<p><strong>ಸಂತೇಮರಹಳ್ಳಿ</strong>: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಸಮುದಾಯಗಳ ಕುಂದು-ಕೊರತೆ ಸಭೆ ಈಚೆಗೆ ನಡೆಯಿತು.</p>.<p>ಈ ಸಂದರ್ಭದಲ್ಲಿ ಪಿಎಸ್ಐ ತಾಜುದ್ದೀನ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರದಲ್ಲಿ ಪೊಲೀಸ್ ಠಾಣೆ ತೆರೆಯಲಾಗಿದೆ. ಈ ಠಾಣೆಯು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮಸ್ಯೆಗಳಿಗೆ ಸಂಬಂಧಿಸಿರುತ್ತದೆ. ಈ ಸಮುದಾಯಕ್ಕೆ ದೌರ್ಜನ್ಯ ಹಾಗೂ ಕಿರುಕುಳಗಳು ಕಂಡು ಬಂದಾಗ ಈ ಠಾಣೆಯಲ್ಲಿ ದೂರು ನೀಡಬಹುದು. ಒಂದು ವೇಳೆ ಠಾಣೆಗೆ ಹೋಗಲು ಸಾಧ್ಯವಿಲ್ಲದಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು’ಎಂದರು.</p>.<p>‘ತನಿಖೆ ಮಾತ್ರ ಎಸ್ಸಿ ಎಸ್ಟಿ ದೌರ್ಜನ್ಯದ ಪೊಲೀಸ್ ಠಾಣೆಯಲ್ಲಿಯೇ ನಡೆಯುತ್ತದೆ. ಈ ತಿಂಗಳು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗಳು ಜಿಲ್ಲೆಯಾಧ್ಯಂತ ನಡೆಯುತ್ತಿರುವುದರಿಂದ ಮದ್ಯ ಮಾರಾಟ ನಿಷೇಧಿಸಬೇಕು. ಜಯಂತಿಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಅಚ್ಚುಕಟ್ಟಾಗಿ ನಡೆಸಬೇಕು. ಜೊತೆಗೆ ಎಸ್ಸಿ ಎಸ್ಟಿ ಬಡಾವಣೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಾಗ ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಬೇಕು’ಎಂದರು.</p>.<p>‘ಗ್ರಾಮಗಳಲ್ಲಿ ಜೂಜು ಹಾಗೂ ಅಕ್ರಮ ಮದ್ಯ ಮಾರಾಟ ಕಂಡು ಬಂದಾಗ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.</p>.<p>ಪಿಎಸ್ಐ ಚಂದ್ರಶೇಖರ್, ಕಾನ್ಸ್ಟಬಲ್ಗಳಾದ ರಮೇಶ್, ರಾಜೇಶ್ವರಿ, ಗ್ರಾಮಪಂಚಾಯಿತಿ ಸದಸ್ಯ ಶಿವಯ್ಯ, ಮುಖಂಡರಾದ ಕಮರವಾಡಿ ರೇವಣ್ಣ, ಅನಿಲ್, ಮಹದೇವಸ್ವಾಮಿ, ಮಣಿಕಂಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಂತೇಮರಹಳ್ಳಿ</strong>: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಸಮುದಾಯಗಳ ಕುಂದು-ಕೊರತೆ ಸಭೆ ಈಚೆಗೆ ನಡೆಯಿತು.</p>.<p>ಈ ಸಂದರ್ಭದಲ್ಲಿ ಪಿಎಸ್ಐ ತಾಜುದ್ದೀನ್ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಜಿಲ್ಲಾ ಕೇಂದ್ರದಲ್ಲಿ ಪೊಲೀಸ್ ಠಾಣೆ ತೆರೆಯಲಾಗಿದೆ. ಈ ಠಾಣೆಯು ಪರಿಶಿಷ್ಟ ಜಾತಿ ಮತ್ತು ವರ್ಗಗಳ ಸಮಸ್ಯೆಗಳಿಗೆ ಸಂಬಂಧಿಸಿರುತ್ತದೆ. ಈ ಸಮುದಾಯಕ್ಕೆ ದೌರ್ಜನ್ಯ ಹಾಗೂ ಕಿರುಕುಳಗಳು ಕಂಡು ಬಂದಾಗ ಈ ಠಾಣೆಯಲ್ಲಿ ದೂರು ನೀಡಬಹುದು. ಒಂದು ವೇಳೆ ಠಾಣೆಗೆ ಹೋಗಲು ಸಾಧ್ಯವಿಲ್ಲದಿದ್ದರೆ ಹತ್ತಿರದ ಪೊಲೀಸ್ ಠಾಣೆಗೆ ದೂರು ನೀಡಬಹುದು’ಎಂದರು.</p>.<p>‘ತನಿಖೆ ಮಾತ್ರ ಎಸ್ಸಿ ಎಸ್ಟಿ ದೌರ್ಜನ್ಯದ ಪೊಲೀಸ್ ಠಾಣೆಯಲ್ಲಿಯೇ ನಡೆಯುತ್ತದೆ. ಈ ತಿಂಗಳು ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆಗಳು ಜಿಲ್ಲೆಯಾಧ್ಯಂತ ನಡೆಯುತ್ತಿರುವುದರಿಂದ ಮದ್ಯ ಮಾರಾಟ ನಿಷೇಧಿಸಬೇಕು. ಜಯಂತಿಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಅಚ್ಚುಕಟ್ಟಾಗಿ ನಡೆಸಬೇಕು. ಜೊತೆಗೆ ಎಸ್ಸಿ ಎಸ್ಟಿ ಬಡಾವಣೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ಕಂಡು ಬಂದಾಗ ತಕ್ಷಣ ಪೊಲೀಸ್ ಠಾಣೆಗೆ ದೂರು ನೀಡಬೇಕು’ಎಂದರು.</p>.<p>‘ಗ್ರಾಮಗಳಲ್ಲಿ ಜೂಜು ಹಾಗೂ ಅಕ್ರಮ ಮದ್ಯ ಮಾರಾಟ ಕಂಡು ಬಂದಾಗ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.</p>.<p>ಪಿಎಸ್ಐ ಚಂದ್ರಶೇಖರ್, ಕಾನ್ಸ್ಟಬಲ್ಗಳಾದ ರಮೇಶ್, ರಾಜೇಶ್ವರಿ, ಗ್ರಾಮಪಂಚಾಯಿತಿ ಸದಸ್ಯ ಶಿವಯ್ಯ, ಮುಖಂಡರಾದ ಕಮರವಾಡಿ ರೇವಣ್ಣ, ಅನಿಲ್, ಮಹದೇವಸ್ವಾಮಿ, ಮಣಿಕಂಠ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>