‘ನಾನು ಬಿಜೆಪಿಗೆ ಸೇರ್ಪಡೆಯಾಗುವುದಕ್ಕೂ ಮೊದಲು ನನ್ನ ಅಭಿಮಾನಿಗಳು ಹಾಗೂ ಕಾರ್ಯಕರ್ತರ ಜೊತೆ ಸಮಾಲೋಚನೆ ಸಭೆ ನಡೆಸಿದ್ದೇನೆ. ಆ ಬಳಿಕವಷ್ಟೇ ಪಕ್ಷ ತೊರೆಯುವ ತೀರ್ಮಾನ ಕೈಗೊಂಡಿದ್ದೇನೆ. ಮುಂದಿನ ದಿನಗಳಲ್ಲಿ ಅವಕಾಶ ನೀಡುವ ಭರವಸೆಯನ್ನು ಬಿಜೆಪಿ ಮುಖಂಡರು ನೀಡಿದ್ದಾರೆ’ ಎಂದು ಬಾಲರಾಜು ಹೇಳಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮುಖಂಡ ಲಕ್ಷ್ಮೀನಾರಾಯಣ ಸೇರಿದಂತೆ ಹಲವರು ಇದ್ದರು.