<p><strong>ಕೊಳ್ಳೇಗಾ</strong>ಲ: ‘ಕಾಂಗ್ರೆಸ್ ಪಕ್ಷದ ವರಿಷ್ಠ, ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಕ್ರೈಸ್ತ ಸಮುದಾಯ ಕ್ಷೇಮಾಭಿವೃದ್ಧಿ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಸೆಲ್ವರಾಜು ಒತ್ತಾಯಿಸಿದರು.</p>.<p>‘ಧೀಮಂತ ನಾಯಕ, ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಪುತ್ರ ಎ.ಆರ್.ಕೃಷ್ಣಮೂರ್ತಿ ಕ್ಷೇತ್ರದ ಶಾಸಕರಾದ ಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುವ ಮೂಲಕ ಸುಮಾರು ₹500 ಕೋಟಿ ಅನುದಾನ ತಂದಿದ್ದಾರೆ. ಸರ್ವ ಧರ್ಮ, ಸರ್ವ ಸಮುದಾಯವನ್ನು ಅಭಿವೃದ್ಧಿಗೊಳಿಸಿದ್ದಾರೆ’ ಎಂದು ಶುಕ್ರ ವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮೂರು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಚಾಣಾಕ್ಷರಾಗಿದ್ದಾರೆ, ಹಾಗಾಗಿ ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಹಿಂದುಳಿದ ಪಟ್ಟಿಯಿಂದ ಹೊರಬಂದು ಮತ್ತಷ್ಟು ಅಭಿವೃದ್ಧಿಯಾಗುತ್ತದೆ’ ಎಂದರು.</p>.<p>ಬೇತೆಲ್ ಲೂಥರನ್ ಚರ್ಚ್ನ ಫಾಸ್ಟರ್ ಜೋಶುವಾ ಪ್ರಸನ್ನಕುಮಾರ್ ಮಾತನಾಡಿ, ‘ಎ.ಆರ್.ಕೃಷ್ಣಮೂರ್ತಿ ಅವರು ಮೂರು ವರ್ಷಗಳಿಂದ ಎಲ್ಲಾ ಸಮುದಾಯವನ್ನು ಅಭಿವೃದ್ಧಿಪಡಿಸುವ ಜೊತೆಗೆ ಕ್ರೈಸ್ತ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ’ ಎಂದು ಹೇಳಿದರು.</p>.<p>ಎಸ್.ಡಿ.ಎ ಚರ್ಚ್ ಫಾಸ್ಟರ್ ಹೆಚ್.ಕೆ.ಅಂತೋಣಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಫಾಸ್ಟರ್ ಜೋಯಲ್ ನಾರಾಯಣ್, ಜಾಕೊಬ್, ಜರೂ, ಕರುಣಕಾರ್, ಕ್ಷೇಮಾಭಿವೃದ್ಧಿ ಒಕ್ಕೂಟದ ಗೌರವಧ್ಯಕ್ಷ ಎ.ವಿನ್ಸೆಂಟ್, ಉಪಾಧ್ಯಕ್ಷ ಟಿ.ಜಾನ್ ಪೀಟರ್ ಹಾಗೂ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-37-1402120989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾ</strong>ಲ: ‘ಕಾಂಗ್ರೆಸ್ ಪಕ್ಷದ ವರಿಷ್ಠ, ಶಾಸಕ ಎ.ಆರ್. ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಕ್ರೈಸ್ತ ಸಮುದಾಯ ಕ್ಷೇಮಾಭಿವೃದ್ಧಿ ಒಕ್ಕೂಟದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಸೆಲ್ವರಾಜು ಒತ್ತಾಯಿಸಿದರು.</p>.<p>‘ಧೀಮಂತ ನಾಯಕ, ಮಾಜಿ ರಾಜ್ಯಪಾಲ ಬಿ.ರಾಚಯ್ಯ ಅವರ ಪುತ್ರ ಎ.ಆರ್.ಕೃಷ್ಣಮೂರ್ತಿ ಕ್ಷೇತ್ರದ ಶಾಸಕರಾದ ಮೇಲೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡುವ ಮೂಲಕ ಸುಮಾರು ₹500 ಕೋಟಿ ಅನುದಾನ ತಂದಿದ್ದಾರೆ. ಸರ್ವ ಧರ್ಮ, ಸರ್ವ ಸಮುದಾಯವನ್ನು ಅಭಿವೃದ್ಧಿಗೊಳಿಸಿದ್ದಾರೆ’ ಎಂದು ಶುಕ್ರ ವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ಮೂರು ಬಾರಿ ಶಾಸಕರಾಗಿ ರಾಜಕೀಯದಲ್ಲಿ ಚಾಣಾಕ್ಷರಾಗಿದ್ದಾರೆ, ಹಾಗಾಗಿ ಇವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆ ಹಿಂದುಳಿದ ಪಟ್ಟಿಯಿಂದ ಹೊರಬಂದು ಮತ್ತಷ್ಟು ಅಭಿವೃದ್ಧಿಯಾಗುತ್ತದೆ’ ಎಂದರು.</p>.<p>ಬೇತೆಲ್ ಲೂಥರನ್ ಚರ್ಚ್ನ ಫಾಸ್ಟರ್ ಜೋಶುವಾ ಪ್ರಸನ್ನಕುಮಾರ್ ಮಾತನಾಡಿ, ‘ಎ.ಆರ್.ಕೃಷ್ಣಮೂರ್ತಿ ಅವರು ಮೂರು ವರ್ಷಗಳಿಂದ ಎಲ್ಲಾ ಸಮುದಾಯವನ್ನು ಅಭಿವೃದ್ಧಿಪಡಿಸುವ ಜೊತೆಗೆ ಕ್ರೈಸ್ತ ಸಮುದಾಯದ ಏಳಿಗೆಗೆ ಶ್ರಮಿಸಿದ್ದಾರೆ’ ಎಂದು ಹೇಳಿದರು.</p>.<p>ಎಸ್.ಡಿ.ಎ ಚರ್ಚ್ ಫಾಸ್ಟರ್ ಹೆಚ್.ಕೆ.ಅಂತೋಣಿ ಮಾತನಾಡಿದರು. ಪತ್ರಿಕಾಗೋಷ್ಠಿಯಲ್ಲಿ ಫಾಸ್ಟರ್ ಜೋಯಲ್ ನಾರಾಯಣ್, ಜಾಕೊಬ್, ಜರೂ, ಕರುಣಕಾರ್, ಕ್ಷೇಮಾಭಿವೃದ್ಧಿ ಒಕ್ಕೂಟದ ಗೌರವಧ್ಯಕ್ಷ ಎ.ವಿನ್ಸೆಂಟ್, ಉಪಾಧ್ಯಕ್ಷ ಟಿ.ಜಾನ್ ಪೀಟರ್ ಹಾಗೂ ಮುಖಂಡರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260530-37-1402120989</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>