<p>ಸಂತೇಮರಹಳ್ಳಿ: ಇಲ್ಲಿನ ಜೆಎಸ್ಎಸ್ ವಿದ್ಯಾಸಂಸ್ಥೆ ವತಿಯಿಂದ ಶಿಕ್ಷಕರು ಈಚೆಗೆ ಮನೆಗಳಿಗೆ ಭೇಟಿ ನೀಡಿ ಶಾಲಾ ದಾಖಲಾತಿ ಆಂದೋಲನ ನಡೆಸಿದರು.</p>.<p>ಮುಖ್ಯಶಿಕ್ಷಕ ವೈ.ಪಿ.ವಿಶ್ವ ಮಾತನಾಡಿ, ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಲು ಮುಂದಾಗಬೇಕು. ಯಾವ ಮಕ್ಕಳೂ ಶಾಲೆಯಿಂದ ಹೊರಗೆ ಉಳಿಯಬಾರದು. ಕಡ್ಡಾಯ ಶಿಕ್ಷಣ ಜಾರಿಯಲ್ಲಿ ಇರುವುದರಿಂದ ಪ್ರತಿಯೊಂದು ಮಗುವಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದರು. </p>.<p>ಸರ್ಕಾರ ಶಿಕ್ಷಣದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದೆ. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಅವಕಾಶಗಳು ಪ್ರತಿಯೊಂದು ಮಕ್ಕಳಿಗೂ ಸಿಗಬೇಕು. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲು ಮಾಡಬೇಕು ಎಂದು ತಿಳಿಸಿದರು.</p>.<p>ಪ್ರೌಢಶಾಲಾ ಮುಖ್ಯಶಿಕ್ಷಕ ಎ.ಜೆ.ಮರಿಸ್ವಾಮಿ, ಶಿಕ್ಷಕರಾದ ಮಮತಾ, ಯೋಗಾವತಿ, ಕಾಂತರಾಜು, ದೀಪಿಕಾ, ಜ್ಯೋತಿ, ನಾಗಮಾದೇಶ್, ಮಲ್ಲಿಕಾರ್ಜುನ, ಪ್ರಭು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಂತೇಮರಹಳ್ಳಿ: ಇಲ್ಲಿನ ಜೆಎಸ್ಎಸ್ ವಿದ್ಯಾಸಂಸ್ಥೆ ವತಿಯಿಂದ ಶಿಕ್ಷಕರು ಈಚೆಗೆ ಮನೆಗಳಿಗೆ ಭೇಟಿ ನೀಡಿ ಶಾಲಾ ದಾಖಲಾತಿ ಆಂದೋಲನ ನಡೆಸಿದರು.</p>.<p>ಮುಖ್ಯಶಿಕ್ಷಕ ವೈ.ಪಿ.ವಿಶ್ವ ಮಾತನಾಡಿ, ಶೈಕ್ಷಣಿಕ ವರ್ಷ ಆರಂಭ ಆಗಿರುವುದರಿಂದ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಲು ಮುಂದಾಗಬೇಕು. ಯಾವ ಮಕ್ಕಳೂ ಶಾಲೆಯಿಂದ ಹೊರಗೆ ಉಳಿಯಬಾರದು. ಕಡ್ಡಾಯ ಶಿಕ್ಷಣ ಜಾರಿಯಲ್ಲಿ ಇರುವುದರಿಂದ ಪ್ರತಿಯೊಂದು ಮಗುವಿಗೂ ಶಿಕ್ಷಣ ಅವಶ್ಯಕವಾಗಿದೆ ಎಂದರು. </p>.<p>ಸರ್ಕಾರ ಶಿಕ್ಷಣದ ಪ್ರಗತಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತಂದಿದೆ. ಮಧ್ಯಾಹ್ನದ ಬಿಸಿಯೂಟ, ಸಮವಸ್ತ್ರ, ಪಠ್ಯಪುಸ್ತಕ ಸೇರಿದಂತೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದೆ. ಈ ಅವಕಾಶಗಳು ಪ್ರತಿಯೊಂದು ಮಕ್ಕಳಿಗೂ ಸಿಗಬೇಕು. ಈ ಹಿನ್ನೆಲೆಯಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲು ಮಾಡಬೇಕು ಎಂದು ತಿಳಿಸಿದರು.</p>.<p>ಪ್ರೌಢಶಾಲಾ ಮುಖ್ಯಶಿಕ್ಷಕ ಎ.ಜೆ.ಮರಿಸ್ವಾಮಿ, ಶಿಕ್ಷಕರಾದ ಮಮತಾ, ಯೋಗಾವತಿ, ಕಾಂತರಾಜು, ದೀಪಿಕಾ, ಜ್ಯೋತಿ, ನಾಗಮಾದೇಶ್, ಮಲ್ಲಿಕಾರ್ಜುನ, ಪ್ರಭು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>