<p><strong>ಹನೂರು:</strong> ಎಲ್ಲೆಮಾಳ ಬಳಿ ಶನಿವಾರ ಸಾರಿಗೆ ಸಂಸ್ಥೆಯ ಎರಡು ಬಸ್ಗಳು ಮುಖಮುಖಿ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಹದೇಶ್ವರ ಬೆಟ್ಟದಲ್ಲಿಯೂ ಈಚೆಗೆ ಬಸ್ಗಳ ಮುಖಮುಖಿ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದರು. </p>.<p>ಶನಿವಾರ ಮೈಸೂರು ಡಿಪೋಗೆ ಸೇರಿದ ಬಸ್ ಮತ್ತು ಕೊಳ್ಳೇಗಾಲ ಡಿಪೋ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್ಗಳು ಜಖಂಗೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಕೆಲಕಾಲ ಪರದಾಡಿದರು.</p>.<h2> ವ್ಯಕ್ತಿ ಸಾವು</h2>.<p>ಹನೂರು ಪಟ್ಟಣದ ಹೊರವಲಯದಲ್ಲಿ ಶನಿವಾರ ಕೆಎಸ್ಆರ್ಟಿಸಿ ಬಸ್ ಬೈಕ್ ನಡುವಿನ ಅಪಘಾತದಲ್ಲಿ ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.</p>.<p>ಕನಕಪುರ ತಾಲ್ಲೂಕಿನ ಬಿಜ್ಜಳ್ಳಿ ಗ್ರಾಮದ ಪರಮೇಶ್ (45) ಮೃತರು. ಕಾಲ್ನಡಿಗೆಯ ಭಕ್ತರಿಗೆ ಟಾರ್ಪಲ್ ಮಾರಾಟಕ್ಕಾಗಿ ಮಹದೇಶ್ವರ ಬೆಟ್ಟದತ್ತ ಬಂದಿದ್ದ ಅವರು, ವ್ಯಾಪಾರ ಹಾಗೂ ಮಾದಪ್ಪನ ದರ್ಶನ ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹನೂರು:</strong> ಎಲ್ಲೆಮಾಳ ಬಳಿ ಶನಿವಾರ ಸಾರಿಗೆ ಸಂಸ್ಥೆಯ ಎರಡು ಬಸ್ಗಳು ಮುಖಮುಖಿ ಡಿಕ್ಕಿಯಾಗಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಮಹದೇಶ್ವರ ಬೆಟ್ಟದಲ್ಲಿಯೂ ಈಚೆಗೆ ಬಸ್ಗಳ ಮುಖಮುಖಿ ಡಿಕ್ಕಿಯಾಗಿ ಪ್ರಯಾಣಿಕರು ಗಾಯಗೊಂಡಿದ್ದರು. </p>.<p>ಶನಿವಾರ ಮೈಸೂರು ಡಿಪೋಗೆ ಸೇರಿದ ಬಸ್ ಮತ್ತು ಕೊಳ್ಳೇಗಾಲ ಡಿಪೋ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಬಸ್ಗಳು ಜಖಂಗೊಂಡಿದ್ದು, ಪ್ರಯಾಣಿಕರು ಪಾರಾಗಿದ್ದಾರೆ. ವಾಹನ ದಟ್ಟಣೆ ಉಂಟಾಗಿ ವಾಹನ ಸವಾರರು ಕೆಲಕಾಲ ಪರದಾಡಿದರು.</p>.<h2> ವ್ಯಕ್ತಿ ಸಾವು</h2>.<p>ಹನೂರು ಪಟ್ಟಣದ ಹೊರವಲಯದಲ್ಲಿ ಶನಿವಾರ ಕೆಎಸ್ಆರ್ಟಿಸಿ ಬಸ್ ಬೈಕ್ ನಡುವಿನ ಅಪಘಾತದಲ್ಲಿ ಸವಾರ ಸ್ಥಳದಲ್ಲಿ ಸಾವಿಗೀಡಾಗಿದ್ದಾರೆ.</p>.<p>ಕನಕಪುರ ತಾಲ್ಲೂಕಿನ ಬಿಜ್ಜಳ್ಳಿ ಗ್ರಾಮದ ಪರಮೇಶ್ (45) ಮೃತರು. ಕಾಲ್ನಡಿಗೆಯ ಭಕ್ತರಿಗೆ ಟಾರ್ಪಲ್ ಮಾರಾಟಕ್ಕಾಗಿ ಮಹದೇಶ್ವರ ಬೆಟ್ಟದತ್ತ ಬಂದಿದ್ದ ಅವರು, ವ್ಯಾಪಾರ ಹಾಗೂ ಮಾದಪ್ಪನ ದರ್ಶನ ಮುಗಿಸಿಕೊಂಡು ಸ್ವಗ್ರಾಮಕ್ಕೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ಸಂಭವಿಸಿದೆ. ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>