<p><strong>ಚಾಮರಾಜನಗರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಡಬ್ಬ ಹಿಡಿದು ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಸಿಕ್ಕಿದ್ದು ಖಾಲಿ ಡಬ್ಬ ಎಂದು ಅಣಕಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಬಜೆಟ್ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಘೋಷಣೆ ಮಾಡಿಲ್ಲ. ಜಿಲ್ಲೆಗೆ ವಿಶೇಷ ಅನುದಾನ ನೀಡಿಲ್ಲ ಎಂದರು. </p>.<p>ಚಾಮರಾಜನಗರ ಜಿಲ್ಲೆಯನ್ನು ಸದಾ ಸ್ಮರಿಸುವ ಮುಖ್ಯಮಂತ್ರಿ ಬಜೆಟ್ನಲ್ಲಿ ಮಾತ್ರ ಜಿಲ್ಲೆಗೆ ಯಾವುದೇ ಕೊಡುಗೆ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿದ ಕಾಂಗ್ರೆಸ್ ನಾಯಕರು ಬಜೆಟ್ನಲ್ಲಿ ಮಾತ್ರ ಯೋಜನೆಯ ಪ್ರಸ್ತಾಪ ಮಾಡಿಲ್ಲ. ನೀರಿನ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಡಿಗೆ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದ್, ಮುತ್ತು, ಮುತ್ತಿಗೆ ಗೋವಿಂದರಾಜ, ರಾಚಪ್ಪ, ತಲಕಾಡು ಮಹದೇವು, ಅಮಚವಾಡಿ ರಾಜು, ಆಟೋ ಲಿಂಗರಾಜು, ಬಸವರಾಜು, ತಾಂಡವಮೂರ್ತಿ, ಜಗದೀಶ್, ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಈಚೆಗೆ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿ ಕರ್ನಾಟಕ ಸೇನಾಪಡೆಯ ಕಾರ್ಯಕರ್ತರು ಭಾನುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.</p>.<p>ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಲಿ ಡಬ್ಬ ಹಿಡಿದು ರಾಜ್ಯ ಬಜೆಟ್ನಲ್ಲಿ ಜಿಲ್ಲೆಗೆ ಸಿಕ್ಕಿದ್ದು ಖಾಲಿ ಡಬ್ಬ ಎಂದು ಅಣಕಿಸಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.</p>.<p>ಪ್ರತಿಭಟನೆ ನೇತೃತ್ವ ವಹಿಸಿದ್ದ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯ ಬಜೆಟ್ನಲ್ಲಿ ಚಾಮರಾಜನಗರ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಘೋಷಣೆ ಮಾಡಿಲ್ಲ. ಜಿಲ್ಲೆಗೆ ವಿಶೇಷ ಅನುದಾನ ನೀಡಿಲ್ಲ ಎಂದರು. </p>.<p>ಚಾಮರಾಜನಗರ ಜಿಲ್ಲೆಯನ್ನು ಸದಾ ಸ್ಮರಿಸುವ ಮುಖ್ಯಮಂತ್ರಿ ಬಜೆಟ್ನಲ್ಲಿ ಮಾತ್ರ ಜಿಲ್ಲೆಗೆ ಯಾವುದೇ ಕೊಡುಗೆ ನೀಡದೆ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದರು.</p>.<p>ಮೇಕೆದಾಟು ಯೋಜನೆ ಜಾರಿಗೆ ಪಾದಯಾತ್ರೆ ಮಾಡಿದ ಕಾಂಗ್ರೆಸ್ ನಾಯಕರು ಬಜೆಟ್ನಲ್ಲಿ ಮಾತ್ರ ಯೋಜನೆಯ ಪ್ರಸ್ತಾಪ ಮಾಡಿಲ್ಲ. ನೀರಿನ ಹೆಸರಿನಲ್ಲಿ ರಾಜಕೀಯ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ನಾಡಿಗೆ ದ್ರೋಹ ಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪ್ರತಿಭಟನೆಯಲ್ಲಿ ಮುಖಂಡರಾದ ಶಾ.ಮುರಳಿ, ಪಣ್ಯದಹುಂಡಿ ರಾಜು, ನಿಜಧ್ವನಿ ಗೋವಿಂದ್, ಮುತ್ತು, ಮುತ್ತಿಗೆ ಗೋವಿಂದರಾಜ, ರಾಚಪ್ಪ, ತಲಕಾಡು ಮಹದೇವು, ಅಮಚವಾಡಿ ರಾಜು, ಆಟೋ ಲಿಂಗರಾಜು, ಬಸವರಾಜು, ತಾಂಡವಮೂರ್ತಿ, ಜಗದೀಶ್, ಚಂದ್ರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>