<p>ಕೊಳ್ಳೇಗಾಲ: ಇಲ್ಲಿನ ಹಳೆ ನಗರಸಭೆ ಕಟ್ಟಡದ ಮೇಲ್ಬಾಗದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p>ಕಟ್ಟಡದ ಮೇಲ್ಬಾಗದಲ್ಲಿ ಬಿದ್ದಿದ್ದ ಮರದ ಎಲೆಗಳು ಹಾಗೂ ತ್ಯಾಜ್ಯಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಮಾಹಿತಿ ತಿಳಿದು ಆಗಮಿಸಿದ್ದ ನಗರಸಭೆ ವಾಹನ ಚಾಲಕ ಸಂದೀಪ್ ಕುಮಾರ್, ಯುಜಿಡಿ ರಾಜು, ಪ್ರಶಾಂತ್ ಅವರು ಬೆಂಕಿ ನಂದಿಸಲು ಮುಂದಾದರು.</p>.<p>ಬೆಂಕಿ ಹೆಚ್ಚಾದ್ದರಿಂದ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಠಾಣಾಧಿಕಾರಿ ಸಿದ್ದಾರ್ಥ, ಸಿಬ್ಬಂದಿ ಕಂದಸ್ವಾಮಿ, ಮಹೇಶ್ ಕುಮಾರ್, ಪ್ರದೀಪ್, ಅಮರೇಶ್ ಆಗಮಿಸಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದರು. ಪೌರಯುಕ್ತೆ ರುದ್ರಮ್ಮ ಶರಣಯ್ಯ ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-37-723655488</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಇಲ್ಲಿನ ಹಳೆ ನಗರಸಭೆ ಕಟ್ಟಡದ ಮೇಲ್ಬಾಗದಲ್ಲಿ ಸೋಮವಾರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು.</p>.<p>ಕಟ್ಟಡದ ಮೇಲ್ಬಾಗದಲ್ಲಿ ಬಿದ್ದಿದ್ದ ಮರದ ಎಲೆಗಳು ಹಾಗೂ ತ್ಯಾಜ್ಯಗಳಿಗೆ ಕಿಡಿಗೇಡಿಗಳು ಬೆಂಕಿ ಹಾಕಿದ್ದಾರೆ. ಮಾಹಿತಿ ತಿಳಿದು ಆಗಮಿಸಿದ್ದ ನಗರಸಭೆ ವಾಹನ ಚಾಲಕ ಸಂದೀಪ್ ಕುಮಾರ್, ಯುಜಿಡಿ ರಾಜು, ಪ್ರಶಾಂತ್ ಅವರು ಬೆಂಕಿ ನಂದಿಸಲು ಮುಂದಾದರು.</p>.<p>ಬೆಂಕಿ ಹೆಚ್ಚಾದ್ದರಿಂದ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಠಾಣಾಧಿಕಾರಿ ಸಿದ್ದಾರ್ಥ, ಸಿಬ್ಬಂದಿ ಕಂದಸ್ವಾಮಿ, ಮಹೇಶ್ ಕುಮಾರ್, ಪ್ರದೀಪ್, ಅಮರೇಶ್ ಆಗಮಿಸಿ ಬೆಂಕಿ ನಂದಿಸಿ ಅನಾಹುತ ತಪ್ಪಿಸಿದರು. ಪೌರಯುಕ್ತೆ ರುದ್ರಮ್ಮ ಶರಣಯ್ಯ ಭೇಟಿ ನೀಡಿ ಪರಿಶೀಲಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-37-723655488</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>