<p><strong>ಹನೂರು:</strong> ‘ನಾಗಣ್ಣ ನಗರ ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು’ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.</p><p>ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ನಾಗಣ್ಣ ನಗರ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ‘ಕಂದಾಯ ಗ್ರಾಮವಾದರೆ ಜನರಿಗೆ ಸರ್ಕಾರದ ಸವಲತ್ತು ಮತ್ತಷ್ಟು ಸಿಗಲಿದೆ. ಇಲ್ಲಿಯ ಜನರಿಗೆ ಡಿಮ್ಯಾಂಡ್, ರಿಜಿಸ್ಟರ್, ಇ ಸ್ವತ್ತು ಸಿಗುತ್ತಿಲ್ಲ ಎಂಬ ಸಮಸ್ಯೆ ತಲೆದೂರಿದೆ. ಅಂಗನವಾಡಿ, ಶಾಲಾ ಕಟ್ಟಡ ಶಿಥಿಲವಾಗಿದೆ. ಈ ಸಮಸ್ಯೆಗಳನ್ನು ಸರಿಪಡಿಸಲು ಹಾಗೂ ಜನರಿಗೆ ಅನುಕೂಲ ಕಲ್ಪಿಸಿ ಗ್ರಾಮ ಅಭಿವೃದ್ಧಿ ಪಡಿಸಲು ಶ್ರಮಿಸಲಾಗುತ್ತಿದೆ’ ಎಂದರು.</p><p>ನಾಗಣ್ಣ ನಗರ ಗ್ರಾಮ ಅಭಿವೃದ್ಧಿಗೆ ಹಾಗೂ ಜನರಿಗೆ ಅಗತ್ಯವಾಗಿ ಬೇಕಾದಂತಹ ಚರಂಡಿ ಕುಡಿಯುವ ನೀರು ಹಾಗೂ ವಿದ್ಯುತ್ ಸೇರಿದಂತೆ ಇನ್ನಿತರ ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.</p><p>ಸದ್ಯಕ್ಕೆ ಪಡಿತರ ಚೀಟಿ, ವಿದ್ಯುತ್, ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ಇನ್ನಿತರ ಸೌಕರ್ಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಲಾಗಿದ್ದು, ಅಗತ್ಯ ಕ್ರಮ ವಹಿಸಲಿದ್ದಾರೆ. ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಶ್ರನಿಸಲಾಗುತ್ತಿದೆ ಎಂದರು.</p><p>ರಾಮಪುರದಿಂದ ನಾಗಣ್ಣನಗರ ಮಾರ್ಗವಾಗಿ ಬೆಳಿಗ್ಗೆ ಶಾಲೆಗೆ ತೆರಳಲು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮನವಿಯನ್ನು ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಸಾರಿಗೆ ವ್ಯವಸ್ಥಾಪಕರನ್ನು ಸ್ಥಳಕ್ಕೆ ಕರೆಸಿ ಶಾಲಾ ಮಕ್ಕಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.</p><p>ನಾಗಣ್ಣನಗರದ ಜನರಿಗೆ ಶೌಚಗೃಹ ಹಾಗೂ ಪಡಿತರ ಚೀಟಿ ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಒದಗಿಸಬೇಕು. ಜನರ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಪಿಡಿಒ ಪುಷ್ಪಲತಾ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.</p><p>ರಾಮಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಕುಂಜುಮಾನ್ ಹಾರಯಮ್ಮ, ಮುರುಗೇಶ್, ಸುರೇಂದ್ರ, ಮುರುಗೇಶ್, ಮಹದೇವಮ್ಮ, ಸುಗುಣ, ಮಾದಮ್ಮ, ಲಕ್ಷ್ಮಿ, ಭಾಗ್ಯಮ್ಮ, ಪೆರಿಯಮ್ಮ, ಶಾರದಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ‘ನಾಗಣ್ಣ ನಗರ ಗ್ರಾಮಕ್ಕೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು’ ಎಂದು ಶಾಸಕ ಎಂ.ಆರ್.ಮಂಜುನಾಥ್ ಹೇಳಿದರು.</p><p>ಪಟ್ಟಣದ ಲೋಕೋಪಯೋಗಿ ಇಲಾಖೆಯ ಅತಿಥಿ ಗೃಹದಲ್ಲಿ ನಾಗಣ್ಣ ನಗರ ಗ್ರಾಮಸ್ಥರೊಂದಿಗೆ ಮಾತನಾಡಿದ ಅವರು, ‘ಕಂದಾಯ ಗ್ರಾಮವಾದರೆ ಜನರಿಗೆ ಸರ್ಕಾರದ ಸವಲತ್ತು ಮತ್ತಷ್ಟು ಸಿಗಲಿದೆ. ಇಲ್ಲಿಯ ಜನರಿಗೆ ಡಿಮ್ಯಾಂಡ್, ರಿಜಿಸ್ಟರ್, ಇ ಸ್ವತ್ತು ಸಿಗುತ್ತಿಲ್ಲ ಎಂಬ ಸಮಸ್ಯೆ ತಲೆದೂರಿದೆ. ಅಂಗನವಾಡಿ, ಶಾಲಾ ಕಟ್ಟಡ ಶಿಥಿಲವಾಗಿದೆ. ಈ ಸಮಸ್ಯೆಗಳನ್ನು ಸರಿಪಡಿಸಲು ಹಾಗೂ ಜನರಿಗೆ ಅನುಕೂಲ ಕಲ್ಪಿಸಿ ಗ್ರಾಮ ಅಭಿವೃದ್ಧಿ ಪಡಿಸಲು ಶ್ರಮಿಸಲಾಗುತ್ತಿದೆ’ ಎಂದರು.</p><p>ನಾಗಣ್ಣ ನಗರ ಗ್ರಾಮ ಅಭಿವೃದ್ಧಿಗೆ ಹಾಗೂ ಜನರಿಗೆ ಅಗತ್ಯವಾಗಿ ಬೇಕಾದಂತಹ ಚರಂಡಿ ಕುಡಿಯುವ ನೀರು ಹಾಗೂ ವಿದ್ಯುತ್ ಸೇರಿದಂತೆ ಇನ್ನಿತರ ಕಾಮಗಾರಿ ಕೈಗೆತ್ತಿಕೊಳ್ಳಲು ಈಗಾಗಲೇ ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.</p><p>ಸದ್ಯಕ್ಕೆ ಪಡಿತರ ಚೀಟಿ, ವಿದ್ಯುತ್, ಕುಡಿಯುವ ನೀರು, ರಸ್ತೆ, ಚರಂಡಿ ಹಾಗೂ ಇನ್ನಿತರ ಸೌಕರ್ಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹೇಳಲಾಗಿದ್ದು, ಅಗತ್ಯ ಕ್ರಮ ವಹಿಸಲಿದ್ದಾರೆ. ಸಮಸ್ಯೆಗಳನ್ನು ಹಂತ ಹಂತವಾಗಿ ಬಗೆಹರಿಸಲು ಶ್ರನಿಸಲಾಗುತ್ತಿದೆ ಎಂದರು.</p><p>ರಾಮಪುರದಿಂದ ನಾಗಣ್ಣನಗರ ಮಾರ್ಗವಾಗಿ ಬೆಳಿಗ್ಗೆ ಶಾಲೆಗೆ ತೆರಳಲು ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಲು ಮನವಿಯನ್ನು ಮಾಡಿದರು. ಇದಕ್ಕೆ ಸ್ಪಂದಿಸಿದ ಶಾಸಕರು, ಸಾರಿಗೆ ವ್ಯವಸ್ಥಾಪಕರನ್ನು ಸ್ಥಳಕ್ಕೆ ಕರೆಸಿ ಶಾಲಾ ಮಕ್ಕಳಿಗೆ ಹಾಗೂ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.</p><p>ನಾಗಣ್ಣನಗರದ ಜನರಿಗೆ ಶೌಚಗೃಹ ಹಾಗೂ ಪಡಿತರ ಚೀಟಿ ಸೇರಿದಂತೆ ಇನ್ನಿತರ ಮೂಲ ಸೌಕರ್ಯ ಒದಗಿಸಬೇಕು. ಜನರ ಸಮಸ್ಯೆ ಪರಿಹರಿಸಲು ಮುಂದಾಗಬೇಕು ಎಂದು ಪಿಡಿಒ ಪುಷ್ಪಲತಾ ಅವರಿಗೆ ದೂರವಾಣಿ ಮೂಲಕ ಸೂಚನೆ ನೀಡಿದರು.</p><p>ರಾಮಪುರ ಗ್ರಾಮ ಪಂಚಾಯಿತಿ ಸದಸ್ಯರಾದ ಕುಂಜುಮಾನ್ ಹಾರಯಮ್ಮ, ಮುರುಗೇಶ್, ಸುರೇಂದ್ರ, ಮುರುಗೇಶ್, ಮಹದೇವಮ್ಮ, ಸುಗುಣ, ಮಾದಮ್ಮ, ಲಕ್ಷ್ಮಿ, ಭಾಗ್ಯಮ್ಮ, ಪೆರಿಯಮ್ಮ, ಶಾರದಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>