‘ಜುಲೈ 28ರಂದೇ ಹೈಕೋರ್ಟ್ ಆದೇಶ ಹೊರಡಿಸಿತ್ತು. ಅಷ್ಟರಲ್ಲಾಗಲೇ ವರ್ಗಾವಣೆ ಆದೇಶದ ಅನ್ವಯ ಪರಶಿವಯ್ಯ ಅವರು ಅಧಿಕಾರ ಸ್ವೀಕರಿಸಿದ್ದರು. ಹೈಕೋರ್ಟ್ ಆದೇಶದ ಪ್ರತಿ ಸಿಗುವಾಗ ತಡವಾಗಿತ್ತು. ಈಗ ಹೈಕೋರ್ಟ್ ಆದೇಶ ಹಾಗೂ ಜಿಲ್ಲಾಧಿಕಾರಿ ಅವರ ಸೂಚನೆಯಂತೆ ಆಯುಕ್ತನಾಗಿ ಮತ್ತೆ ಅಧಿಕಾರ ಸ್ವೀಕರಿಸಿದ್ದೇನೆ’ ಎಂದು ಕರಿಬಸವಯ್ಯ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.