<p><strong>ಚಾಮರಾಜನಗರ:</strong> ಜಿಲ್ಲೆಯಾದ್ಯಂತ ಜೈನ ಸಮುದಾಯದವರು ಭಾನುವಾರ ಮಹಾವೀರ ಜಯಂತಿ ಆಚರಿಸಿದರು. ಮನೆಗಳಲ್ಲಿ ಹಾಗೂ ಬಸದಿಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಕೈಗೊಂಡರು. </p>.<p>ನಗರದ ಪಾರ್ಶ್ವನಾಥಸ್ವಾಮಿ ದಿಗಂಬರ ಜೈನ ಬಸದಿಯಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. </p>.<p>ಮಹಾವೀರಸ್ವಾಮಿಗೆ ಪಂಚಾಮೃತ ಅಭಿಷೇಕ, ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ ಜಯಶಾಮಾದೇವಿ ಮಹಿಳಾ ಸಮಾಜದವರಿಂದ ಬಾಲ ಲೀಲಾ ಮಹೋತ್ಸವ ನಡೆಯಿತು. ಜಯಂತಿ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. </p>.<p>ಸಂಜೆ ವಿದ್ಯುದೀಪ ಮತ್ತು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಮಹಾವೀರರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. </p>.<p>ಪಾರ್ಶ್ವನಾಥ ಜೈನ ಸಂಘದ ಅಧ್ಯಕ್ಷ ಎಂ.ಪಿ.ನಿರ್ಮಲ್ಕುಮಾರ್, ಮುಖಂಡರಾದ ಸಿ.ಪಿ.ಮಹೇಶ್ ಕುಮಾರ್, ಸಿ.ಕೆ.ಸುಭಾಷ್, ಸತೀಶ್ ಕುಮಾರ್ ಜೈನ್, ಜೈಶಾಮಾದೇವಿ ಮಹಿಳಾ ಸಂಘದ ಅಧ್ಯಕ್ಷೆ ಪದ್ಮಶ್ರೀ, ಶ್ವೇತಾಂಬರ ಜೈನ ಸಮಾಜದವರು, ಪಾರ್ಶ್ವನಾಥ ಜೈನ ಸಂಘದ ಸದಸ್ಯರು ಇತರರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಜಿಲ್ಲೆಯಾದ್ಯಂತ ಜೈನ ಸಮುದಾಯದವರು ಭಾನುವಾರ ಮಹಾವೀರ ಜಯಂತಿ ಆಚರಿಸಿದರು. ಮನೆಗಳಲ್ಲಿ ಹಾಗೂ ಬಸದಿಗಳಲ್ಲಿ ವಿಶೇಷ ಪೂಜೆ ಪುನಸ್ಕಾರಗಳನ್ನು ಕೈಗೊಂಡರು. </p>.<p>ನಗರದ ಪಾರ್ಶ್ವನಾಥಸ್ವಾಮಿ ದಿಗಂಬರ ಜೈನ ಬಸದಿಯಲ್ಲಿ ಭಾನುವಾರ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆದವು. </p>.<p>ಮಹಾವೀರಸ್ವಾಮಿಗೆ ಪಂಚಾಮೃತ ಅಭಿಷೇಕ, ಪೂಜೆ ನೆರವೇರಿಸಲಾಯಿತು. ಮಧ್ಯಾಹ್ನ ಜಯಶಾಮಾದೇವಿ ಮಹಿಳಾ ಸಮಾಜದವರಿಂದ ಬಾಲ ಲೀಲಾ ಮಹೋತ್ಸವ ನಡೆಯಿತು. ಜಯಂತಿ ಅಂಗವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು. </p>.<p>ಸಂಜೆ ವಿದ್ಯುದೀಪ ಮತ್ತು ಪುಷ್ಪಾಲಂಕೃತ ಪಲ್ಲಕ್ಕಿಯಲ್ಲಿ ಮಹಾವೀರರ ಪ್ರತಿಮೆಯನ್ನು ಪ್ರತಿಷ್ಠಾಪಿಸಿ ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. </p>.<p>ಪಾರ್ಶ್ವನಾಥ ಜೈನ ಸಂಘದ ಅಧ್ಯಕ್ಷ ಎಂ.ಪಿ.ನಿರ್ಮಲ್ಕುಮಾರ್, ಮುಖಂಡರಾದ ಸಿ.ಪಿ.ಮಹೇಶ್ ಕುಮಾರ್, ಸಿ.ಕೆ.ಸುಭಾಷ್, ಸತೀಶ್ ಕುಮಾರ್ ಜೈನ್, ಜೈಶಾಮಾದೇವಿ ಮಹಿಳಾ ಸಂಘದ ಅಧ್ಯಕ್ಷೆ ಪದ್ಮಶ್ರೀ, ಶ್ವೇತಾಂಬರ ಜೈನ ಸಮಾಜದವರು, ಪಾರ್ಶ್ವನಾಥ ಜೈನ ಸಂಘದ ಸದಸ್ಯರು ಇತರರು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>