<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ಸತ್ತೇಗಾಲ ಗ್ರಾಮ ವ್ಯಾಪ್ತಿಯ ಗವಿರಾಯಸ್ವಾಮಿ ಬೆಟ್ಟದ ಕೆಳಭಾಗದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>‘ಸೋಮವಾರ ಸಂಜೆ ಗವಿರಾಯನ ಬೆಟ್ಟಕ್ಕೆ ತೆರಳಿ ಬರುತ್ತಿದ್ದ ಸಮಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರನ್ನು ಕಂಡು ಚಿರತೆ ಕಾಡಿಗೆ ಓಡಿತು’ ಎಂದು ಸತ್ತೇಗಾಲ ಗ್ರಾಮದ ಕೋಟೆಬೀದಿಯ ವೆಂಕಟಾಚಲ ತಿಳಿಸಿದರು.<br><br> ಮಾರ್ಚ್ 3ರಂದು ಗವಿರಾಯಸ್ವಾಮಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವ ಜರುಗಲಿದ್ದು ಚಿರತೆ ಬೆಟ್ಟದ ಮೇಲೆ ಕಾಣಿಸಿಕೊಂಡಿರುವುದರಿಂದ ಬೆಟ್ಟಕ್ಕೆ ಹೋಗಲು ಭಕ್ತರು ಹಿಂಜರಿಯುತ್ತಿದ್ದು, ಅರಣ್ಯಾಧಿಕಾರಿಗಳು ಚಿರತೆ ಹಿಡಿಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>‘ಗವಿರಾಯಸ್ವಾಮಿ ಬೆಟ್ಟದ ಸುತ್ತ ಚಿರತೆ ಕಂಡುಬಂದಿದೆ. ಈಗಾಗಲೇ ನಮ್ಮ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿ ಇದ್ದಾರೆ. ಮಂಗಳವಾರ ನಡೆಯುವ ರಥೋತ್ಸವದ ಸಮಯದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಂಡಿದ್ದೇವೆ. ಯಾರೂ ಭಯಪಡುವ ಅಗತ್ಯವಿಲ್ಲ’ ಎಂದು ಆರ್ಎಫ್ಒ ರವಿಕುಮಾರ್ ತಿಳಿಸಿದ್ದಾರೆ.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ತಾಲ್ಲೂಕಿನ ಸತ್ತೇಗಾಲ ಗ್ರಾಮ ವ್ಯಾಪ್ತಿಯ ಗವಿರಾಯಸ್ವಾಮಿ ಬೆಟ್ಟದ ಕೆಳಭಾಗದ ರಸ್ತೆಯಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.</p>.<p>‘ಸೋಮವಾರ ಸಂಜೆ ಗವಿರಾಯನ ಬೆಟ್ಟಕ್ಕೆ ತೆರಳಿ ಬರುತ್ತಿದ್ದ ಸಮಯದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಕಾರನ್ನು ಕಂಡು ಚಿರತೆ ಕಾಡಿಗೆ ಓಡಿತು’ ಎಂದು ಸತ್ತೇಗಾಲ ಗ್ರಾಮದ ಕೋಟೆಬೀದಿಯ ವೆಂಕಟಾಚಲ ತಿಳಿಸಿದರು.<br><br> ಮಾರ್ಚ್ 3ರಂದು ಗವಿರಾಯಸ್ವಾಮಿ ಬೆಟ್ಟದಲ್ಲಿ ಬ್ರಹ್ಮರಥೋತ್ಸವ ಜರುಗಲಿದ್ದು ಚಿರತೆ ಬೆಟ್ಟದ ಮೇಲೆ ಕಾಣಿಸಿಕೊಂಡಿರುವುದರಿಂದ ಬೆಟ್ಟಕ್ಕೆ ಹೋಗಲು ಭಕ್ತರು ಹಿಂಜರಿಯುತ್ತಿದ್ದು, ಅರಣ್ಯಾಧಿಕಾರಿಗಳು ಚಿರತೆ ಹಿಡಿಯಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.</p>.<p>‘ಗವಿರಾಯಸ್ವಾಮಿ ಬೆಟ್ಟದ ಸುತ್ತ ಚಿರತೆ ಕಂಡುಬಂದಿದೆ. ಈಗಾಗಲೇ ನಮ್ಮ ಇಲಾಖೆ ಸಿಬ್ಬಂದಿ ಕರ್ತವ್ಯದಲ್ಲಿ ಇದ್ದಾರೆ. ಮಂಗಳವಾರ ನಡೆಯುವ ರಥೋತ್ಸವದ ಸಮಯದಲ್ಲಿ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಂಡಿದ್ದೇವೆ. ಯಾರೂ ಭಯಪಡುವ ಅಗತ್ಯವಿಲ್ಲ’ ಎಂದು ಆರ್ಎಫ್ಒ ರವಿಕುಮಾರ್ ತಿಳಿಸಿದ್ದಾರೆ.<br><br></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>