<p><strong>ಗುಂಡ್ಲುಪೇಟೆ</strong>: ನೆರೆಯ ಕೇರಳ ರಾಜ್ಯಕ್ಕೆ ಪರವಾನಗಿ ಇಲ್ಲದೆ ಹಾಗೂ ಅಧಿಕ ಭಾರ ಹೊತ್ತು ಖನಿಜ ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ 11 ಟಿಪ್ಪರ್ ಲಾರಿಗಳು ತೆರಕಣಾಂಬಿ ಠಾಣೆ ಪಿಎಸ್ಐ ಕೆ.ಎಂ.ಮಹೇಶ್ ನೇತೃತ್ವದ ತಂಡ ಶನಿವಾರ ನಸುಕಿನ ವೇಲೆ ವಶಕ್ಕೆ ಪಡೆದಿದ್ದಾರೆ.</p>.<p>ಕೇರಳ ರಾಜ್ಯಕ್ಕೆ ಎಂ.ಸ್ಯಾಂಡ್, ಕಪ್ಪು ಶಿಲೆ, ಬಿಳಿಕಲ್ಲು, ಬೋಡ್ರಸ್ ಸೇರಿದಂತೆ ವಿವಿಧ ಖನಿಜ ಸಾಮಗ್ರಿಗಳನ್ನು ಪರವಾನಗಿ ಇಲ್ಲದೆ , ಟಿಪ್ಪರ್ ಮೂಲಕ ಅಧಿಕ ಭಾರ ಸಾಗಣೆ ಮಾಡುತ್ತಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆದಿದೆ.</p>.<p>ಜಿಲ್ಲಾ ಎಸ್ಪಿ ಬಿ.ಟಿ.ಕವಿತಾ ಆದೇಶದ ಮೇರೆಗೆ ತೆರಕಣಾಂಬಿ ಪೊಲೀಸರು 11 ಟಿಪ್ಪರ್ಗಳನ್ನು ಕೇರಳ ರಸ್ತೆಯ ಕನ್ನೇಗಾಲ ಟೋಲ್ ಬಳಿ ತಡೆದು ತಪಾಸಣೆಗೆ ಒಳಪಡಿಸಿದಾಗ ವಾಹನ ಪರವಾನಗಿ ಇಲ್ಲದ 5 ಹಾಗೂ 6 ಟಿಪ್ಪರ್ಗಳಲ್ಲಿ ನಿಗದಿಗಿಂತ ಅಧಿಕ ಭಾರದ ಸಾಮಗ್ರಿ ಹೇರಿರುವುದು ಕಂಡು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ಟಿಪ್ಪರ್ಗಳನ್ನು ಗುಂಡ್ಲುಪೇಟೆ ಪೊಲೀಸ್ ಠಾಣೆ ವಶದಲ್ಲಿ ಇರಿಸಲಾಗಿದೆ ಎಂದು ತೆರಕಣಾಂಬಿ ಠಾಣೆ ಪಿಎಸ್ಐ ಕೆ.ಎಂ.ಮಹೇಶ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಂಡ್ಲುಪೇಟೆ</strong>: ನೆರೆಯ ಕೇರಳ ರಾಜ್ಯಕ್ಕೆ ಪರವಾನಗಿ ಇಲ್ಲದೆ ಹಾಗೂ ಅಧಿಕ ಭಾರ ಹೊತ್ತು ಖನಿಜ ಮತ್ತು ನಿರ್ಮಾಣ ಸಾಮಗ್ರಿಗಳನ್ನು ಸಾಗಿಸುತ್ತಿದ್ದ 11 ಟಿಪ್ಪರ್ ಲಾರಿಗಳು ತೆರಕಣಾಂಬಿ ಠಾಣೆ ಪಿಎಸ್ಐ ಕೆ.ಎಂ.ಮಹೇಶ್ ನೇತೃತ್ವದ ತಂಡ ಶನಿವಾರ ನಸುಕಿನ ವೇಲೆ ವಶಕ್ಕೆ ಪಡೆದಿದ್ದಾರೆ.</p>.<p>ಕೇರಳ ರಾಜ್ಯಕ್ಕೆ ಎಂ.ಸ್ಯಾಂಡ್, ಕಪ್ಪು ಶಿಲೆ, ಬಿಳಿಕಲ್ಲು, ಬೋಡ್ರಸ್ ಸೇರಿದಂತೆ ವಿವಿಧ ಖನಿಜ ಸಾಮಗ್ರಿಗಳನ್ನು ಪರವಾನಗಿ ಇಲ್ಲದೆ , ಟಿಪ್ಪರ್ ಮೂಲಕ ಅಧಿಕ ಭಾರ ಸಾಗಣೆ ಮಾಡುತ್ತಿದ್ದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆದಿದೆ.</p>.<p>ಜಿಲ್ಲಾ ಎಸ್ಪಿ ಬಿ.ಟಿ.ಕವಿತಾ ಆದೇಶದ ಮೇರೆಗೆ ತೆರಕಣಾಂಬಿ ಪೊಲೀಸರು 11 ಟಿಪ್ಪರ್ಗಳನ್ನು ಕೇರಳ ರಸ್ತೆಯ ಕನ್ನೇಗಾಲ ಟೋಲ್ ಬಳಿ ತಡೆದು ತಪಾಸಣೆಗೆ ಒಳಪಡಿಸಿದಾಗ ವಾಹನ ಪರವಾನಗಿ ಇಲ್ಲದ 5 ಹಾಗೂ 6 ಟಿಪ್ಪರ್ಗಳಲ್ಲಿ ನಿಗದಿಗಿಂತ ಅಧಿಕ ಭಾರದ ಸಾಮಗ್ರಿ ಹೇರಿರುವುದು ಕಂಡು ಬಂದಿದ್ದು, ಅವುಗಳನ್ನು ವಶಕ್ಕೆ ಪಡೆದಿದ್ದಾರೆ.</p>.<p>ಪ್ರಾದೇಶಿಕ ಸಾರಿಗೆ ಇಲಾಖೆ ಮತ್ತು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿ, ಟಿಪ್ಪರ್ಗಳನ್ನು ಗುಂಡ್ಲುಪೇಟೆ ಪೊಲೀಸ್ ಠಾಣೆ ವಶದಲ್ಲಿ ಇರಿಸಲಾಗಿದೆ ಎಂದು ತೆರಕಣಾಂಬಿ ಠಾಣೆ ಪಿಎಸ್ಐ ಕೆ.ಎಂ.ಮಹೇಶ್ ಮಾಹಿತಿ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>