ಯಳಂದೂರು: ವರನಟ ಡಾ.ರಾಜ್ಕುಮಾರ್ ಅವರ ಕುಟುಂಬಕ್ಕೆ ದೀಕ್ಷೆ ನೀಡಿರುವ ತಾಲ್ಲೂಕಿನ ಗುಂಬಳ್ಳಿ ಬಳಿಯ ಬಿಳಿಗುಡ್ಡ ಮಠಕ್ಕೆ ಸೇರಿದ ಜಾಗದಲ್ಲಿ ಅಕ್ರಮವಾಗಿ ಕರಿಕಲ್ಲು ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪ ಕೇಳಿಬರುತ್ತಿದ್ದಂತೆಯೇ, ಗಣಿ ಮತ್ತು ಭೂ ವಿಜ್ಞಾನ, ಕಂದಾಯ ಇಲಾಖೆಗಳ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.