ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರದಲ್ಲಿ ಧಾರಾಕಾರ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

Last Updated 14 ಅಕ್ಟೋಬರ್ 2022, 4:19 IST
ಅಕ್ಷರ ಗಾತ್ರ

ಚಾಮರಾಜನಗರ: ನಗರ ಸೇರಿದಂತೆ ತಾಲ್ಲೂಕಿನಾದ್ಯಂತ ಶುಕ್ರವಾರಮುಂಜಾನೆ ಧಾರಾಕಾರ ಮಳೆಯಾಗಿದೆ.

ನಗರದಲ್ಲಿ ಚರಂಡಿಗಳು ಉಕ್ಕೇರಿ, ಕೊಳಚೆ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ. ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿ ಜಿಲ್ಲಾಡಳಿತ ಭವನದ ಗೇಟ್ ಬಳಿ ಭಾರಿ ಪ್ರಮಾಣದಲ್ಲಿ ನೀರು ನಿಂತು ಜನರು ಸಂಚರಿಸಲು ಪರದಾಡಿದರು.

ಜಿಲ್ಲಾಡಳಿತ ಭವನದ ಆವರಣವೂ ಜಲಾವೃತಗೊಂಡಿದೆ.

ತಡರಾತ್ರಿ 2.30ರ ಸುಮಾರಿಗೆ ಆರಂಭಗೊಂಡ ಮಳೆ ಮುಂಜಾನೆ 4 ಗಂಟೆಯ ಹೊತ್ತಿಗೆ ಬಿರುಸು ಪಡೆಯಿತು.

ತಾಲ್ಲೂಕಿನ ವೆಂಕಟಯ್ಯನಛತ್ರದಲ್ಲಿ 7.3 ಸೆಂ.ಮೀ, ಕೊತ್ತಲವಾಡಿ ಗ್ರಾಮದ ವ್ಯಾಪ್ತಿಯಲ್ಲಿ 7.25 ಸೆಂ.ಮೀ, ದೊಡ್ಡಮೋಳೆಯಲ್ಲಿ 7.15 ಸೆಂ.ಮೀ, ಕೊತ್ತಲವಾಡಿಯಲ್ಲಿ 7 ಸೆಂ.ಮೀ ಮಳೆಯಾಗಿದೆ.

ಜಿಲ್ಲಾಡಳಿತ ಭವನದ ಆವರಣ ನೀರಿನಿಂದ ಜಲಾವೃತವಾಗಿರುವ ದೃಶ್ಯ
ಜಿಲ್ಲಾಡಳಿತ ಭವನದ ಆವರಣ ನೀರಿನಿಂದ ಜಲಾವೃತವಾಗಿರುವ ದೃಶ್ಯ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT