ಚಾಮರಾಜನಗರದ ಆರು ಮಂದಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ಅವರು, 'ಸೋಮಣ್ಣ ಅವರು ಉಸ್ತುವಾರಿ ಸಚಿವರಾದ ಮೇಲೆ ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡಿಲ್ಲ. ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯ ಸೋಲಿಗೂ ಕಾರಣರಾಗಿದ್ದರು. 2019ರ ಲೋಕಸಭಾ ಚುನಾವಣೆಯಲ್ಲೂ ಕೆಲಸ ಮಾಡಿಲ್ಲ. ಅವರಿಂದ ಪಕ್ಷಕ್ಕೆ ಯಾವುದೇ ಅನುಕೂಲವಾಗಿಲ್ಲ. ಹಾಗಾಗಿ, ಜಿಲ್ಲಾ ಚುನಾವಣಾ ಉಸ್ತುವಾರಿ ಜವಾಬ್ದಾರಿ ಕೊಡಬಾರದು' ಎಂದು ಆಗ್ರಹಿಸಿದರು.