<p>ಕೊಳ್ಳೇಗಾಲ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಸತ್ತೇಗಾಲ ಬಳಿ ಜಲಾವೃತವಾಗಿದೆ.</p>.<p>ಗ್ರಾಮದ ರಾಷ್ಟ್ರೀಯ ಹೆದ್ದಾರಿ 984ರ ಅಭಿವೃದ್ಧಿ ಮಾಡುವಾಗ ರಸ್ತೆಯನ್ನು ಎತ್ತರ ಮಾಡಿರುವುದರಿಂದ ಕೆಳಭಾಗದಲ್ಲಿನ ಉಗನಿಯಾ ಗ್ರಾಮಕ್ಕೆ ಹೋಗುವ ರಸ್ತೆ ಮಳೆ ನೀರಿನಿಂದ ತುಂಬಿಕೊಂಡ ಕಾರಣ ರೈತರಿಗೆ ಹಾಗೂ ವಾಹನ ಸವಾರರಿಗೆ ಸಮಸ್ಯೆ ಉಂಟಾಯಿತು.</p>.<p>ಸುಮಾರು 3 ವರ್ಷಗಳ ಹಿಂದೆ ರಸ್ತೆಯನ್ನು ಎತ್ತರಿಸಿ ರಸ್ತೆ ಅಭಿವೃದ್ಧಿ ಮಾಡುವಾಗ ಸತ್ತೇಗಾಲದಿಂದ ಉಗನಿಯಾ ಗ್ರಾಮಕ್ಕೆ ತೆರಲುವ ರಸ್ತೆಯು ಕೆಳಭಾಗವಾಗಿದ್ದು ಮಳೆ ನೀರು ಬಂದ ಸಂದರ್ಭದಲ್ಲಿ ರಸ್ತೆಯೆಲ್ಲಾ ಸುಮಾರು 4ರಿಂದ 5 ಅಡಿಗಳ ವರೆಗೆ ನೀರು ನಿಂತು ಕೆರೆಯಂತಾಗುತ್ತಿದೆ ಇದರಿಂದ ರೈತರಿಗೆ ಹಾಗೂ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.</p>.<p>ಈ ಭಾಗದಲ್ಲಿ ರೈತರ ಜಮೀನುಗಳಿದ್ದು, ರೈತರು ತಮ್ಮ ಜಮೀನುಗಳಲ್ಲಿ ವ್ಯವಸಾಯ ಮಾಡಲು ಕೃಷಿ ಸಲಕರಣೆಗಳನ್ನು ಗೊಬ್ಬರ ಮತ್ತು ಔಷಧಗಳನ್ನು ಕೊಂಡೊಯ್ಯಲು ಹಾಗೂ ಈ ರಸ್ತೆ ಮೂಲಕ ಉಗನಿಯಾ, ಪಾಳ್ಯ, ದೊಡ್ಡಿಂದುವಾಡಿ ಗ್ರಾಮದ ಮಾರ್ಗವಾಗಿ ಮಲೈ ಮಹದೇಶ್ವರ ಬೆಟ್ಟಕ್ಕೆ ವಾಹನಗಳಲ್ಲಿ ಪಾದಚಾರಿಗಳು ಈ ರಸ್ತೆಯಲ್ಲಿ ತೆರಳು ತುಂಬಾ ತೊಂದರೆ ಉಂಟಾಗುತ್ತಿದೆ.</p>.<p>‘ರಸ್ತೆ ಮಾಡುವಾಗ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವುದರಿಂದ ತುಂಬಾ ತೊಂದರೆಯಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಸತ್ತೇಗಾಲ ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ್ ಸತ್ಯಾದ್ರಿ ಯುವಕರ ಸಂಘದ ಅಧ್ಯಕ್ಷ ಅವಿನಾಶ್ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-37-938984714</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ತಾಲ್ಲೂಕಿನ ಸತ್ತೇಗಾಲ ಬಳಿ ಜಲಾವೃತವಾಗಿದೆ.</p>.<p>ಗ್ರಾಮದ ರಾಷ್ಟ್ರೀಯ ಹೆದ್ದಾರಿ 984ರ ಅಭಿವೃದ್ಧಿ ಮಾಡುವಾಗ ರಸ್ತೆಯನ್ನು ಎತ್ತರ ಮಾಡಿರುವುದರಿಂದ ಕೆಳಭಾಗದಲ್ಲಿನ ಉಗನಿಯಾ ಗ್ರಾಮಕ್ಕೆ ಹೋಗುವ ರಸ್ತೆ ಮಳೆ ನೀರಿನಿಂದ ತುಂಬಿಕೊಂಡ ಕಾರಣ ರೈತರಿಗೆ ಹಾಗೂ ವಾಹನ ಸವಾರರಿಗೆ ಸಮಸ್ಯೆ ಉಂಟಾಯಿತು.</p>.<p>ಸುಮಾರು 3 ವರ್ಷಗಳ ಹಿಂದೆ ರಸ್ತೆಯನ್ನು ಎತ್ತರಿಸಿ ರಸ್ತೆ ಅಭಿವೃದ್ಧಿ ಮಾಡುವಾಗ ಸತ್ತೇಗಾಲದಿಂದ ಉಗನಿಯಾ ಗ್ರಾಮಕ್ಕೆ ತೆರಲುವ ರಸ್ತೆಯು ಕೆಳಭಾಗವಾಗಿದ್ದು ಮಳೆ ನೀರು ಬಂದ ಸಂದರ್ಭದಲ್ಲಿ ರಸ್ತೆಯೆಲ್ಲಾ ಸುಮಾರು 4ರಿಂದ 5 ಅಡಿಗಳ ವರೆಗೆ ನೀರು ನಿಂತು ಕೆರೆಯಂತಾಗುತ್ತಿದೆ ಇದರಿಂದ ರೈತರಿಗೆ ಹಾಗೂ ವಾಹನ ಸವಾರರಿಗೆ ತುಂಬಾ ತೊಂದರೆ ಉಂಟಾಗುತ್ತಿದೆ.</p>.<p>ಈ ಭಾಗದಲ್ಲಿ ರೈತರ ಜಮೀನುಗಳಿದ್ದು, ರೈತರು ತಮ್ಮ ಜಮೀನುಗಳಲ್ಲಿ ವ್ಯವಸಾಯ ಮಾಡಲು ಕೃಷಿ ಸಲಕರಣೆಗಳನ್ನು ಗೊಬ್ಬರ ಮತ್ತು ಔಷಧಗಳನ್ನು ಕೊಂಡೊಯ್ಯಲು ಹಾಗೂ ಈ ರಸ್ತೆ ಮೂಲಕ ಉಗನಿಯಾ, ಪಾಳ್ಯ, ದೊಡ್ಡಿಂದುವಾಡಿ ಗ್ರಾಮದ ಮಾರ್ಗವಾಗಿ ಮಲೈ ಮಹದೇಶ್ವರ ಬೆಟ್ಟಕ್ಕೆ ವಾಹನಗಳಲ್ಲಿ ಪಾದಚಾರಿಗಳು ಈ ರಸ್ತೆಯಲ್ಲಿ ತೆರಳು ತುಂಬಾ ತೊಂದರೆ ಉಂಟಾಗುತ್ತಿದೆ.</p>.<p>‘ರಸ್ತೆ ಮಾಡುವಾಗ ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವುದರಿಂದ ತುಂಬಾ ತೊಂದರೆಯಾಗಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಸರಿಪಡಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದು ಸತ್ತೇಗಾಲ ಗ್ರಾಮದ ಡಾ. ಬಿ.ಆರ್ ಅಂಬೇಡ್ಕರ್ ಸತ್ಯಾದ್ರಿ ಯುವಕರ ಸಂಘದ ಅಧ್ಯಕ್ಷ ಅವಿನಾಶ್ ಒತ್ತಾಯಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-37-938984714</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>