<p>ಚಾಮರಾಜನಗರ: ಕೋವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಿರಿಯ ವೈದ್ಯರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನವಾದ ಮಂಗಳವಾರವೂ ಮುಂದುವರಿಯಿತು.</p>.<p>ಕಿರಿಯ ವೈದ್ಯರ ಒಕ್ಕೂಟದ ಆಶ್ರಯದಲ್ಲಿ ವೈದ್ಯರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಭುವನೇಶ್ವರಿ ವೃತ್ತದ ಬಳಿ ಸೇರಿದ ವೈದ್ಯರು ಅಲ್ಲಿಂದ ಜಿಲ್ಲಾಸ್ಪತ್ರೆಗೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಕೋವಿಡ್ ಸಂದರ್ಭದಲ್ಲಿ ಕಿರಿಯ ವೈದ್ಯರು ರೋಗಿಗಳ ಆರೈಕೆ ಮಾಡಿದ್ದಾರೆ. ಸರ್ಕಾರವು ಈ ವರ್ಷದ ಮೇ ತಿಂಗಳಲ್ಲಿ ಕೋವಿಡ್ ಭತ್ಯೆ ನೀಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೆ ನೀಡಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಕಿರಿಯ ವೈದ್ಯರ ಒಕ್ಕೂಟದ ಅಧ್ಯಕ್ಷ ಡಾ.ಧೀಮಂತ್, ಉಪಾಧ್ಯಕ್ಷೆ ಡಾ.ಸಹನಾ, ಪದಾಧಿಕಾರಿಗಳಾದ ಡಾ.ಮೋಹನ್, ಡಾ.ತೇಜಸ್ವಿ ಅರುಣ್, ಡಾ.ಗಣೇಶ್, ಡಾ.ಆಸ್ತಾ, ಡಾ.ಹರ್ಷಿತಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: ಕೋವಿಡ್ ಭತ್ಯೆ ಮಂಜೂರು ಮಾಡುವಂತೆ ಆಗ್ರಹಿಸಿ ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಕಿರಿಯ ವೈದ್ಯರು ಆರಂಭಿಸಿರುವ ಅನಿರ್ದಿಷ್ಟಾವಧಿ ಮುಷ್ಕರ ಎರಡನೇ ದಿನವಾದ ಮಂಗಳವಾರವೂ ಮುಂದುವರಿಯಿತು.</p>.<p>ಕಿರಿಯ ವೈದ್ಯರ ಒಕ್ಕೂಟದ ಆಶ್ರಯದಲ್ಲಿ ವೈದ್ಯರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.</p>.<p>ಭುವನೇಶ್ವರಿ ವೃತ್ತದ ಬಳಿ ಸೇರಿದ ವೈದ್ಯರು ಅಲ್ಲಿಂದ ಜಿಲ್ಲಾಸ್ಪತ್ರೆಗೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿದರು. ನಂತರ ಬಿ.ರಾಚಯ್ಯ ಜೋಡಿ ರಸ್ತೆಯ ಮೂಲಕ ಜಿಲ್ಲಾಡಳಿತ ಭವನದವರೆಗೂ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಸಲ್ಲಿಸಿದರು.</p>.<p>‘ಕೋವಿಡ್ ಸಂದರ್ಭದಲ್ಲಿ ಕಿರಿಯ ವೈದ್ಯರು ರೋಗಿಗಳ ಆರೈಕೆ ಮಾಡಿದ್ದಾರೆ. ಸರ್ಕಾರವು ಈ ವರ್ಷದ ಮೇ ತಿಂಗಳಲ್ಲಿ ಕೋವಿಡ್ ಭತ್ಯೆ ನೀಡುವುದಾಗಿ ಘೋಷಿಸಿತ್ತು. ಆದರೆ, ಇದುವರೆಗೆ ನೀಡಿಲ್ಲ’ ಎಂದು ಪ್ರತಿಭಟನಕಾರರು ಆರೋಪಿಸಿದರು.</p>.<p>ಕಿರಿಯ ವೈದ್ಯರ ಒಕ್ಕೂಟದ ಅಧ್ಯಕ್ಷ ಡಾ.ಧೀಮಂತ್, ಉಪಾಧ್ಯಕ್ಷೆ ಡಾ.ಸಹನಾ, ಪದಾಧಿಕಾರಿಗಳಾದ ಡಾ.ಮೋಹನ್, ಡಾ.ತೇಜಸ್ವಿ ಅರುಣ್, ಡಾ.ಗಣೇಶ್, ಡಾ.ಆಸ್ತಾ, ಡಾ.ಹರ್ಷಿತಾ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>