<p><strong>ಕೊಳ್ಳೇಗಾಲ</strong>: ಇಲ್ಲಿನ ಬಸ್ ನಿಲ್ದಾಣದಲ್ಲಿ ವಿಪರೀತ ಮದ್ಯ ಸೇವನೆ ಮಾಡಿದ ವ್ಯಕ್ತಿ ಬೆಂಗಳೂರು ಕುಂಬಳಗೂಡು ಮೂಲದ ನಿವಾಸಿ ಗಂಗಾಧರಪ್ಪ (55) ಸೋಮವಾರ ಮೃತಪಟ್ಟಿದ್ದಾರೆ.<br><br>ಈತ ಕಳೆದ 20 ವರ್ಷಗಳ ಹಿಂದೆ ಕುಟುಂಬದಿಂದ ದೂರವಾಗಿದ್ದನು. ಕಳೆದ ಐದಾರು ವರ್ಷಗಳ ಹಿಂದೆ ಕೊಳ್ಳೇಗಾಲಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಐದು ತಿಂಗಳಿಂದ ಬಸ್ ನಿಲ್ದಾಣದ ಸಾರಿಕಾ ಹೋಟೆಲ್ನಲ್ಲಿ ಕ್ಲಿನಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.<br><br>ಭಾನುವಾರ ಊರಿಗೆ ಹೋಗುವುದಾಗಿ ಹೇಳಿ ಹಣ ಪಡೆದು ವಿಪರೀತವಾಗಿ ಕುಡಿದು ಬಸ್ ನಿಲ್ದಾಣದೊಳಗೆ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಮಹಜರ್ ನಡೆಸಿ, ವಾರಸುದಾರರನ್ನು ಪತ್ತೆ ಮಾಡಿ ಮೃತನ ಮಗ ರವಿಕಿರಣ್ ಅವರಿಂದ ದೂರು ಪಡೆದಿದ್ದಾರೆ.<br><br>ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು. ಮೃತದೇಹವನ್ನು ದಾಸನಪುರ ಸಶ್ಮಾನದಲ್ಲಿ ಮೃತನ ಕುಟುಂಬದವರು ಅಂತ್ಯಸಂಸ್ಕಾರ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ</strong>: ಇಲ್ಲಿನ ಬಸ್ ನಿಲ್ದಾಣದಲ್ಲಿ ವಿಪರೀತ ಮದ್ಯ ಸೇವನೆ ಮಾಡಿದ ವ್ಯಕ್ತಿ ಬೆಂಗಳೂರು ಕುಂಬಳಗೂಡು ಮೂಲದ ನಿವಾಸಿ ಗಂಗಾಧರಪ್ಪ (55) ಸೋಮವಾರ ಮೃತಪಟ್ಟಿದ್ದಾರೆ.<br><br>ಈತ ಕಳೆದ 20 ವರ್ಷಗಳ ಹಿಂದೆ ಕುಟುಂಬದಿಂದ ದೂರವಾಗಿದ್ದನು. ಕಳೆದ ಐದಾರು ವರ್ಷಗಳ ಹಿಂದೆ ಕೊಳ್ಳೇಗಾಲಕ್ಕೆ ಬಂದು ಕೂಲಿ ಕೆಲಸ ಮಾಡಿಕೊಂಡಿದ್ದರು. ಕಳೆದ ಐದು ತಿಂಗಳಿಂದ ಬಸ್ ನಿಲ್ದಾಣದ ಸಾರಿಕಾ ಹೋಟೆಲ್ನಲ್ಲಿ ಕ್ಲಿನಿಂಗ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು.<br><br>ಭಾನುವಾರ ಊರಿಗೆ ಹೋಗುವುದಾಗಿ ಹೇಳಿ ಹಣ ಪಡೆದು ವಿಪರೀತವಾಗಿ ಕುಡಿದು ಬಸ್ ನಿಲ್ದಾಣದೊಳಗೆ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ತೆರಳಿ ಮಹಜರ್ ನಡೆಸಿ, ವಾರಸುದಾರರನ್ನು ಪತ್ತೆ ಮಾಡಿ ಮೃತನ ಮಗ ರವಿಕಿರಣ್ ಅವರಿಂದ ದೂರು ಪಡೆದಿದ್ದಾರೆ.<br><br>ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದರು. ಮೃತದೇಹವನ್ನು ದಾಸನಪುರ ಸಶ್ಮಾನದಲ್ಲಿ ಮೃತನ ಕುಟುಂಬದವರು ಅಂತ್ಯಸಂಸ್ಕಾರ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>