ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಇದ್ದಕ್ಕಿದ್ದಂತೆ ಗಾಳಿಯ ಅಬ್ಬರ ಹೆಚ್ಚಾಗಿತ್ತು. ಸಾಮಾನ್ಯ ದಿನಗಳಲ್ಲಿ ಪ್ರತಿ ಗಂಟೆಗೆ 2ರಿಂದ 3 ಕಿಲೋಮೀಟರ್ ವೇಗದಲ್ಲಿ ಬೀಸುತ್ತಿದ್ದ ಗಾಳಿಯ ವೇಗ 9.6 ಕಿ.ಮೀಗೆ ತಲುಪಿತ್ತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.
ಸಾಮಾನ್ಯವಾಗಿ ಮುಂಗಾರಿನಲ್ಲಿ ಬೀಸುವ ಗಾಳಿಗಿಂತಲೂ ಅಧಿಕ ಪ್ರಮಾಣದಲ್ಲಿ ಗಾಳಿ ಬೀಸಿತು. ಗಾಳಿಯಿಂದಾಗಿ ಹಲವೆಡೆ ವಿದ್ಯುತ್ ವ್ಯತ್ಯಯ ಉಂಟಾಯಿತು.