<p>ಕೊಳ್ಳೇಗಾಲ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲೂ ಸ್ಪರ್ಧಿಸುತ್ತದೆ. ಆಸಕ್ತ ಸ್ಪರ್ಧಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತಿದೆ’ ಎಂದು ಕೆಆರ್ಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಗಣೇಶ್ ಹೇಳಿದರು.</p>.<p>‘ಜ.6, 7ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಈ ವಿಚಾರ ಕುರಿತು ಕಳೆದ ತಿಂಗಳು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು. ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ ₹5000 ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ₹10,000 ಸಂದರ್ಶನ ಶುಲ್ಕವಿರುತ್ತದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂದರ್ಶನದ ನಂತರ, ರಾಜ್ಯ ಸಮಿತಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ ಮೊ.9611720802 ಸಂಖ್ಯೆಗೆ ಸಂಪರ್ಕಿಸಬಹುದು ಎಂದರು.</p>.<p>ಕೆಆರ್ಎಸ್ ಜಿಲ್ಲಾ ಕಾರ್ಯದರ್ಶಿ ಮಧುನಾಯಕ್, ಚಂದ್ರಶೇಖರ್, ಶ್ರೀನಿವಾಸ್ ಬೂದಬಾಳು, ಸದಸ್ಯ ರವಿಕುಮಾರ್, ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ (ಕೆಆರ್ಎಸ್) ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 28 ಕ್ಷೇತ್ರದಲ್ಲೂ ಸ್ಪರ್ಧಿಸುತ್ತದೆ. ಆಸಕ್ತ ಸ್ಪರ್ಧಿಗಳನ್ನು ಸಂದರ್ಶನಕ್ಕೆ ಆಹ್ವಾನಿಸಲಾಗುತ್ತಿದೆ’ ಎಂದು ಕೆಆರ್ಎಸ್ ಪಕ್ಷದ ಜಿಲ್ಲಾಧ್ಯಕ್ಷ ಎಂ.ಗಣೇಶ್ ಹೇಳಿದರು.</p>.<p>‘ಜ.6, 7ರಂದು ಪಕ್ಷದ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಈ ವಿಚಾರ ಕುರಿತು ಕಳೆದ ತಿಂಗಳು ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಆಸಕ್ತರು ಸಂದರ್ಶನಕ್ಕೆ ಹಾಜರಾಗಬಹುದು. ಪಕ್ಷದ ಹಾಲಿ ಸದಸ್ಯರಾಗಿರುವವರಿಗೆ ₹5000 ಹಾಗೂ ಹೊಸದಾಗಿ ಪಕ್ಷ ಸೇರಿ ಸಂದರ್ಶನಕ್ಕೆ ಹಾಜರಾಗುವವರಿಗೆ ₹10,000 ಸಂದರ್ಶನ ಶುಲ್ಕವಿರುತ್ತದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಸಂದರ್ಶನದ ನಂತರ, ರಾಜ್ಯ ಸಮಿತಿ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಘೋಷಿಸುತ್ತದೆ. ಈ ವಿಚಾರವಾಗಿ ಹೆಚ್ಚಿನ ಮಾಹಿತಿಗಾಗಿ ಮೊ.9611720802 ಸಂಖ್ಯೆಗೆ ಸಂಪರ್ಕಿಸಬಹುದು ಎಂದರು.</p>.<p>ಕೆಆರ್ಎಸ್ ಜಿಲ್ಲಾ ಕಾರ್ಯದರ್ಶಿ ಮಧುನಾಯಕ್, ಚಂದ್ರಶೇಖರ್, ಶ್ರೀನಿವಾಸ್ ಬೂದಬಾಳು, ಸದಸ್ಯ ರವಿಕುಮಾರ್, ರಾಜಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>