತೆ ಮಾಡುವ ವಿಡಿಯೊ ಕೂಡ ವೈರಲ್ ಆಗಿದ್ದು, ದೇವಾಲಯದ ಬಳಿ ಬಂದ ಆನೆಗೆ ಕಾವೇರಿ ಅವರು ಪ್ರಸಾದ (ಬೆಲ್ಲ, ಬಾಳೆಹಣ್ಣು) ತಿನಿಸಿದ್ದಾರೆ.</p>.<p>ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಗೆ ಬರುತ್ತದೆ. ವನ್ಯಜೀವಿಗಳಿಗೆ ಆಹಾರ ನೀಡುವುದು ವನ್ಯಜೀವಿ ಸಂರಕ್ಷಣಾ ನಿಯಮಗಳ ಉಲ್ಲಂಘನೆಯಾಗುತ್ತದೆ.</p>.<p>ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಅವರು, ‘ವೈರಲ್ ಆಗಿರುವ ವಿಡಿಯೊ, ಫೋಟೊ ಗಮನಿಸಿದ್ದೇನೆ. ಕಾವೇರಿ ಅವರು ಬರುವ ಮಾಹಿತಿ ನಮಗೆ ಇರಲಿಲ್ಲ. ಆ ಸಮಯದಲ್ಲಿ ಅಲ್ಲಿ ನಮ್ಮ ಸಿಬ್ಬಂದಿಯೂ ಅಲ್ಲಿರಲಿಲ್ಲ. ವನ್ಯಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ. ಈ ಪ್ರಕರಣದಲ್ಲಿ ದೇವಾಲಯದ ಸಿಬ್ಬಂದಿ ಪಾತ್ರದ ಬಗ್ಗೆ ಪರಿಶೀಲನೆ ನಡೆಲಾಗುತ್ತಿದೆ. ಮುಂದೆ ಯಾವ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಹೇಳಿದರು.</p>.<p>‘ಎರಡು ವರ್ಷಗಳ ಹಿಂದೆಯೂ ದೇವಾಲಯದಲ್ಲಿ ಇದೇ ರೀತಿಯ ಘಟನೆ ನಡೆದಿತ್ತು. ನಂತರ ಆನೆಯನ್ನು ಕಾಡಿಗೆ ಓಡಿಸಲಾಗಿತ್ತು’ ಎಂದು ಅವರು ಹೇಳಿದರು.</p>.<p>ಇದನ್ನೂ ಓದಿ:<a href="https://www.prajavani.net/district/bengaluru-city/beginning-of-graduate-classes-but-lack-of-guest-lecturers-in-colleges-796549.html" itemprop="url">ಪದವಿ ತರಗತಿಗಳ ಆರಂಭ: ಎದ್ದು ಕಂಡ ಅತಿಥಿ ಉಪನ್ಯಾಸಕರ ಕೊರತೆ </a></p>.<p class="Subhead"><strong>ಪರಿಚಿತ ಆನೆ: </strong>ಈ ಆನೆಯು ದೇವಾಲಯದ ಆವರಣದಲ್ಲಿ ಸುತ್ತಾಡುತ್ತಿರುತ್ತದೆ. ಆಗಾಗ ಪ್ರವಾಸಿಗರಿಗೂ ಕಾಣಸಿಗುತ್ತದೆ. ಈ ಹಿಂದೆಯೂ ಆನೆಗೆ ದೇವಾಲಯದ ಪ್ರಸಾದವನ್ನು ನೀಡುತ್ತಿರುವ ಬಗ್ಗೆ ವಿವಾದ ಉಂಟಾಗಿತ್ತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಅದನ್ನು ಕಾಡಿಗೆ ಓಡಿಸಿದ್ದರು. ಈಗ ಮತ್ತೆ ಕಾಣಿಸಿಕೊಳ್ಳಲು ಆರಂಭಿಸಿದೆ. ಇದುವರೆಗೂ ಆನೆ ಯಾರಿಗೂ ತೊಂದರೆ ಮಾಡಿಲ್ಲ.</p>.<p>‘ಕಾಡಿನಲ್ಲಿ ಇರುವ ಆನೆಗಳು ಸಾಕಾನೆಗಳ ರೀತಿ ಅಲ್ಲ. ಸ್ನೇಹದಿಂದ ವರ್ತಿಸಿದಂತೆ ಕಂಡರೂ ಯಾವ ಕ್ಷಣದಲ್ಲಿ ಏನು ಮಾಡುತ್ತವೆಯೋ ಎಂದು ಹೇಳುವುದಕ್ಕೆ ಆಗುವುದಿಲ್ಲ. ಹಾಗಾಗಿ, ಅರ್ಚಕರಾಗಲಿ, ಪ್ರವಾಸಿಗರಾಗಲಿ ಯಾರೂ ಆನೆಯ ಬಳಿ ಹೋಗಬಾರದು. ಆಹಾರ ನೀಡಲೇಬಾರದು’ ಎಂದು ಹೇಳುತ್ತಾರೆ ಅರಣ್ಯ ಇಲಾಖೆ ಅಧಿಕಾರಿಗಳು.</p>.<p>‘ಅರಣ್ಯ ಇಲಾಖೆ ಇಂತಹದ್ದಕ್ಕೆ ಅವಕಾಶ ನೀಡಬಾರದು. ದೇವಾಲಯದ ಸಿಬ್ಬಂದಿ ಆನೆ ಅಥವಾ ಇನ್ಯಾವುದೇ ಪ್ರಾಣಿಗಳಿಗೆ ಆಹಾರಗಳನ್ನು ನೀಡುವುದಕ್ಕೆ ನಿರ್ಬಂಧ ವಿಧಿಸಬೇಕು’ ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>