ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ‘ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಸರ್ಕಾರಗಳು, ಕಾವೇರಿ ನಿರ್ವಹಣಾ ಪ್ರಾಧಿಕಾರಗಳು ತಮಿಳುನಾಡಿನ ಪರವಾಗಿದ್ದು, ಕರ್ನಾಟಕ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿವೆ’ ಎಂದರು.
‘ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ರಾಜ್ಯ ಸರ್ಕಾರ ಕೂಡಲೇ ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸಬೇಕು’ ಎಂದು ಅವರು ಆಗ್ರಹಿಸಿದರು.
ನಿಜದ್ವನಿಗೋವಿಂದರಾಜು, ಗು.ಪುರುಷೋತ್ತಮ, ನಂಜುಂಡಸ್ವಾಮಿ, ಚಾ.ಹ.ರಾಮು, ರಾಮಸಮುದ್ರ ಸುರೇಶ್, ತಾಂಡವಮೂರ್ತಿ, ವೀರಭದ್ರ, ಇತರರು ಇದ್ದರು.