<p>ಕೊಳ್ಳೇಗಾಲ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ನೌಕರರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪಿಡಿಒಗಳು ತಮ್ಮ ಕರ್ತವ್ಯದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಹಣದ ದುರುಪಯೋಗ ತಡೆಯಲು ಜಾಗೃತರಾಗಿರಬೇಕು. ಜೊತೆಗೆ ತಾಲ್ಲೂಕಿನ ಅಭಿವೃದ್ಧಿಗೆ ಎಲ್ಲರೂ ಸಮರ್ಪಿತವಾಗಿ ಶ್ರಮಿಸಬೇಕು. ಜನಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೊಳ್ಳೇಗಾಲದಲ್ಲಿ ₹15 ಲಕ್ಷ ವೆಚ್ಚದಲ್ಲಿ ‘ಅಕ್ಕ ಕೆಫೆ’ ಸ್ಥಾಪನೆಗೆ ಅನುಮೋದನೆ ದೊರೆತಿದ್ದು, ಇದು ಸ್ಥಳೀಯ ಜನರಿಗೆ ಉಪಯುಕ್ತ ಹಾಗೂ ಅನುಕೂಲಕರ ಸೇವಾ ಕೇಂದ್ರವಾಗಲಿದೆ’ ಎಂದು ನಿರೀಕ್ಷಿಸಲಾಗಿದೆ.</p>.<p>‘ಇ-ಸ್ವತ್ತು ಸೇರಿದಂತೆ ವಿವಿಧ ಸಾರ್ವಜನಿಕ ಸೇವೆಗಳಲ್ಲಿ ಜನರನ್ನು ಅನಗತ್ಯವಾಗಿ ಅಲೆದಾಡಿಸದೆ, ಸಮಯೋಚಿತವಾಗಿ ಕಾರ್ಯನಿರ್ವಹಿಸಬೇಕು. ಕೊಳ್ಳೇಗಾಲವನ್ನು ರಾಜ್ಯಮಟ್ಟದಲ್ಲಿ ಮಾದರಿ ತಾಲ್ಲೂಕಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಎಲ್ಲರೂ ಸೇರಿ ಸಾಧಿಸಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ, ಸಹಾಯಕ ಯೋಜನಾಧಿಕಾರಿ ಸಂದೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-37-1679020082</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸ್ಥಳೀಯ ನೌಕರರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಗುರುಶಾಂತಪ್ಪ ಬೆಳ್ಳುಂಡಗಿ ಹೇಳಿದರು.</p>.<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಸಹಯೋಗದೊಂದಿಗೆ ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಪಿಡಿಒಗಳು ತಮ್ಮ ಕರ್ತವ್ಯದಲ್ಲಿ ಪಾರದರ್ಶಕತೆ ಕಾಪಾಡಿಕೊಂಡು, ಹಣದ ದುರುಪಯೋಗ ತಡೆಯಲು ಜಾಗೃತರಾಗಿರಬೇಕು. ಜೊತೆಗೆ ತಾಲ್ಲೂಕಿನ ಅಭಿವೃದ್ಧಿಗೆ ಎಲ್ಲರೂ ಸಮರ್ಪಿತವಾಗಿ ಶ್ರಮಿಸಬೇಕು. ಜನಸೇವೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಕೊಳ್ಳೇಗಾಲದಲ್ಲಿ ₹15 ಲಕ್ಷ ವೆಚ್ಚದಲ್ಲಿ ‘ಅಕ್ಕ ಕೆಫೆ’ ಸ್ಥಾಪನೆಗೆ ಅನುಮೋದನೆ ದೊರೆತಿದ್ದು, ಇದು ಸ್ಥಳೀಯ ಜನರಿಗೆ ಉಪಯುಕ್ತ ಹಾಗೂ ಅನುಕೂಲಕರ ಸೇವಾ ಕೇಂದ್ರವಾಗಲಿದೆ’ ಎಂದು ನಿರೀಕ್ಷಿಸಲಾಗಿದೆ.</p>.<p>‘ಇ-ಸ್ವತ್ತು ಸೇರಿದಂತೆ ವಿವಿಧ ಸಾರ್ವಜನಿಕ ಸೇವೆಗಳಲ್ಲಿ ಜನರನ್ನು ಅನಗತ್ಯವಾಗಿ ಅಲೆದಾಡಿಸದೆ, ಸಮಯೋಚಿತವಾಗಿ ಕಾರ್ಯನಿರ್ವಹಿಸಬೇಕು. ಕೊಳ್ಳೇಗಾಲವನ್ನು ರಾಜ್ಯಮಟ್ಟದಲ್ಲಿ ಮಾದರಿ ತಾಲ್ಲೂಕಾಗಿ ಅಭಿವೃದ್ಧಿಪಡಿಸುವ ಗುರಿಯನ್ನು ಎಲ್ಲರೂ ಸೇರಿ ಸಾಧಿಸಬೇಕು’ ಎಂದರು.</p>.<p>ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಗೋಪಾಲಕೃಷ್ಣ, ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ, ಸಹಾಯಕ ಯೋಜನಾಧಿಕಾರಿ ಸಂದೇಶ್ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260429-37-1679020082</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>