ಯಳಂದೂರು ತಾಲ್ಲೂಕಿನ ಉಪ್ಪಿನಮೋಳೆಯಲ್ಲಿ ಭಾನುವಾರ ಮತದಾನ ಮಾಡಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ‘ವರದಿಯ ವಿವರಗಳನ್ನು ಪಡೆಯುವುದಕ್ಕಾಗಿ ಸಭೆ ಆಯೋಜಿಸುವಂತೆ ಅಧಿಕಾರಿಗಳಿಗೆ ನಾನು ಹೇಳಿದ್ದೆ. ಹಿಂದುಳಿದ ಜನಾಂಗದವರ ಅಭಿವೃದ್ಧಿಗಾಗಿ ವರದಿ ಬಿಡುಗಡೆಯಾಗಬೇಕಿತ್ತು. ಆದರೆ, ಕುಮಾರಸ್ವಾಮಿ ಅವರು ಕರೆ ಮಾಡಿ, ‘ಸಭೆ ನಡೆಸಲು ನಿಮಗೆ ಹೇಳಿದ್ದು ಯಾರು? ಸಭೆಯನ್ನು ರದ್ದುಪಡಿಸಿ’ ಎಂದು ಹೇಳಿದರು. ಮುಖ್ಯಮಂತ್ರಿಯನ್ನು ವಿರೋಧಿಸಿಕೊಂಡು ಸಭೆ ನಡೆಸುವುದು ಸರಿಯಲ್ಲ ಎಂದು ರದ್ದುಪಡಿಸಿದೆ’ ಎಂದರು.