ಚಾಮರಾಜನಗರ: ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಈ ಬಾರಿಯ ಯುಗಾದಿ ಜಾತ್ರೆಯನ್ನು ಅತ್ಯಂತ ಸಾಂಪ್ರದಾಯಿಕವಾಗಿ ಮತ್ತು ಸ್ಥಳೀಯವಾಗಿ ನಡೆಸಲು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ನಿರ್ಧರಿಸಿದೆ.
ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮದ ಭಾಗವಾಗಿ ಜಿಲ್ಲಾಡಳಿತದ ಸೂಚನೆ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯ ವಿಭವ ಸ್ವಾಮಿ ಹೇಳಿದ್ದಾರೆ.
ಇದೇ 21ರಿಂದ 25ರ ವರೆಗೆ ಜಾತ್ರೆ ನಿಗದಿಯಾಗಿತ್ತು. ಈ ಅವಧಿಯಲ್ಲಿ ಕೊಠಡಿಗಳು, ಡಾರ್ಮೆಟರಿ ಲಭ್ಯವಿರುವುದಿಲ್ಲ. ರಸ್ತೆಗಳಲ್ಲಿ, ರಂಗ ಮಂದಿರದಲ್ಲಿ ಭಕ್ತರು ಗುಂಪು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಭಕ್ತರು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.