ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ರೈಲ್ವೆ ಇಲಾಖೆಯ ಕಾರ್ಯಕ್ರಮಗಳನ್ನು ಬಿಟ್ಟರೆ ಯಾವ ಹೊಸ ಯೋಜನೆಯನ್ನೂ ಈ ಡಬಲ್ ಎಂಜಿನ್ ಸರ್ಕಾರ ಕಾರ್ಯಗತ ಮಾಡಿಲ್ಲ. ದಕ್ಷಿಣ ಪದವೀಧರರ ಕ್ಷೇತ್ರ ಚುನಾವಣೆ ಪ್ರಚಾರ ಸಂದರ್ಭದಲ್ಲಿ, 'ಬಿಜೆಪಿ ಅಭ್ಯರ್ಥಿ ರವಿಶಂಕರ್ ಗೆಲ್ಲಿಸಿ ಮೈಸೂರಿಗೆ 21 ರಂದು ಆಗಮಿಸುವ ಪ್ರಧಾನಿ ಅವರಿಗೆ ಗೆಲುವಿನ ಉಡುಗೊರೆ ಕೊಡಬೇಕು" ಎಂದು ಬಿಜೆಪಿ ಮುಖಂಡರು ಪ್ರಚಾರ ಮಾಡಿದ್ದರು. ಆದರೆ ಇಲ್ಲಿನ ಜನರು ಸೋಲಿನ ಉಡಗೊರೆ ನೀಡಿ ಬಿಜೆಪಿಗೆ ಮುಖಭಂಗ ಮಾಡಿದ್ದಾರೆ’ ಎಂದು ಕುಟುಕಿದರು.