<p><strong>ಕೊಳ್ಳೇಗಾಲ:</strong> ತಾಲ್ಲೂಕಿನಾದ್ಯಂತ ಮಳೆ ಕಣ್ಣಾಮುಚ್ಚಾಲೆಯಾಡುತ್ತಿದ್ದು,ಬೇಸಿಗೆಯ ರಣಬಿಸಿಲಿಗೆ ಕೆರೆ-ಕಟ್ಟೆಗಳು ಬರಿದಾಗಿವೆ. ಕೃಷಿ ಜಮೀನುಗಳು ಕೂಡ ಬರಡಾಗಲು ಆರಂಭಿಸಿದ್ದು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಸಮಸ್ಯೆ ಕಾಡುವ ಆತಂಕ ಎದುರಾಗಿದೆ.</p>.<p>ಎರಡು ದಿನಗಳಿಂದ ಸಂಜೆ ಹೊತ್ತು ಮಳೆಯಾಗುತ್ತಿರುವುದು ರೈತರಲ್ಲಿ ಆಶಾಭಾವ ಮೂಡಿಸಿದೆ. ಇನ್ನೂ ಕೆಲವು ದಿನಗಳ ಕಾಲ ಈ ರೀತಿ ಮಳೆಯಾದರೆ ತೊಂದರೆ ಇಲ್ಲ. ಇಲ್ಲದಿದ್ದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದು ಹೇಳುತ್ತಾರೆ ಹಿರಿಯರು.</p>.<p>ಬಿರು ಬೇಸಿಗೆಯ ನಡುವೆಯೇ ತಾಲ್ಲೂಕಿನ ಅಲ್ಲಲ್ಲಿ ಮಳೆ ಬಿದ್ದಿದ್ದರೂ ನಗರದ ಸುತ್ತಮುತ್ತ ಒಂದು ತಿಂಗಳಿನಿಂದ ಸರಿಯಾಗಿ ಮಳೆ ಬಾರದ ಕಾರಣ ರೈತರಿಗೆ ನೆಮ್ಮದಿ ಇಲ್ಲದಂತಾಗಿದೆ. ಸುತ್ತಮುತ್ತಲಿನ ಕೆರೆಗಳು ಬರಿದಾಗಿವೆ.</p>.<p>ಸಾವಿರಾರು ಎಕರೆ ಜಮೀನುಗಳಿಗೆ ನೀರುಣಿಸುತ್ತಿದ್ದ ಪಾಪನಕೆರೆ, ಚಿಕ್ಕರಂಗನಾಥ ಕೆರೆ, ದೊಡ್ಡರಂಗನಾಥ ಕೆರೆ, ಸರಗೂರು ಕೆರೆ, ಕೊಂಗಳಗೆರೆ, ತಟ್ಟೆ ಕೆರೆ, ಹಂಪಾಪುರ ಕೆರೆ, ಮುಳ್ಳೂರು ಕೆರೆ, ತೇರಂಬಳ್ಳಿ ಕೆರೆ, ಕುಣಗಳ್ಳಿ ಕೆರೆ, ಕುಂತೂರು ಕೆರೆ, ಕುಣಗಳ್ಳಿ ಕೆರೆಗಳಲ್ಲಿ ನೀರು ತಳ ಸೇರಿವೆ.</p>.<p>ಮಳೆಯಾಶ್ರಿತ ಪ್ರದೇಶದ ರೈತರುಕೃಷಿ ಚಟುವಟಿಕೆಗಾಗಿ ಭೂಮಿ ಹದಗೊಳಿಸಲು ಮಳೆಯನ್ನೇ ಎದುರು ನೋಡುತ್ತಿದ್ದಾರೆ. ಈಗ ಬಿದ್ದಿರುವ ಮಳೆ ಉಳುಮೆ ಮಾಡಲು ಸಾಲದು ಎಂಬುದು ಅವರ ಅಭಿಪ್ರಾಯ.</p>.<p class="Subhead"><strong>ಕೃಷಿ ಚಟುವಟಿಕೆ ಕಡಿಮೆ: </strong>ಮುಂಗಾರು ಪೂರ್ವ ಮಳೆ ಸಾಕಷ್ಟು ಪ್ರಮಾಣದಲ್ಲಿ ಬರದೇ ಇರುವುದರಿಂದತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಕಡಿಮೆಯಾಗಿವೆ.</p>.<p>ಕಳೆದ ಬಾರಿ ಉತ್ತಮ ಮಳೆಯಾಗಿತ್ತು. ಹಾಗಾಗಿ ಏಪ್ರಿಲ್, ಮೇ ತಿಂಗಳುಗಳಲ್ಲಿ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆದಿತ್ತು.</p>.<p class="Subhead"><strong>ದನಕರುಗಳಿಗೆ ನೀರಿಲ್ಲ:</strong>ಕೆರೆ, ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗುತ್ತಿದೆ. ಮೇವಿನ ಸಮಸ್ಯೆಯು ತಲೆದೋರಲು ಆರಂಭಿಸಿದೆ.</p>.<p>ಸದ್ಯ ಜನರು ಮನೆಯ ಕೊಟ್ಟಿಗೆಗಳಲ್ಲಿ ಜಾನುವಾರುಗಳಿಗೆ ಮೇವು ಮತ್ತು ನೀರು ಒದಗಿಸುತ್ತಿದ್ದಾರೆ.ತಾಲ್ಲೂಕಿನ ಪ್ರಕಾಶ್ಪಾಳ್ಯ ಗ್ರಾಮದಲ್ಲಿ ನೀರಿನ ಕೊರತೆಯಿಂದಾಗಿ 2 ಹಸುಗಳು ಮೃತಪಟ್ಟಿದ್ದವು ಎಂದು ಹೇಳುತ್ತಾರೆ ರೈತ ಚಿಕ್ಕಣ್ಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಳ್ಳೇಗಾಲ:</strong> ತಾಲ್ಲೂಕಿನಾದ್ಯಂತ ಮಳೆ ಕಣ್ಣಾಮುಚ್ಚಾಲೆಯಾಡುತ್ತಿದ್ದು,ಬೇಸಿಗೆಯ ರಣಬಿಸಿಲಿಗೆ ಕೆರೆ-ಕಟ್ಟೆಗಳು ಬರಿದಾಗಿವೆ. ಕೃಷಿ ಜಮೀನುಗಳು ಕೂಡ ಬರಡಾಗಲು ಆರಂಭಿಸಿದ್ದು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಸಮಸ್ಯೆ ಕಾಡುವ ಆತಂಕ ಎದುರಾಗಿದೆ.</p>.<p>ಎರಡು ದಿನಗಳಿಂದ ಸಂಜೆ ಹೊತ್ತು ಮಳೆಯಾಗುತ್ತಿರುವುದು ರೈತರಲ್ಲಿ ಆಶಾಭಾವ ಮೂಡಿಸಿದೆ. ಇನ್ನೂ ಕೆಲವು ದಿನಗಳ ಕಾಲ ಈ ರೀತಿ ಮಳೆಯಾದರೆ ತೊಂದರೆ ಇಲ್ಲ. ಇಲ್ಲದಿದ್ದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ ಎಂದು ಹೇಳುತ್ತಾರೆ ಹಿರಿಯರು.</p>.<p>ಬಿರು ಬೇಸಿಗೆಯ ನಡುವೆಯೇ ತಾಲ್ಲೂಕಿನ ಅಲ್ಲಲ್ಲಿ ಮಳೆ ಬಿದ್ದಿದ್ದರೂ ನಗರದ ಸುತ್ತಮುತ್ತ ಒಂದು ತಿಂಗಳಿನಿಂದ ಸರಿಯಾಗಿ ಮಳೆ ಬಾರದ ಕಾರಣ ರೈತರಿಗೆ ನೆಮ್ಮದಿ ಇಲ್ಲದಂತಾಗಿದೆ. ಸುತ್ತಮುತ್ತಲಿನ ಕೆರೆಗಳು ಬರಿದಾಗಿವೆ.</p>.<p>ಸಾವಿರಾರು ಎಕರೆ ಜಮೀನುಗಳಿಗೆ ನೀರುಣಿಸುತ್ತಿದ್ದ ಪಾಪನಕೆರೆ, ಚಿಕ್ಕರಂಗನಾಥ ಕೆರೆ, ದೊಡ್ಡರಂಗನಾಥ ಕೆರೆ, ಸರಗೂರು ಕೆರೆ, ಕೊಂಗಳಗೆರೆ, ತಟ್ಟೆ ಕೆರೆ, ಹಂಪಾಪುರ ಕೆರೆ, ಮುಳ್ಳೂರು ಕೆರೆ, ತೇರಂಬಳ್ಳಿ ಕೆರೆ, ಕುಣಗಳ್ಳಿ ಕೆರೆ, ಕುಂತೂರು ಕೆರೆ, ಕುಣಗಳ್ಳಿ ಕೆರೆಗಳಲ್ಲಿ ನೀರು ತಳ ಸೇರಿವೆ.</p>.<p>ಮಳೆಯಾಶ್ರಿತ ಪ್ರದೇಶದ ರೈತರುಕೃಷಿ ಚಟುವಟಿಕೆಗಾಗಿ ಭೂಮಿ ಹದಗೊಳಿಸಲು ಮಳೆಯನ್ನೇ ಎದುರು ನೋಡುತ್ತಿದ್ದಾರೆ. ಈಗ ಬಿದ್ದಿರುವ ಮಳೆ ಉಳುಮೆ ಮಾಡಲು ಸಾಲದು ಎಂಬುದು ಅವರ ಅಭಿಪ್ರಾಯ.</p>.<p class="Subhead"><strong>ಕೃಷಿ ಚಟುವಟಿಕೆ ಕಡಿಮೆ: </strong>ಮುಂಗಾರು ಪೂರ್ವ ಮಳೆ ಸಾಕಷ್ಟು ಪ್ರಮಾಣದಲ್ಲಿ ಬರದೇ ಇರುವುದರಿಂದತಾಲ್ಲೂಕಿನಾದ್ಯಂತ ಕೃಷಿ ಚಟುವಟಿಕೆಗಳು ಕಡಿಮೆಯಾಗಿವೆ.</p>.<p>ಕಳೆದ ಬಾರಿ ಉತ್ತಮ ಮಳೆಯಾಗಿತ್ತು. ಹಾಗಾಗಿ ಏಪ್ರಿಲ್, ಮೇ ತಿಂಗಳುಗಳಲ್ಲಿ ತಾಲ್ಲೂಕಿನಲ್ಲಿ ಕೃಷಿ ಚಟುವಟಿಕೆ ಬಿರುಸು ಪಡೆದಿತ್ತು.</p>.<p class="Subhead"><strong>ದನಕರುಗಳಿಗೆ ನೀರಿಲ್ಲ:</strong>ಕೆರೆ, ಕೊಳವೆಬಾವಿಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವುದರಿಂದ ಜಾನುವಾರುಗಳಿಗೆ ನೀರಿನ ಕೊರತೆ ಉಂಟಾಗುತ್ತಿದೆ. ಮೇವಿನ ಸಮಸ್ಯೆಯು ತಲೆದೋರಲು ಆರಂಭಿಸಿದೆ.</p>.<p>ಸದ್ಯ ಜನರು ಮನೆಯ ಕೊಟ್ಟಿಗೆಗಳಲ್ಲಿ ಜಾನುವಾರುಗಳಿಗೆ ಮೇವು ಮತ್ತು ನೀರು ಒದಗಿಸುತ್ತಿದ್ದಾರೆ.ತಾಲ್ಲೂಕಿನ ಪ್ರಕಾಶ್ಪಾಳ್ಯ ಗ್ರಾಮದಲ್ಲಿ ನೀರಿನ ಕೊರತೆಯಿಂದಾಗಿ 2 ಹಸುಗಳು ಮೃತಪಟ್ಟಿದ್ದವು ಎಂದು ಹೇಳುತ್ತಾರೆ ರೈತ ಚಿಕ್ಕಣ್ಣ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>