ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಬಂಡೀಪುರ ಹುಲಿ ಯೋಜನೆ ನಿರ್ದೇಶಕ ಎಸ್.ಆರ್.ನಟೇಶ್ ಅವರು, ‘ವೈರಲ್ ಆಗಿರುವ ವಿಡಿಯೊ, ಫೋಟೊ ಗಮನಿಸಿದ್ದೇನೆ. ಕಾವೇರಿ ಅವರು ಬರುವ ಮಾಹಿತಿ ನಮಗೆ ಇರಲಿಲ್ಲ. ಆ ಸಮಯದಲ್ಲಿ ಅಲ್ಲಿ ನಮ್ಮ ಸಿಬ್ಬಂದಿಯೂ ಅಲ್ಲಿರಲಿಲ್ಲ. ವನ್ಯಪ್ರಾಣಿಗಳಿಗೆ ಆಹಾರ ನೀಡುವಂತಿಲ್ಲ. ಈ ಪ್ರಕರಣದಲ್ಲಿ ದೇವಾಲಯದ ಸಿಬ್ಬಂದಿ ಪಾತ್ರದ ಬಗ್ಗೆ ಪರಿಶೀಲನೆ ನಡೆಲಾಗುತ್ತಿದೆ. ಮುಂದೆ ಯಾವ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ಪರಿಶೀಲನೆ ನಡೆಸಲಾಗುವುದು’ ಎಂದು ಹೇಳಿದರು.