<p><strong>ಚಾಮರಾಜನಗರ</strong>: ಈದ್ ಉಲ್ ಫಿತ್ರ್ ಹಬ್ಬವನ್ನು ಮುಸ್ಲಿಮರು ನಗರದಲ್ಲಿ ಸರಳವಾಗಿ ಶುಕ್ರವಾರ ಆಚರಿಸಿದರು.</p>.<p>ಮನೆಮನೆಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ಶುಭಾಶಯ ವಿನಿಯಮ ಮಾಡಿಕೊಂಡರು. ಕೊರೊನಾ ಸೋಂಕಿನ ಕಾರಣದಿಂದ ಸಾಮೂಹಿಕ ಪ್ರಾರ್ಥನೆ ನಗರದಲ್ಲಿ ನಡೆಯಲಿಲ್ಲ.</p>.<p>ಕಳೆದ ವರ್ಷವೂ ಹಬ್ಬವನ್ನು ಕೊರೊನಾ ಕಾರಣದಿಂದಾಗಿ ವಿಜೃಂಭಣೆಯಿಂದ ಆಚರಿಸಿರಲಿಲ್ಲ. ಹೊಸ ಬಟ್ಟೆ ಖರೀದಿಗೆ ಜವಳಿ ಅಂಗಡಿಗಳು ಬಂದ್ ಆಗಿದ್ದವು. ಹೀಗಾಗಿ, ಹಲವು ಮಂದಿ ಹೊಸ ಧಿರಿಸಿನಿಂದ ವಂಚಿತರಾದರು.</p>.<p>ಈ ಕುರಿತು ‘ಪ್ರಜಾವಾಣಿ’ ಧರ್ಮಗುರು ಮೌಲಾನಾ ಅಬ್ದುಲ್ ಖಾದೀರ್ ಅವರನ್ನು ಸಂಪರ್ಕಿಸಿದಾಗ, ಅವರು ಹಬ್ಬದ ಸರಳ ಆಚರಣೆ ಎಲ್ಲೆಡೆ ನಡೆದಿದೆ ಎಂದರು.</p>.<p>‘ಈ ಬಾರಿಯೂ ಹಬ್ಬವನ್ನು ಮನೆಯಯಲ್ಲಿಯೇ ಆಚರಿಸಿದ್ದೇವೆ. ಕೊರೊನಾ ವೈರಸ್ನಿಂದ ಮುಕ್ತಿಕೊಡಿ. ಭಾರತದಲ್ಲಿ ಹಾಗೂ ಇಡೀ ವಿಶ್ವದಲ್ಲಿ ಈ ಕೊರೊನಾ ವೈರಸ್ನಿಂದ ಉಂಟಾಗಿರುವ ಎಲ್ಲ ತೊಂದರೆಗಳೂ ನಿವಾರಣೆಯಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ’ ಎಂದು ಹೇಳಿದರು.</p>.<p>‘ಅನೇಕ ಜನರ ಮನೆಯಲ್ಲಿ ಹೊಸ ಬಟ್ಟೆ ಖರೀದಿಯೇ ನಡೆದಿಲ್ಲ. ಮನೆಯಲ್ಲಿರುವ ಒಂದು ಒಳ್ಳೆಯ ಬಟ್ಟೆಯನ್ನೇ ಹಾಕಿಕೊಂಡು ಹಬ್ಬ ಆಚರಿಸಿಕೊಂಡಿದ್ದೇವೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಹೇರಿರುವ ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಸಾಮೂಹಿಕ ಪ್ರಾರ್ಥನೆ ಈ ಬಾರಿಯೂ ನಡೆದಿಲ್ಲ’ ಎಂದು ತಿಳಿಸಿದರು.</p>.<p>ನಗರದಲ್ಲಿರುವ 20ಕ್ಕೂ ಹೆಚ್ಚು ಮಸೀದಿಗಳಲ್ಲಿ ಧರ್ಮಗುರುಗಳಷ್ಟೇ ಕೋವಿಡ್ ನಿಯಮ ಪಾಲಿಸಿ ಪ್ರಾರ್ಥನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ</strong>: ಈದ್ ಉಲ್ ಫಿತ್ರ್ ಹಬ್ಬವನ್ನು ಮುಸ್ಲಿಮರು ನಗರದಲ್ಲಿ ಸರಳವಾಗಿ ಶುಕ್ರವಾರ ಆಚರಿಸಿದರು.</p>.<p>ಮನೆಮನೆಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು, ಶುಭಾಶಯ ವಿನಿಯಮ ಮಾಡಿಕೊಂಡರು. ಕೊರೊನಾ ಸೋಂಕಿನ ಕಾರಣದಿಂದ ಸಾಮೂಹಿಕ ಪ್ರಾರ್ಥನೆ ನಗರದಲ್ಲಿ ನಡೆಯಲಿಲ್ಲ.</p>.<p>ಕಳೆದ ವರ್ಷವೂ ಹಬ್ಬವನ್ನು ಕೊರೊನಾ ಕಾರಣದಿಂದಾಗಿ ವಿಜೃಂಭಣೆಯಿಂದ ಆಚರಿಸಿರಲಿಲ್ಲ. ಹೊಸ ಬಟ್ಟೆ ಖರೀದಿಗೆ ಜವಳಿ ಅಂಗಡಿಗಳು ಬಂದ್ ಆಗಿದ್ದವು. ಹೀಗಾಗಿ, ಹಲವು ಮಂದಿ ಹೊಸ ಧಿರಿಸಿನಿಂದ ವಂಚಿತರಾದರು.</p>.<p>ಈ ಕುರಿತು ‘ಪ್ರಜಾವಾಣಿ’ ಧರ್ಮಗುರು ಮೌಲಾನಾ ಅಬ್ದುಲ್ ಖಾದೀರ್ ಅವರನ್ನು ಸಂಪರ್ಕಿಸಿದಾಗ, ಅವರು ಹಬ್ಬದ ಸರಳ ಆಚರಣೆ ಎಲ್ಲೆಡೆ ನಡೆದಿದೆ ಎಂದರು.</p>.<p>‘ಈ ಬಾರಿಯೂ ಹಬ್ಬವನ್ನು ಮನೆಯಯಲ್ಲಿಯೇ ಆಚರಿಸಿದ್ದೇವೆ. ಕೊರೊನಾ ವೈರಸ್ನಿಂದ ಮುಕ್ತಿಕೊಡಿ. ಭಾರತದಲ್ಲಿ ಹಾಗೂ ಇಡೀ ವಿಶ್ವದಲ್ಲಿ ಈ ಕೊರೊನಾ ವೈರಸ್ನಿಂದ ಉಂಟಾಗಿರುವ ಎಲ್ಲ ತೊಂದರೆಗಳೂ ನಿವಾರಣೆಯಾಗಲಿ ಎಂದು ಪ್ರಾರ್ಥನೆ ಮಾಡಿದ್ದೇವೆ’ ಎಂದು ಹೇಳಿದರು.</p>.<p>‘ಅನೇಕ ಜನರ ಮನೆಯಲ್ಲಿ ಹೊಸ ಬಟ್ಟೆ ಖರೀದಿಯೇ ನಡೆದಿಲ್ಲ. ಮನೆಯಲ್ಲಿರುವ ಒಂದು ಒಳ್ಳೆಯ ಬಟ್ಟೆಯನ್ನೇ ಹಾಕಿಕೊಂಡು ಹಬ್ಬ ಆಚರಿಸಿಕೊಂಡಿದ್ದೇವೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಹೇರಿರುವ ಎಲ್ಲ ನಿಯಮಗಳನ್ನು ಪಾಲಿಸಿದ್ದೇವೆ. ಸಾಮೂಹಿಕ ಪ್ರಾರ್ಥನೆ ಈ ಬಾರಿಯೂ ನಡೆದಿಲ್ಲ’ ಎಂದು ತಿಳಿಸಿದರು.</p>.<p>ನಗರದಲ್ಲಿರುವ 20ಕ್ಕೂ ಹೆಚ್ಚು ಮಸೀದಿಗಳಲ್ಲಿ ಧರ್ಮಗುರುಗಳಷ್ಟೇ ಕೋವಿಡ್ ನಿಯಮ ಪಾಲಿಸಿ ಪ್ರಾರ್ಥನೆ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>