ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ನಿಯಂತ್ರಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಸುರೇಶ್ ಕುಮಾರ್, ಶಾಸಕರಾದ ಆರ್. ನರೇಂದ್ರ, ಎನ್.ಮಹೇಶ್, ಪುಟ್ಟರಂಗಶೆಟ್ಟಿ, ನಿರಂಜನ್ ಕುಮಾರ್ ಹಾಗೂ ಜಿಲ್ಲಾಧಿಕಾರಿ ಸಭೆ ನಡೆಸಿ ವಾರದಲ್ಲಿ 3 ದಿನ ಮಾತ್ರ ಬೆಳಿಗ್ಗೆ 6 ರಿಂದ 10 ಗಂಟೆಯ ವರೆಗೆ ದಿನಸಿ ಅಂಗಡಿ, ಬೇಕರಿ, ಬಾರ್ಗಳಿಗೆ ಅವಕಾಶ ನೀಡಿದ್ದಾರೆ. ಉಳಿದ 4 ದಿನಗಳು ಅಗತ್ಯ ವಸ್ತುಗಳಿಗೆ ಮಾತ್ರ ಅವಕಾಶ ಕಲ್ಪಿಸಿದ್ದಾರೆ.