<p>ಕೊಳ್ಳೇಗಾಲ: ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಗುರುವಾರ ಭೀಮನಗರದ ಮುಖಂಡರು ಹಾಗೂ ನೂರಾರು ಮಹಿಳೆಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ಮತ್ತು ಕಾರ್ಯಕರ್ತರು ಆಗ್ರಹಿಸಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ಮತ್ತು ಕಾರ್ಯಕರ್ತರು, ‘ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ತಪ್ಪದೇ ಸಚಿವ ಸ್ಥಾನ ನೀಡಬೇಕು’ ಎಂದು ಒಕ್ಕೊರಲಿನಿಂದ ಘೋಷಣೆ ಕೂಗಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಎಸ್.ರಮೇಶ್ ಮಾತನಾಡಿ, ‘ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮೂರನೇ ಬಾರಿಗೆ ಶಾಸಕರಾಗಿದ್ದಾರೆ. ಹೀಗಿದ್ದರೂ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ತಪ್ಪದೇ ಕೊಳ್ಳೇಗಾಲ ಕ್ಷೇತ್ರಕ್ಕೆ ಪ್ರಾತಿನಿಧ್ಯ ದೊರಕಿಸಬೇಕು. ಈ ಬಾರಿ ತಮ್ಮ ಮೂರು ವರ್ಷದ ಶಾಸಕಾವಧಿಯಲ್ಲಿ ₹500 ಕೋಟಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಅವರಿಗೆ ಇದೀಗ ಸಚಿವ ಸ್ಥಾನ ಸಿಕ್ಕಿದಲ್ಲಿ ಕೊಳ್ಳೇಗಾಲ ಕ್ಷೇತ್ರವಲ್ಲದೇ, ಜಿಲ್ಲೆ,ರಾಜ್ಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾರೆ’ ಎಂದರು.</p>.<p>ರೈತ ಮುಖಂಡ ಅಣಗಳ್ಳಿ ದಶರಥ್ ಮಾತನಾಡಿ, ‘ಸಚಿವ ಸ್ಥಾನದೊಂದಿಗೆ ಜಿಲ್ಲಾ ಉಸ್ತುವಾರಿಯನ್ನೂ ನೀಡಬೇಕು’ ಎಂದರು.</p>.<p>ನಗರಸಭಾ ಮಾಜಿ ಅಧ್ಯಕ್ಷೆ ಸಿ.ಎನ್.ರೇಖಾ ರಮೇಶ್ ಮಾತನಾಡಿದರು.</p>.<p>ಭೀಮನಗರದ ಮುಖಂಡ ಚಿಕ್ಕಮಾಳಿಗೆ, ಎಂ.ವರದರಾಜು, ಲಿಂಗರಾಜು, ಸುರೇಶ್, ನಟರಾಜು, ಪಿ.ಮಲ್ಲಿಕಾರ್ಜುನ್, ಸಿ.ಎಸ್.ಮಹದೇವಸ್ವಾಮಿ, ಸನತ್ ಕುಮಾರ್, ಶಿವಪ್ಪ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಸ್ತೀಪುರ ರವಿ, ಬಸ್ತೀಪುರ ಶಾಂತರಾಜು, ಜೆ.ಹರ್ಷ, ಸುಮಾ ಸುಬ್ಬಣ್ಣ, ಎಸ್.ಮಂಜುನಾಥ್, ಧರಣೇಶ್, ಪ್ರಭುಸ್ವಾಮಿ, ಬಸ್ತೀಪುರ ಪ್ರಕಾಶ್, ಎಲ್.ಲಿಂಗರಾಜು, ಶಂಕನಪುರ ಜಗದೀಶ್, ಕಸಬಾ ಪಿಎಸಿಸಿ ನಿರ್ದೇಶಕ ಮುಳ್ಳೂರು ಮಂಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-37-255705180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಗುರುವಾರ ಭೀಮನಗರದ ಮುಖಂಡರು ಹಾಗೂ ನೂರಾರು ಮಹಿಳೆಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ವಿವಿಧ ಮುಖಂಡರು ಮತ್ತು ಕಾರ್ಯಕರ್ತರು ಆಗ್ರಹಿಸಿದರು.</p>.<p>ನಗರದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ಮತ್ತು ಕಾರ್ಯಕರ್ತರು, ‘ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸಚಿವ ಸಂಪುಟ ವಿಸ್ತರಣೆ ವೇಳೆ ತಪ್ಪದೇ ಸಚಿವ ಸ್ಥಾನ ನೀಡಬೇಕು’ ಎಂದು ಒಕ್ಕೊರಲಿನಿಂದ ಘೋಷಣೆ ಕೂಗಿದರು.</p>.<p>ನಗರಸಭೆ ಮಾಜಿ ಅಧ್ಯಕ್ಷ ಎಸ್.ರಮೇಶ್ ಮಾತನಾಡಿ, ‘ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಮೂರನೇ ಬಾರಿಗೆ ಶಾಸಕರಾಗಿದ್ದಾರೆ. ಹೀಗಿದ್ದರೂ ಅವರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಬಾರಿ ತಪ್ಪದೇ ಕೊಳ್ಳೇಗಾಲ ಕ್ಷೇತ್ರಕ್ಕೆ ಪ್ರಾತಿನಿಧ್ಯ ದೊರಕಿಸಬೇಕು. ಈ ಬಾರಿ ತಮ್ಮ ಮೂರು ವರ್ಷದ ಶಾಸಕಾವಧಿಯಲ್ಲಿ ₹500 ಕೋಟಿ ಅನುದಾನವನ್ನು ತಂದು ಕ್ಷೇತ್ರವನ್ನು ಅಭಿವೃದ್ಧಿಯತ್ತ ಕೊಂಡೊಯ್ದಿದ್ದಾರೆ. ಅವರಿಗೆ ಇದೀಗ ಸಚಿವ ಸ್ಥಾನ ಸಿಕ್ಕಿದಲ್ಲಿ ಕೊಳ್ಳೇಗಾಲ ಕ್ಷೇತ್ರವಲ್ಲದೇ, ಜಿಲ್ಲೆ,ರಾಜ್ಯದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುತ್ತಾರೆ’ ಎಂದರು.</p>.<p>ರೈತ ಮುಖಂಡ ಅಣಗಳ್ಳಿ ದಶರಥ್ ಮಾತನಾಡಿ, ‘ಸಚಿವ ಸ್ಥಾನದೊಂದಿಗೆ ಜಿಲ್ಲಾ ಉಸ್ತುವಾರಿಯನ್ನೂ ನೀಡಬೇಕು’ ಎಂದರು.</p>.<p>ನಗರಸಭಾ ಮಾಜಿ ಅಧ್ಯಕ್ಷೆ ಸಿ.ಎನ್.ರೇಖಾ ರಮೇಶ್ ಮಾತನಾಡಿದರು.</p>.<p>ಭೀಮನಗರದ ಮುಖಂಡ ಚಿಕ್ಕಮಾಳಿಗೆ, ಎಂ.ವರದರಾಜು, ಲಿಂಗರಾಜು, ಸುರೇಶ್, ನಟರಾಜು, ಪಿ.ಮಲ್ಲಿಕಾರ್ಜುನ್, ಸಿ.ಎಸ್.ಮಹದೇವಸ್ವಾಮಿ, ಸನತ್ ಕುಮಾರ್, ಶಿವಪ್ಪ, ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಬಸ್ತೀಪುರ ರವಿ, ಬಸ್ತೀಪುರ ಶಾಂತರಾಜು, ಜೆ.ಹರ್ಷ, ಸುಮಾ ಸುಬ್ಬಣ್ಣ, ಎಸ್.ಮಂಜುನಾಥ್, ಧರಣೇಶ್, ಪ್ರಭುಸ್ವಾಮಿ, ಬಸ್ತೀಪುರ ಪ್ರಕಾಶ್, ಎಲ್.ಲಿಂಗರಾಜು, ಶಂಕನಪುರ ಜಗದೀಶ್, ಕಸಬಾ ಪಿಎಸಿಸಿ ನಿರ್ದೇಶಕ ಮುಳ್ಳೂರು ಮಂಜು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260529-37-255705180</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>