‘ಮಾನವೀಯತೆ ದೃಷ್ಟಿಯಿಂದ ಆಸ್ಪತ್ರೆಗೆ ದಾಖಲಾಗುವ ಮಹಿಳೆಯರಿಗೆ, ಗರ್ಭಿಣಿಯರಿಗೆ ಉತ್ತಮವಾದ ಪರಿಸರದ ವಾತಾವರಣ ಕಲ್ಪಿಸಿ, ವೈದ್ಯಕೀಯ ಚಿಕಿತ್ಸೆ ನೀಡಬೇಕು. ಆಸ್ಪತ್ರೆಗೆ ಚಿಕಿತ್ಸೆ ಪಡೆಯಲು ಬರುವ ಸಾರ್ವಜನಿಕರಿಗೆ ಕಾನೂನಿನ ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವನ್ನು ಸಂಪರ್ಕಿಸಲು ತಿಳಿಸಬೇಕು’ ಎಂದು ವೈದ್ಯಾಧಿಕಾರಿಗಳಿಗೆ ಶ್ರೀಧರ ಸಲಹೆ ನೀಡಿದರು.