<p>ಕೊಳ್ಳೇಗಾಲ: ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ನಗರದ ತಾತ್ಕಾಲಿಕ ಬಸ್ ನಿಲ್ದಾಣ ಕೆಸರು ಗದ್ದೆಯಾಗಿ ಬದಲಾಗಿದೆ.</p>.<p>ಹೊಸ ಬಸ್ ನಿಲ್ದಾಣ ಕಾಮಗಾರಿ ಆಮೆ ಗತಿಯಲ್ಲಿ ನಡೆಯುತ್ತಿರುವುದರಿಂದ ಪ್ರತಿ ವರ್ಷ ಮಳೆಗಾಲದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಈ ಸಮಸ್ಯೆ ಕಾಡುತ್ತಿದೆ. ಪ್ರಯಾಣಿಕರಿಗೆ ಪರದಾಟ ತಪ್ಪುತ್ತಿಲ್ಲ.</p>.<p>ಮಣ್ಣನ್ನು ಸಮತಟ್ಟು ಮಾಡಿ ತಾತ್ಕಾಲಿಕ ನಿಲ್ದಾಣ ಮಾಡಲಾಗಿದೆ. ಜಲ್ಲಿ, ಟಾರು ಹಾಕಲಾಗಿಲ್ಲ. ಹಾಗಾಗಿ, ಬಸ್ಗಳ ಓಡಾಟದಿಂದ ಗುಂಡಿಗಳು ಬಿದ್ದಿವೆ. ಒಂದು ಮಳೆ ಬಿದ್ದರೂ ಸಾಕು ಗುಂಡಿಗಳಲ್ಲಿ ನೀರು ನಿಂತು ಕೆಸರು ಉಂಟಾಗುತ್ತದೆ.</p>.<p>ಎರಡು ದಿನಗಳಿಂದ ಮಳೆ ಚೆನ್ನಾಗಿ ಬರುತ್ತಿದ್ದು, ಮಣ್ಣಿನ ಮೇಲ್ಪದರ ಕೊಚ್ಚಿ ಹೋಗಿದೆ. ಪ್ರಯಾಣಿಕರು ಕೆಸರಿನಲ್ಲಿ ನಡೆದುಕೊಂಡು ಹೋಗಿ ಬಸ್ ಏರುವುದು, ಕೆಳಗಿಳಿವುದು ಮಾಡಬೇಕಿದೆ. ಬಟ್ಟೆಗೆ ಕೊಳೆಯಾಗುವ ಭಯದಿಂದಲೇ ಜನರು ನಿಲ್ದಾಣದಲ್ಲಿ ನಡೆದಾಡಬೇಕಿದೆ.</p>.<p>‘ಮಳೆ ಬಂದರೆ ಸಾಕು ಬಸ್ ನಿಲ್ದಾಣ ಕೆಸರು ಗದ್ದೆಯಂತಾಗುತ್ತದೆ. ಹಲವು ವರ್ಷಗಳಿಂದ ನಾವು ಈ ಸಮಸ್ಯೆ ಎದುರಿಸುತ್ತಿದ್ದೇವೆ. ಗುಂಡಿಗಳನ್ನು ಮುಚ್ಚಲು ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳು ಕಾಳಜಿವಹಿಸುತ್ತಿಲ್ಲ’ ಎಂದು ಪ್ರಯಾಣಿಕ ಬಸವರಾಜು ಅವರು ದೂರಿದರು.</p>.<p>‘ನೂತನವಾಗಿ ನಿರ್ಮಾಣವಾಗುತ್ತಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಅದನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯೋಚಿಸಬೇಕು’ ಎಂದು ಪ್ರಯಾಣಿಕರಾದ ದೀಪಾ ಮುಕ್ತಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>’ಆವರಣದ ಸುತ್ತಲೂ ಮಳೆನೀರು ಸಮರ್ಪಕವಾಗಿ ಹರಿದು ಹೋಗುತ್ತಿಲ್ಲ. ನಿಲ್ದಾಣದಲ್ಲೇ ನೀರು ನಿಂತು ಕೆಸರು ಗದ್ದೆಯಾಗಿದೆ. ಈ ಕಾರಣದಿಂದ ಸಮಸ್ಯೆಯಾಗುತ್ತಿದೆ’ ಆಟೊ ಚಾಲಕ ನಯಾಜ್ ಪಾಷಾ ಅವರು ತಿಳಿಸಿದರು. </p>.<p class="Subhead">ಶೌಚಾಲಯ ಅವ್ಯವಸ್ಥೆ: ಬಸ್ ನಿಲ್ದಾಣದಲ್ಲಿ ಶೌಚಾಲಯವಿದೆ. ಆದರೆ, ನಿರ್ವಹಣೆ ಮಾಡದಿರುವುದರಿಂದ ಗಬ್ಬು ನಾರುತ್ತಿದೆ. ಶೌಚಾಲಯದ ಸಮೀಪವೇ ಕೆಸರು ಇತುವ ಕಾರಣ ಪುರುಷ ಪ್ರಯಾಣಿಕರು ಅಲ್ಲೇ ಮೂತ್ರ ಮಾಡುತ್ತಿದ್ದು, ವಾತಾವರಣ ಇನ್ನಷ್ಟು ಹದಗೆಟ್ಟಿದೆ. ಮಹಿಳೆಯರು ಮುಜುಗರ ಪಡಬೇಕಾದ ಸ್ಥಿತಿ ಇದೆ. ಅವರು ಕೂಡ ಬಯಲನ್ನೇ ಆಶ್ರಯಿಸಬೇಕಾಗಿದೆ.</p>.<p>ನಿಲ್ದಾಣಕ್ಕೆ ಆವರಣ ಗೋಡೆಗಳಿಲ್ಲದ ಕಾರಣ, ಬೀದಿನಾಯಿಗಳು, ಹಂದಿಗಳು, ಹಸುಗಳು ಬಸ್ಗಳ ಮಧ್ಯೆದಲ್ಲೇ ಓಡಾಡಿಕೊಂಡಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣ ಅಸ್ವಚ್ಛತೆಯ ತಾಣವಾಗಿ ಮಾರ್ಪಟ್ಟಿದೆ. ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯಲಾಗಿದೆ. ಇದರಿಂದ ದುರ್ವಾಸನೆ ಬರುತ್ತಿದೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ ಸುಬ್ರಹ್ಮಣ್ಯ ಅವರಿಗೆ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ.</p>.<p class="Briefhead">ಪ್ರಯಾಣಿಕರಿಗೆ ಮರವೇ ಆಸರೆ</p>.<p>ತಾತ್ಕಾಲಿಕ ಬಸ್ ನಿಲ್ದಾಣದ ಪರಿಸ್ಥಿತಿ ಆ ರೀತಿ ಆದರೆ, ನಗರದಲ್ಲಿ ಬಸ್ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ನೀಡುವ ಬಸ್ ತಂಗುದಾಣೆಗಳೇ ಇಲ್ಲ. ಮರಗಳ ಆಶ್ರಯವನ್ನೇ ಪ್ರಯಾಣಿಕರು ಪಡೆಯಬೇಕಾಗಿದೆ.</p>.<p>‘ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಇದರಿಂದ ತೊಂದರೆಯಾಗುತ್ತಿದೆ.ಚುನಾವಣೆ ಬಂದರೆ ಮಾತ್ರ ನಮ್ಮ ಬಗ್ಗೆ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಾರೆ. ಗೆದ್ದ ನಂತರ ಬೇಕು ಬೇಡಗಳನ್ನು ಕೇಳುವುದಿಲ್ಲ. ಸಮಸ್ಯೆ ಬಗೆಹರಿಸಲೂ ಯತ್ನಿಸುವುದಿಲ್ಲ’ ಎಂದು ಮಹಿಳೆ ಸುನಂದ ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಎರಡು ದಿನಗಳಿಂದ ಸುರಿಯುತ್ತಿರುವ ಜಿಟಿ ಜಿಟಿ ಮಳೆಯಿಂದಾಗಿ ನಗರದ ತಾತ್ಕಾಲಿಕ ಬಸ್ ನಿಲ್ದಾಣ ಕೆಸರು ಗದ್ದೆಯಾಗಿ ಬದಲಾಗಿದೆ.</p>.<p>ಹೊಸ ಬಸ್ ನಿಲ್ದಾಣ ಕಾಮಗಾರಿ ಆಮೆ ಗತಿಯಲ್ಲಿ ನಡೆಯುತ್ತಿರುವುದರಿಂದ ಪ್ರತಿ ವರ್ಷ ಮಳೆಗಾಲದಲ್ಲಿ ತಾತ್ಕಾಲಿಕ ಬಸ್ ನಿಲ್ದಾಣದಲ್ಲಿ ಈ ಸಮಸ್ಯೆ ಕಾಡುತ್ತಿದೆ. ಪ್ರಯಾಣಿಕರಿಗೆ ಪರದಾಟ ತಪ್ಪುತ್ತಿಲ್ಲ.</p>.<p>ಮಣ್ಣನ್ನು ಸಮತಟ್ಟು ಮಾಡಿ ತಾತ್ಕಾಲಿಕ ನಿಲ್ದಾಣ ಮಾಡಲಾಗಿದೆ. ಜಲ್ಲಿ, ಟಾರು ಹಾಕಲಾಗಿಲ್ಲ. ಹಾಗಾಗಿ, ಬಸ್ಗಳ ಓಡಾಟದಿಂದ ಗುಂಡಿಗಳು ಬಿದ್ದಿವೆ. ಒಂದು ಮಳೆ ಬಿದ್ದರೂ ಸಾಕು ಗುಂಡಿಗಳಲ್ಲಿ ನೀರು ನಿಂತು ಕೆಸರು ಉಂಟಾಗುತ್ತದೆ.</p>.<p>ಎರಡು ದಿನಗಳಿಂದ ಮಳೆ ಚೆನ್ನಾಗಿ ಬರುತ್ತಿದ್ದು, ಮಣ್ಣಿನ ಮೇಲ್ಪದರ ಕೊಚ್ಚಿ ಹೋಗಿದೆ. ಪ್ರಯಾಣಿಕರು ಕೆಸರಿನಲ್ಲಿ ನಡೆದುಕೊಂಡು ಹೋಗಿ ಬಸ್ ಏರುವುದು, ಕೆಳಗಿಳಿವುದು ಮಾಡಬೇಕಿದೆ. ಬಟ್ಟೆಗೆ ಕೊಳೆಯಾಗುವ ಭಯದಿಂದಲೇ ಜನರು ನಿಲ್ದಾಣದಲ್ಲಿ ನಡೆದಾಡಬೇಕಿದೆ.</p>.<p>‘ಮಳೆ ಬಂದರೆ ಸಾಕು ಬಸ್ ನಿಲ್ದಾಣ ಕೆಸರು ಗದ್ದೆಯಂತಾಗುತ್ತದೆ. ಹಲವು ವರ್ಷಗಳಿಂದ ನಾವು ಈ ಸಮಸ್ಯೆ ಎದುರಿಸುತ್ತಿದ್ದೇವೆ. ಗುಂಡಿಗಳನ್ನು ಮುಚ್ಚಲು ಶಾಶ್ವತ ದುರಸ್ತಿ ಕಾರ್ಯ ಕೈಗೊಳ್ಳಲು ಅಧಿಕಾರಿಗಳು ಕಾಳಜಿವಹಿಸುತ್ತಿಲ್ಲ’ ಎಂದು ಪ್ರಯಾಣಿಕ ಬಸವರಾಜು ಅವರು ದೂರಿದರು.</p>.<p>‘ನೂತನವಾಗಿ ನಿರ್ಮಾಣವಾಗುತ್ತಿರುವ ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಅದನ್ನು ಶೀಘ್ರವಾಗಿ ಮುಕ್ತಾಯಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಯೋಚಿಸಬೇಕು’ ಎಂದು ಪ್ರಯಾಣಿಕರಾದ ದೀಪಾ ಮುಕ್ತಾ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>’ಆವರಣದ ಸುತ್ತಲೂ ಮಳೆನೀರು ಸಮರ್ಪಕವಾಗಿ ಹರಿದು ಹೋಗುತ್ತಿಲ್ಲ. ನಿಲ್ದಾಣದಲ್ಲೇ ನೀರು ನಿಂತು ಕೆಸರು ಗದ್ದೆಯಾಗಿದೆ. ಈ ಕಾರಣದಿಂದ ಸಮಸ್ಯೆಯಾಗುತ್ತಿದೆ’ ಆಟೊ ಚಾಲಕ ನಯಾಜ್ ಪಾಷಾ ಅವರು ತಿಳಿಸಿದರು. </p>.<p class="Subhead">ಶೌಚಾಲಯ ಅವ್ಯವಸ್ಥೆ: ಬಸ್ ನಿಲ್ದಾಣದಲ್ಲಿ ಶೌಚಾಲಯವಿದೆ. ಆದರೆ, ನಿರ್ವಹಣೆ ಮಾಡದಿರುವುದರಿಂದ ಗಬ್ಬು ನಾರುತ್ತಿದೆ. ಶೌಚಾಲಯದ ಸಮೀಪವೇ ಕೆಸರು ಇತುವ ಕಾರಣ ಪುರುಷ ಪ್ರಯಾಣಿಕರು ಅಲ್ಲೇ ಮೂತ್ರ ಮಾಡುತ್ತಿದ್ದು, ವಾತಾವರಣ ಇನ್ನಷ್ಟು ಹದಗೆಟ್ಟಿದೆ. ಮಹಿಳೆಯರು ಮುಜುಗರ ಪಡಬೇಕಾದ ಸ್ಥಿತಿ ಇದೆ. ಅವರು ಕೂಡ ಬಯಲನ್ನೇ ಆಶ್ರಯಿಸಬೇಕಾಗಿದೆ.</p>.<p>ನಿಲ್ದಾಣಕ್ಕೆ ಆವರಣ ಗೋಡೆಗಳಿಲ್ಲದ ಕಾರಣ, ಬೀದಿನಾಯಿಗಳು, ಹಂದಿಗಳು, ಹಸುಗಳು ಬಸ್ಗಳ ಮಧ್ಯೆದಲ್ಲೇ ಓಡಾಡಿಕೊಂಡಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಬಸ್ ನಿಲ್ದಾಣದ ಆವರಣ ಅಸ್ವಚ್ಛತೆಯ ತಾಣವಾಗಿ ಮಾರ್ಪಟ್ಟಿದೆ. ಆವರಣದಲ್ಲಿ ಎಲ್ಲೆಂದರಲ್ಲಿ ಕಸ ಸುರಿಯಲಾಗಿದೆ. ಇದರಿಂದ ದುರ್ವಾಸನೆ ಬರುತ್ತಿದೆ.</p>.<p>ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ಕೆಎಸ್ಆರ್ಟಿಸಿ ಡಿಪೊ ಮ್ಯಾನೇಜರ್ ಸುಬ್ರಹ್ಮಣ್ಯ ಅವರಿಗೆ ಕರೆ ಮಾಡಿದರೂ ಸಂಪರ್ಕ ಸಾಧ್ಯವಾಗಲಿಲ್ಲ.</p>.<p class="Briefhead">ಪ್ರಯಾಣಿಕರಿಗೆ ಮರವೇ ಆಸರೆ</p>.<p>ತಾತ್ಕಾಲಿಕ ಬಸ್ ನಿಲ್ದಾಣದ ಪರಿಸ್ಥಿತಿ ಆ ರೀತಿ ಆದರೆ, ನಗರದಲ್ಲಿ ಬಸ್ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಬಿಸಿಲು, ಮಳೆಯಿಂದ ರಕ್ಷಣೆ ನೀಡುವ ಬಸ್ ತಂಗುದಾಣೆಗಳೇ ಇಲ್ಲ. ಮರಗಳ ಆಶ್ರಯವನ್ನೇ ಪ್ರಯಾಣಿಕರು ಪಡೆಯಬೇಕಾಗಿದೆ.</p>.<p>‘ಹಿರಿಯ ನಾಗರಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಇದರಿಂದ ತೊಂದರೆಯಾಗುತ್ತಿದೆ.ಚುನಾವಣೆ ಬಂದರೆ ಮಾತ್ರ ನಮ್ಮ ಬಗ್ಗೆ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಕಾಳಜಿ ವಹಿಸುತ್ತಾರೆ. ಗೆದ್ದ ನಂತರ ಬೇಕು ಬೇಡಗಳನ್ನು ಕೇಳುವುದಿಲ್ಲ. ಸಮಸ್ಯೆ ಬಗೆಹರಿಸಲೂ ಯತ್ನಿಸುವುದಿಲ್ಲ’ ಎಂದು ಮಹಿಳೆ ಸುನಂದ ಅವರು ದೂರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>