ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

Budget 2025 | ಚಾಮರಾಜನಗರ: ಗಡಿ ಜಿಲ್ಲೆ ‘ನಗರ’ಕ್ಕೆ ಸಿಕ್ಕಿದ್ದು ‘ಸುಣ್ಣ’

2025–26ನೇ ಸಾಲಿನ ಬಜೆಟ್‌ನಲ್ಲಿ ‘ವನಸಿರಿ’ಯ ಜಿಲ್ಲೆಗೆ ಕೆಲವೇ ಯೋಜನೆ
Published : 8 ಮಾರ್ಚ್ 2025, 9:39 IST
Last Updated : 8 ಮಾರ್ಚ್ 2025, 9:39 IST
ಫಾಲೋ ಮಾಡಿ
Comments
ಇಲ್ಲಿನ ಬುಡಕಟ್ಟು ಜನರಿಗೂ ಲಾಭ
ಅರಣ್ಯ ಅರಣ್ಯದಂಚಿನ ಹಾಡಿಗಳಲ್ಲಿ ವಾಸ ಮಾಡುತ್ತಿರುವ ಪರಿಶಿಷ್ಟ ಪಂಗಡದ ಬುಡಕಟ್ಟುಗಳ ಜನಾಂಗದವರಿಗೆ ಮೂಲಸೌಕರ್ಯಗಳನ್ನು ಒದಗಿಸಲು ₹ 200 ಕೋಟಿ ಅನುದಾನ ನೀಡಲಾಗುವುದು. ಈ ಬುಡಕಟ್ಟು ಜನಾಂಗದವರಿಗೆ ರಾಜ್ಯ ಸಿವಿಲ್‌ ಸೇವೆಗಳಲ್ಲಿ ಪ್ರಾತಿನಿಧ್ಯ ನೀಡುವ ಸಲುವಾಗಿ ವಿಶೇಷ ನೇರ ನೇಮಕಾತಿಯನ್ನು ಕೈಗೊಳ್ಳಲಾಗುವುದು  ಎಂದು ಘೋಷಿಸಲಾಗಿದೆ. ಇದರಲ್ಲಿ ಜಿಲ್ಲೆಯಲ್ಲಿರುವ ವಿವಿಧ ಬುಡಕಟ್ಟು ಜನರಲ್ಲಿ ಅರ್ಹರಿಗೆ ಲಾಭವಾಗಲಿದೆ. ಬುಡಕಟ್ಟು ಜನಾಂಗದ ಶೈಕ್ಷಣಿಕ ಉದ್ದೇಶಕ್ಕಾಗಿ ಸ್ಥಾಪಿಸಲಾಗಿರುವ 78 ಬುಡಕಟ್ಟು ವಸತಿ ಶಾಲೆಗಳಲ್ಲಿ 2025-26ನೇ ಸಾಲಿನಿಂದ 7ನೇ ತರಗತಿಯನ್ನು ಪ್ರಾರಂಭಿಸಲಾಗುವುದು. ಚಾಮರಾಜನಗರ ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿನ ಐದು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ತಿಳಿಸಲಾಗಿದೆ. ಇದರಲ್ಲಿ ಚಾಮರಾಜನಗಕ್ಕೆ ಸಿಗುವ ಪಾಲೆಷ್ಟು ಎನ್ನುವ ಸ್ಪಷ್ಟತೆ ಬಜೆಟ್‌ನಲ್ಲಿಲ್ಲ.
₹2 ಕೋಟಿ ವೆಚ್ಚದಲ್ಲಿ ‘ಈಜಕೊಳ’
ಚಾಮರಾಜನಗರದಲ್ಲಿ ಒಲಿಂಪಿಕ್ಸ್ ಮಾದರಿಯ (50 ಮೀಟರ್) ಈಜುಕೊಳವನ್ನು ₹ 2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು ಎಂದು ತಿಳಿಸಲಾಗಿದೆ. ಇದರಿಂದ ಈಜುಪಟುಗಳಿಗೆ ಅನುಕೂಲ ಆಗಲಿದೆ. 2025-26ನೇ ಸಾಲಿನಲ್ಲಿ ಹೊನ್ನಾವರ ಚಾಮರಾಜನಗರ ಮತ್ತು ಚಿತ್ರದುರ್ಗದಲ್ಲಿ ₹ 20 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲು ಕ್ರಮ ವಹಿಸಲಾಗುವುದು. ಈ ಉದ್ದೇಶಕ್ಕಾಗಿ ₹ 12 ಕೋಟಿ ಅನುದಾನವನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ. ಇದರಲ್ಲಿ ‘ಚಾಮರಾಜನಗರ’ದ ಪಾಲೆಷ್ಟು ಎನ್ನುವ ಸ್ಪಷ್ಟತೆ ಇಲ್ಲ. ‘ಕೆ–ಶಿಪ್–4’ ಯೋಜನೆಯಡಿ ಜಿಲ್ಲೆಯ ಹನೂರು-ರಾಂಪುರ-ಪಾಲಾರ್-70 ಕಿ.ಮೀ. ಹಾಗೂ ಹುಲ್ಲಹಳ್ಳಿ–ತಗಡೂರು–ಸಂತೇಮರಹಳ್ಳಿ 55 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು. ಹೊಸ ತಾಲ್ಲೂಕು ಹನೂರು ಪಟ್ಟಣದಲ್ಲಿ ‘ತಾಲ್ಲೂಕು ಪ್ರಜಾಸೌಧ’ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT