<p><strong>ಯಳಂದೂರು</strong>: ರಾಷ್ಟ್ರೀಯ ತಂಡಗಳಲ್ಲಿ ಆಡುವಾಗ ಕ್ರೀಡಾಪಟುಗಳಿಗೆ ಯೋಗ ಮತ್ತು ಧ್ಯಾನದಿಂದ ನಿಖರವಾಗಿ ಗುರಿ ಮುಟ್ಟಲು ಸಾಧ್ಯವಾಗಲಿದೆ ಎಂದು ರಾಜ್ಯ ಜೂನಿಯರ್ ಬಾಲಕರ ತಂಡದ ತರಬೇತುದಾರ ಸಂತೇಮರಹಳ್ಳಿ ಬಿ. ಸುದರ್ಶನ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಡಾ. ಭೀಮ್ ರಾವ್ ರಾಮ್ ಜಿ ಪ್ರೌಢಶಾಲೆಯಲ್ಲಿ 3 ದಿನಗಳ ಕಾಲ ನಡೆದ ಬಾಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಹಾಗೂ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಚಾಮರಾಜನಗರ ಜಿಲ್ಲೆ ಬ್ಯಾಡ್ಮಿಂಟನ್ ಕ್ಷೇತ್ರಕ್ಕೆ ಹೆಚ್ಚು ಪ್ರತಿಭೆಗಳನ್ನು ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಿಂದ ನೂರಾರು ಸ್ಪರ್ಧಾಳುಗಳು ಭಾಗವಹಿಸಿದ್ದು, ಬ್ಯಾಡ್ಮಿಂಟನ್ ಆಟಕ್ಕೆ ಇರುವ ಪ್ರಾಧಾನ್ಯತೆ ತೋರಿಸುತ್ತಿದೆ ಎಂದರು.</p>.<p>ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ಪ್ರಮೋದ್ ಚಂದ್ರನ್, ‘3 ದಿನಗಳ ಕಾಲ ಬಾಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಹಾಗೂ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ಅಂತಿಮಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 25 ಪ್ರತಿಭಾವಂತರು ಈ ಶಿಬಿರ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. 2025–26ನೇ ಸಾಲಿನ 70ನೇ ರಾಷ್ಟ್ರೀಯ ಜೂನಿಯರ್ ಬಾಲಕರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಕರ್ನಾಟಕ ರಾಜ್ಯ ತಂಡ ಪ್ರಕಟಿಸಲಾಗಿದೆ. ತಮಿಳುನಾಡಿನ ಈರೋಡುನಲ್ಲಿ ಇದೇ 28ರಿಂದ ಫೆ.1ರ ತನಕ ಸ್ಪರ್ಧೆ ನಡೆಯಲಿದೆ ಎಂದರು.</p>.<p>ರಾಜ್ಯವನ್ನು ಪ್ರತಿನಿಧಿಸುವ ಆಟಗಾರರಾದ ಚರಣ್ (ಆಳ್ವಾಸ್) (ಬ್ಯಾಕ್), ತಸ್ಲೀಮ್ ಆರ್.ಆರ್. ನಗರ (ಬ್ಯಾಕ್) ತರಬೇತಿ ಪಡೆದವರಲ್ಲಿ ಪ್ರಮುಖರು..</p>.<p>ಪದಾಧಿಕಾರಿಗಳಾದ ನಾರಾಯಣಸ್ವಾಮಿ (ಅಧ್ಯಕ್ಷರು), ಮಾದೇವಯ್ಯ (ಖಜಾಂಚಿ), ಭದ್ರಾವತಿ ರಾಜು, ಮಲ್ಲೇಶ್, ವಿಮಲ್ ಹಾಗೂ ಪ್ರಮೋದ್ ಇದ್ದರು. ಬಿ. ಸುದರ್ಶನ್ (ಕೆನರಾ ಬ್ಯಾಂಕ್) ಬಾಲಕರ ತಂಡದ ತರಬೇತುದಾರರಾಗಿ ಆಯ್ಕೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ರಾಷ್ಟ್ರೀಯ ತಂಡಗಳಲ್ಲಿ ಆಡುವಾಗ ಕ್ರೀಡಾಪಟುಗಳಿಗೆ ಯೋಗ ಮತ್ತು ಧ್ಯಾನದಿಂದ ನಿಖರವಾಗಿ ಗುರಿ ಮುಟ್ಟಲು ಸಾಧ್ಯವಾಗಲಿದೆ ಎಂದು ರಾಜ್ಯ ಜೂನಿಯರ್ ಬಾಲಕರ ತಂಡದ ತರಬೇತುದಾರ ಸಂತೇಮರಹಳ್ಳಿ ಬಿ. ಸುದರ್ಶನ್ ಅಭಿಪ್ರಾಯಪಟ್ಟರು.</p>.<p>ತಾಲ್ಲೂಕಿನ ಡಾ. ಭೀಮ್ ರಾವ್ ರಾಮ್ ಜಿ ಪ್ರೌಢಶಾಲೆಯಲ್ಲಿ 3 ದಿನಗಳ ಕಾಲ ನಡೆದ ಬಾಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಹಾಗೂ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಚಾಮರಾಜನಗರ ಜಿಲ್ಲೆ ಬ್ಯಾಡ್ಮಿಂಟನ್ ಕ್ಷೇತ್ರಕ್ಕೆ ಹೆಚ್ಚು ಪ್ರತಿಭೆಗಳನ್ನು ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಪ್ರದೇಶಗಳಿಂದ ನೂರಾರು ಸ್ಪರ್ಧಾಳುಗಳು ಭಾಗವಹಿಸಿದ್ದು, ಬ್ಯಾಡ್ಮಿಂಟನ್ ಆಟಕ್ಕೆ ಇರುವ ಪ್ರಾಧಾನ್ಯತೆ ತೋರಿಸುತ್ತಿದೆ ಎಂದರು.</p>.<p>ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ಪ್ರಮೋದ್ ಚಂದ್ರನ್, ‘3 ದಿನಗಳ ಕಾಲ ಬಾಲ್ ಬ್ಯಾಡ್ಮಿಂಟನ್ ತರಬೇತಿ ಶಿಬಿರ ಹಾಗೂ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ಅಂತಿಮಗೊಂಡಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ 25 ಪ್ರತಿಭಾವಂತರು ಈ ಶಿಬಿರ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದಾರೆ. 2025–26ನೇ ಸಾಲಿನ 70ನೇ ರಾಷ್ಟ್ರೀಯ ಜೂನಿಯರ್ ಬಾಲಕರ ಬಾಲ್ ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ಗೆ ಕರ್ನಾಟಕ ರಾಜ್ಯ ತಂಡ ಪ್ರಕಟಿಸಲಾಗಿದೆ. ತಮಿಳುನಾಡಿನ ಈರೋಡುನಲ್ಲಿ ಇದೇ 28ರಿಂದ ಫೆ.1ರ ತನಕ ಸ್ಪರ್ಧೆ ನಡೆಯಲಿದೆ ಎಂದರು.</p>.<p>ರಾಜ್ಯವನ್ನು ಪ್ರತಿನಿಧಿಸುವ ಆಟಗಾರರಾದ ಚರಣ್ (ಆಳ್ವಾಸ್) (ಬ್ಯಾಕ್), ತಸ್ಲೀಮ್ ಆರ್.ಆರ್. ನಗರ (ಬ್ಯಾಕ್) ತರಬೇತಿ ಪಡೆದವರಲ್ಲಿ ಪ್ರಮುಖರು..</p>.<p>ಪದಾಧಿಕಾರಿಗಳಾದ ನಾರಾಯಣಸ್ವಾಮಿ (ಅಧ್ಯಕ್ಷರು), ಮಾದೇವಯ್ಯ (ಖಜಾಂಚಿ), ಭದ್ರಾವತಿ ರಾಜು, ಮಲ್ಲೇಶ್, ವಿಮಲ್ ಹಾಗೂ ಪ್ರಮೋದ್ ಇದ್ದರು. ಬಿ. ಸುದರ್ಶನ್ (ಕೆನರಾ ಬ್ಯಾಂಕ್) ಬಾಲಕರ ತಂಡದ ತರಬೇತುದಾರರಾಗಿ ಆಯ್ಕೆ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>