<p><strong>ಚಾಮರಾಜನಗರ:</strong> ಕನ್ನಡ ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಮಾಹಿತಿ ಸಾಹಿತ್ಯ ಅಥವಾ ಜ್ಞಾನ ಕನ್ನಡದಲ್ಲಿ ಸಿಗುವಂತಾಗಬೇಕು’ ಎಂದು ತಂತ್ರಜ್ಞಾನ ಬರಹಗಾರ, ಕರಾವಳಿ ವಿಕಿಮಿಡಿಯನ್ಸ್ ಕಾರ್ಯದರ್ಶಿ ಯು.ಬಿ.ಪವನಜ ಗುರುವಾರ ಹೇಳಿದರು. </p><p>ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಹಮ್ಮಿಕೊಂಡಿರುವ ಎರಡು ದಿನಗಳ ವಿಕಿಪೀಡಿಯ ಸಮುದಾಯ ಬೆಳವಣಿಗೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. </p><p>‘ಕಥನ ಸಾಹಿತ್ಯ ಕನ್ನಡದಲ್ಲಿ ಲಭ್ಯವಿದೆ. ಆದರೆ, ಮಾಹಿತಿ ಸಾಹಿತ್ಯ ಹೆಚ್ಚಿನ ಪ್ರಮಾಣದಲ್ಲಿ ಕನ್ನಡದಲ್ಲಿ ಇಲ್ಲ. ಅಂತರ್ಜಾಲದಲ್ಲಿ ನಾವು ಹುಡುಕುವ ಮಾಹಿತಿಗಳು ಇಂಗ್ಲಿಷ್ನಲ್ಲೇ ಹೆಚ್ಚು ಸಿಗುತ್ತಿವೆ’ ಎಂದರು. </p><p>‘ನಮ್ಮಲ್ಲಿ ಇಂಗ್ಲಿಷ್ ಬಗ್ಗೆ ಭ್ರಮೆ ಇದೆ. ಇಂಗ್ಲಿಷ್ ಗೊತ್ತಿದ್ದರೆ ಮಾತ್ರ ಅವಕಾಶ ಸಿಗುತ್ತದೆ; ಹೆಚ್ಚಾಗುತ್ತದೆ ಎಂಬ ಭಾವನೆ ಇದೆ. ಇದು ಸುಳ್ಳು. ಕನ್ನಡ ಕಲಿತರೂ ಅವಕಾಶ ಇದೆ. ಜ್ಞಾನ ಸಂಪಾದನೆ ಮಾಡಬಹುದು. ಜನರಲ್ಲಿರುವ ಇಂಗ್ಲಿಷ್ನ ಪಿತ್ತ ಹೋಗಬೇಕು ಎಂದರೆ, ಪ್ರಪಂಚದ ಜ್ಞಾನ ಕನ್ನಡದಲ್ಲಿ ಲಭ್ಯವಾಗಬೇಕು’ ಎಂದರು. </p><p>‘ವಿಕಿಪೀಡಿಯಾವು ಸ್ವತಂತ್ರ ಮತ್ತು ಮುಕ್ತ ವಿಶ್ವಕೋಶವಾಗಿದ್ದು, ಜಗತ್ತಿನ 332 ಭಾಷೆಗಳಲ್ಲಿ, ಭಾರತದ 24 ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ. ವಿಕಿಪೀಡಿಯದಲ್ಲಿ ಇಂಗ್ಲಿಷ್ ಭಾಷೆಯಲ್ಲಿ 60 ಲಕ್ಷ ಲೇಖನಗಳಿದ್ದರೆ, ಕನ್ನಡದಲ್ಲಿ 32 ಸಾವಿರವಷ್ಟೇ ಇದೆ’ ಎಂದು ಪವನಜ ಹೇಳಿದರು. </p><p>‘ವಿಕಿಪೀಡಿಯದಲ್ಲಿ ಯಾರು ಬೇಕಾದರೂ ಮಾಹಿತಿ ಸಂಪಾದನೆ ಮಾಡಬಹುದು. ಇಲ್ಲಿ ಲೇಖನ ಬರೆದವರಿಗೆ ಸಂಭಾವನೆ ಕೊಡುವುದಿಲ್ಲ. ಗೌರವ, ಸನ್ಮಾನಗಳು ಇರುವುದಿಲ್ಲ. ಮನ್ನಣೆಯ ದಾಹ ಉಳ್ಳ ಸಾಹಿತಿಗಳಿಗೆ, ಲೇಖಕರಿಗೆ ಇದು ವೇದಿಕೆಯಲ್ಲ. ವಿಕಿಪೀಡಿಯಗೆ ಲೇಖನ ಬರೆಯುವುದು ನಿಜವಾದ ಸಮಾಜಸೇವೆ’ ಎಂದರು. </p><p>ಕಾಲೇಜು ಪ್ರಾಂಶುಪಾಲ ಎನ್.ಮಹದೇವಸ್ವಾಮಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಜ್ಞಾ ದೇವಾಡಿಗ, ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ.ವರಪ್ರಸಾದ್, ಬೋಧಕರು, ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಕನ್ನಡ ಭಾಷೆ ಉಳಿಯಬೇಕಾದರೆ ಅಂತರ್ಜಾಲದಲ್ಲಿ ಮಾಹಿತಿ ಸಾಹಿತ್ಯ ಅಥವಾ ಜ್ಞಾನ ಕನ್ನಡದಲ್ಲಿ ಸಿಗುವಂತಾಗಬೇಕು’ ಎಂದು ತಂತ್ರಜ್ಞಾನ ಬರಹಗಾರ, ಕರಾವಳಿ ವಿಕಿಮಿಡಿಯನ್ಸ್ ಕಾರ್ಯದರ್ಶಿ ಯು.ಬಿ.ಪವನಜ ಗುರುವಾರ ಹೇಳಿದರು. </p><p>ನಗರದ ಜೆಎಸ್ಎಸ್ ಮಹಿಳಾ ಕಾಲೇಜಿನ ಕನ್ನಡ ವಿಭಾಗ ಹಮ್ಮಿಕೊಂಡಿರುವ ಎರಡು ದಿನಗಳ ವಿಕಿಪೀಡಿಯ ಸಮುದಾಯ ಬೆಳವಣಿಗೆ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. </p><p>‘ಕಥನ ಸಾಹಿತ್ಯ ಕನ್ನಡದಲ್ಲಿ ಲಭ್ಯವಿದೆ. ಆದರೆ, ಮಾಹಿತಿ ಸಾಹಿತ್ಯ ಹೆಚ್ಚಿನ ಪ್ರಮಾಣದಲ್ಲಿ ಕನ್ನಡದಲ್ಲಿ ಇಲ್ಲ. ಅಂತರ್ಜಾಲದಲ್ಲಿ ನಾವು ಹುಡುಕುವ ಮಾಹಿತಿಗಳು ಇಂಗ್ಲಿಷ್ನಲ್ಲೇ ಹೆಚ್ಚು ಸಿಗುತ್ತಿವೆ’ ಎಂದರು. </p><p>‘ನಮ್ಮಲ್ಲಿ ಇಂಗ್ಲಿಷ್ ಬಗ್ಗೆ ಭ್ರಮೆ ಇದೆ. ಇಂಗ್ಲಿಷ್ ಗೊತ್ತಿದ್ದರೆ ಮಾತ್ರ ಅವಕಾಶ ಸಿಗುತ್ತದೆ; ಹೆಚ್ಚಾಗುತ್ತದೆ ಎಂಬ ಭಾವನೆ ಇದೆ. ಇದು ಸುಳ್ಳು. ಕನ್ನಡ ಕಲಿತರೂ ಅವಕಾಶ ಇದೆ. ಜ್ಞಾನ ಸಂಪಾದನೆ ಮಾಡಬಹುದು. ಜನರಲ್ಲಿರುವ ಇಂಗ್ಲಿಷ್ನ ಪಿತ್ತ ಹೋಗಬೇಕು ಎಂದರೆ, ಪ್ರಪಂಚದ ಜ್ಞಾನ ಕನ್ನಡದಲ್ಲಿ ಲಭ್ಯವಾಗಬೇಕು’ ಎಂದರು. </p><p>‘ವಿಕಿಪೀಡಿಯಾವು ಸ್ವತಂತ್ರ ಮತ್ತು ಮುಕ್ತ ವಿಶ್ವಕೋಶವಾಗಿದ್ದು, ಜಗತ್ತಿನ 332 ಭಾಷೆಗಳಲ್ಲಿ, ಭಾರತದ 24 ಭಾಷೆಗಳಲ್ಲಿ ಮಾಹಿತಿ ಲಭ್ಯವಿದೆ. ವಿಕಿಪೀಡಿಯದಲ್ಲಿ ಇಂಗ್ಲಿಷ್ ಭಾಷೆಯಲ್ಲಿ 60 ಲಕ್ಷ ಲೇಖನಗಳಿದ್ದರೆ, ಕನ್ನಡದಲ್ಲಿ 32 ಸಾವಿರವಷ್ಟೇ ಇದೆ’ ಎಂದು ಪವನಜ ಹೇಳಿದರು. </p><p>‘ವಿಕಿಪೀಡಿಯದಲ್ಲಿ ಯಾರು ಬೇಕಾದರೂ ಮಾಹಿತಿ ಸಂಪಾದನೆ ಮಾಡಬಹುದು. ಇಲ್ಲಿ ಲೇಖನ ಬರೆದವರಿಗೆ ಸಂಭಾವನೆ ಕೊಡುವುದಿಲ್ಲ. ಗೌರವ, ಸನ್ಮಾನಗಳು ಇರುವುದಿಲ್ಲ. ಮನ್ನಣೆಯ ದಾಹ ಉಳ್ಳ ಸಾಹಿತಿಗಳಿಗೆ, ಲೇಖಕರಿಗೆ ಇದು ವೇದಿಕೆಯಲ್ಲ. ವಿಕಿಪೀಡಿಯಗೆ ಲೇಖನ ಬರೆಯುವುದು ನಿಜವಾದ ಸಮಾಜಸೇವೆ’ ಎಂದರು. </p><p>ಕಾಲೇಜು ಪ್ರಾಂಶುಪಾಲ ಎನ್.ಮಹದೇವಸ್ವಾಮಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಯಾಗಿದ್ದ ಪ್ರಜ್ಞಾ ದೇವಾಡಿಗ, ಕನ್ನಡ ವಿಭಾಗದ ಮುಖ್ಯಸ್ಥ ಬಿ.ಬಿ.ವರಪ್ರಸಾದ್, ಬೋಧಕರು, ಸಿಬ್ಬಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>