ರಾಜ್ಯದ ಅಭಿವೃದ್ಧಿ ಮತ್ತು ಕ್ಷೇತ್ರಗಳಲ್ಲಿ ಆಗಬೇಕಾದ ಕೆಲಸಗಳ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನಿಸಬೇಕಾದ ಸಂಸದರು, ಪ್ರಧಾನಿ ಮೋದಿ ಮುಂದೆ ಸುಮ್ಮನೆ ಕುಳಿತುಕೊಳ್ಳುತ್ತಾರೆ. ಐದು ವರ್ಷಗಳಲ್ಲಿ ಸಂಸತ್ತಿನಲ್ಲಿ ಒಮ್ಮೆಯೂ ಮಾತನಾಡದ ಒಂಬತ್ತು ಸಂಸದರಿದ್ದು, ಅದರಲ್ಲಿ ನಮ್ಮ ರಾಜ್ಯದವರೇ ನಾಲ್ವರಿದ್ದಾರೆ. ವಿ.ಶ್ರೀನಿವಾಸ ಪ್ರಸಾದ್, ಅನಂತಕುಮಾರ್ ಹೆಗಡೆ, ಬಿ.ಎನ್.ಬಚ್ಚೇಗೌಡ ಮತ್ತು ರಮೇಶ್ ಜಿಗಜಿಣಗಿ ಅವರು ಸುಮ್ಮನೆ ಕುಳಿತಿದ್ದಾರೆ’ ಎಂದು ಕಿಡಿ ಕಾರಿದರು.