<p><strong>ಚಾಮರಾಜನಗರ:</strong> ‘ಗಡಿ ಜಿಲ್ಲೆಗೆ ಬರುವುದು, ಇಲ್ಲಿನ ಜನರ ಕಲ್ಯಾಣ ಮಾಡುವುದು ನನ್ನ ಕರ್ತವ್ಯ. ನಾನು ಬಾರದಿದ್ದರೆ ಕರ್ತವ್ಯ ಲೋಪವಾಗುತ್ತಿತ್ತು. ನಾನು ಮತ್ತೆ ಚಾಮರಾಜನಗರಕ್ಕೆ ಬಂದೇ ಬರುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸ್ಪಷ್ಟಪಡಿಸಿದರು.</p>.<p>ಹೊಸ ಬೋಧನಾ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು ಚಾಮರಾಜನಗರ ಜಿಲ್ಲೆಗೆ ಬರುವ ವಿಚಾರ ಸಾಕಷ್ಟು ಚರ್ಚೆಯಾಗಿತ್ತು. ಇಲ್ಲಿಗೆ ಬರುವುದು ನನ್ನ ಕರ್ತವ್ಯ. ಚಾಮರಾಜನಗರ ಕರ್ನಾಟಕದ ಅವಿಭಾಜ್ಯ ಅಂಗ. ಕರ್ತವ್ಯ ಲೋಪವಾಗುವುದಕ್ಕೆ ನನಗೆ ಇಷ್ಟ ಇಲ್ಲ’ ಎಂದರು.</p>.<p>‘ಒಳ್ಳೆಯ ಮನಸ್ಸಿನಿಂದ ಕೆಲಸ ಮಾಡಿದರೆ ಒಳ್ಳೆಯದೇ ಆಗುತ್ತದೆ. ಯಾರು ಏನೇ ಹೇಳಲಿ. ಅದರ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ. ನಾನು ಮತ್ತೆ ಚಾಮರಾಜನಗರಕ್ಕೆ ಬರುತ್ತೇನೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತೇನೆ’ ಎಂದು ಹೇಳಿದರು.</p>.<p>‘ಸಂಕುಚಿತ ಭಾವನೆಯಿಂದ ಹೊರಗಡೆ ಬಂದು ವೈಜ್ಞಾನಿಕ ವಾಗಿ ಯೋಚನೆ ಮಾಡಬೇಕು. ವೈಜ್ಞಾನಿಕ ಆಧರಿತವಾದ ಯುವ ಪೀಳಿಗೆಯನ್ನು ನಾವು ನಿರ್ಮಾಣ ಮಾಡಬೇಕು’ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/dharwad/politics-hd-kumaraswamy-jds-congress-bjp-rss-jagadish-shettar-siddaramaiah-873483.html" target="_blank">ಎಚ್ಡಿಕೆ, ಸಿದ್ದರಾಮಯ್ಯಗೆ ಆರ್ಎಸ್ಎಸ್ ಮೇಲೆ ಬಹಳ ಪ್ರೀತಿ ಬಂದಿದೆ: ಶೆಟ್ಟರ್</a></strong></p>.<p><strong>ಎಂಟು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು: ‘</strong>ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇನ್ನೂ ವೈದ್ಯಕೀಯ ಕಾಲೇಜುಗಳು ಆಗಬೇಕಿದೆ. ಇನ್ನು ಒಂದೂವರೆ ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ. ಈ ವರ್ಷ ಹಾವೇರಿ ಚಿಕ್ಕಮಗಳೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ’ ಎಂದು ಬೊಮ್ಮಾಯಿ ಅವರು ಹೇಳಿದರು.</p>.<p><strong>ಅಸಮತೋಲನ ನಿವಾರಣೆ:</strong> ಜಿಲ್ಲೆಗಳ ನಡುವೆ ಶೈಕ್ಷಣಿಕವಾಗಿ, ಅರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಇರುವ ಅಸಮತೋಲನವನ್ನು ತೊಡೆದು ಹಾಕುವ ಪ್ರತಿಜ್ಞೆಯನ್ನೂ ಅವರು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಾಮರಾಜನಗರ:</strong> ‘ಗಡಿ ಜಿಲ್ಲೆಗೆ ಬರುವುದು, ಇಲ್ಲಿನ ಜನರ ಕಲ್ಯಾಣ ಮಾಡುವುದು ನನ್ನ ಕರ್ತವ್ಯ. ನಾನು ಬಾರದಿದ್ದರೆ ಕರ್ತವ್ಯ ಲೋಪವಾಗುತ್ತಿತ್ತು. ನಾನು ಮತ್ತೆ ಚಾಮರಾಜನಗರಕ್ಕೆ ಬಂದೇ ಬರುವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಗುರುವಾರ ಸ್ಪಷ್ಟಪಡಿಸಿದರು.</p>.<p>ಹೊಸ ಬೋಧನಾ ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ನಾನು ಚಾಮರಾಜನಗರ ಜಿಲ್ಲೆಗೆ ಬರುವ ವಿಚಾರ ಸಾಕಷ್ಟು ಚರ್ಚೆಯಾಗಿತ್ತು. ಇಲ್ಲಿಗೆ ಬರುವುದು ನನ್ನ ಕರ್ತವ್ಯ. ಚಾಮರಾಜನಗರ ಕರ್ನಾಟಕದ ಅವಿಭಾಜ್ಯ ಅಂಗ. ಕರ್ತವ್ಯ ಲೋಪವಾಗುವುದಕ್ಕೆ ನನಗೆ ಇಷ್ಟ ಇಲ್ಲ’ ಎಂದರು.</p>.<p>‘ಒಳ್ಳೆಯ ಮನಸ್ಸಿನಿಂದ ಕೆಲಸ ಮಾಡಿದರೆ ಒಳ್ಳೆಯದೇ ಆಗುತ್ತದೆ. ಯಾರು ಏನೇ ಹೇಳಲಿ. ಅದರ ಬಗ್ಗೆ ನಾನು ಯೋಚನೆ ಮಾಡುವುದಿಲ್ಲ. ನಾನು ಮತ್ತೆ ಚಾಮರಾಜನಗರಕ್ಕೆ ಬರುತ್ತೇನೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸುತ್ತೇನೆ’ ಎಂದು ಹೇಳಿದರು.</p>.<p>‘ಸಂಕುಚಿತ ಭಾವನೆಯಿಂದ ಹೊರಗಡೆ ಬಂದು ವೈಜ್ಞಾನಿಕ ವಾಗಿ ಯೋಚನೆ ಮಾಡಬೇಕು. ವೈಜ್ಞಾನಿಕ ಆಧರಿತವಾದ ಯುವ ಪೀಳಿಗೆಯನ್ನು ನಾವು ನಿರ್ಮಾಣ ಮಾಡಬೇಕು’ ಎಂದು ಅವರು ಹೇಳಿದರು.</p>.<p><strong>ಇದನ್ನೂ ಓದಿ... <a href="https://www.prajavani.net/district/dharwad/politics-hd-kumaraswamy-jds-congress-bjp-rss-jagadish-shettar-siddaramaiah-873483.html" target="_blank">ಎಚ್ಡಿಕೆ, ಸಿದ್ದರಾಮಯ್ಯಗೆ ಆರ್ಎಸ್ಎಸ್ ಮೇಲೆ ಬಹಳ ಪ್ರೀತಿ ಬಂದಿದೆ: ಶೆಟ್ಟರ್</a></strong></p>.<p><strong>ಎಂಟು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು: ‘</strong>ರಾಜ್ಯದ ಎಂಟು ಜಿಲ್ಲೆಗಳಲ್ಲಿ ಇನ್ನೂ ವೈದ್ಯಕೀಯ ಕಾಲೇಜುಗಳು ಆಗಬೇಕಿದೆ. ಇನ್ನು ಒಂದೂವರೆ ವರ್ಷದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣವಾಗಲಿದೆ. ಈ ವರ್ಷ ಹಾವೇರಿ ಚಿಕ್ಕಮಗಳೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ’ ಎಂದು ಬೊಮ್ಮಾಯಿ ಅವರು ಹೇಳಿದರು.</p>.<p><strong>ಅಸಮತೋಲನ ನಿವಾರಣೆ:</strong> ಜಿಲ್ಲೆಗಳ ನಡುವೆ ಶೈಕ್ಷಣಿಕವಾಗಿ, ಅರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಇರುವ ಅಸಮತೋಲನವನ್ನು ತೊಡೆದು ಹಾಕುವ ಪ್ರತಿಜ್ಞೆಯನ್ನೂ ಅವರು ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>